<p><strong>ಚಂಡಿಗಢ</strong>: ಭಾರತದ ಗುರುದಾಸ್ಪುರದ ಡೇರಾ ಬಾಬಾ ನಾನಕ್ ಸಾಹಿಬ್ ಮತ್ತು ಪಾಕಿಸ್ತಾನದ ಕರ್ತಾರ್ಪುರದಲ್ಲಿರುವ ದರ್ಬಾರ್ ಸಾಹಿಬ್ ಗುರುದ್ವಾರಕ್ಕೆ ಸಂಪರ್ಕ ಕಲ್ಪಿಸುವ ‘ಕರ್ತಾರ್ಪುರ ಕಾರಿಡಾರ್’ ಅನ್ನು ದಿನದ ಮಟ್ಟಿಗೆ ಮುಚ್ಚಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.</p><p>ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಯೋತ್ಪಾದಕರ ವಿರುದ್ಧ ‘ಆಪರೇಷನ್ ಸಿಂಧೂರ’ ಸೇನಾ ಕಾರ್ಯಾಚರಣೆ ನಡೆಸಿದ ಬೆನ್ನಲ್ಲೇ ಈ ಕ್ರಮ ತೆಗೆದುಕೊಳ್ಳಲಾಗಿದೆ.</p><p>‘ಕರ್ತಾರ್ಪುರ ಕಾರಿಡಾರ್ ಅನ್ನು ಬಂದ್ ಮಾಡಲಾಗಿದ್ದು, ದರ್ಬಾರ್ ಸಾಹಿಬ್ ಗುರುದ್ವಾರಕ್ಕೆ ಯಾತ್ರಾರ್ಥಿಗಳು ಭೇಟಿ ನೀಡುವುದನ್ನು ನಿರ್ಬಂಧಿಸಲಾಗಿದೆ’ ಎಂದು ಅವರು ತಿಳಿಸಿದ್ದಾರೆ.</p><p>ಏತನ್ಮಧ್ಯೆ, ಪ್ರಾರ್ಥನೆ ಸಲ್ಲಿಸಲು ಗುರುದ್ವಾರಕ್ಕೆ ಹೊರಟಿದ್ದ ಅನೇಕ ಯಾತ್ರಿಕರನ್ನು ಕರ್ತಾರ್ಪುರ ಕಾರಿಡಾರ್ ತಲುಪಿದ ತಕ್ಷಣ ವಾಪಾಸ್ಸಾಗಲು ತಿಳಿಸಲಾಗಿದೆ.</p><p>ಭಾರತ ಮತ್ತು ಪಾಕಿಸ್ತಾನದ ನಡುವಿನ ಒಪ್ಪಂದದ ಪ್ರಕಾರ, ದಿನಕ್ಕೆ 5 ಸಾವಿರ ಯಾತ್ರಿಕರು ಐತಿಹಾಸಿಕ ಗುರುದ್ವಾರದಲ್ಲಿ ಪ್ರಾರ್ಥನೆ ಸಲ್ಲಿಸಲು ಪಾಕಿಸ್ತಾನಕ್ಕೆ ಹೋಗಲು ಅವಕಾಶ ಮಾಡಿಕೊಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡಿಗಢ</strong>: ಭಾರತದ ಗುರುದಾಸ್ಪುರದ ಡೇರಾ ಬಾಬಾ ನಾನಕ್ ಸಾಹಿಬ್ ಮತ್ತು ಪಾಕಿಸ್ತಾನದ ಕರ್ತಾರ್ಪುರದಲ್ಲಿರುವ ದರ್ಬಾರ್ ಸಾಹಿಬ್ ಗುರುದ್ವಾರಕ್ಕೆ ಸಂಪರ್ಕ ಕಲ್ಪಿಸುವ ‘ಕರ್ತಾರ್ಪುರ ಕಾರಿಡಾರ್’ ಅನ್ನು ದಿನದ ಮಟ್ಟಿಗೆ ಮುಚ್ಚಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.</p><p>ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಯೋತ್ಪಾದಕರ ವಿರುದ್ಧ ‘ಆಪರೇಷನ್ ಸಿಂಧೂರ’ ಸೇನಾ ಕಾರ್ಯಾಚರಣೆ ನಡೆಸಿದ ಬೆನ್ನಲ್ಲೇ ಈ ಕ್ರಮ ತೆಗೆದುಕೊಳ್ಳಲಾಗಿದೆ.</p><p>‘ಕರ್ತಾರ್ಪುರ ಕಾರಿಡಾರ್ ಅನ್ನು ಬಂದ್ ಮಾಡಲಾಗಿದ್ದು, ದರ್ಬಾರ್ ಸಾಹಿಬ್ ಗುರುದ್ವಾರಕ್ಕೆ ಯಾತ್ರಾರ್ಥಿಗಳು ಭೇಟಿ ನೀಡುವುದನ್ನು ನಿರ್ಬಂಧಿಸಲಾಗಿದೆ’ ಎಂದು ಅವರು ತಿಳಿಸಿದ್ದಾರೆ.</p><p>ಏತನ್ಮಧ್ಯೆ, ಪ್ರಾರ್ಥನೆ ಸಲ್ಲಿಸಲು ಗುರುದ್ವಾರಕ್ಕೆ ಹೊರಟಿದ್ದ ಅನೇಕ ಯಾತ್ರಿಕರನ್ನು ಕರ್ತಾರ್ಪುರ ಕಾರಿಡಾರ್ ತಲುಪಿದ ತಕ್ಷಣ ವಾಪಾಸ್ಸಾಗಲು ತಿಳಿಸಲಾಗಿದೆ.</p><p>ಭಾರತ ಮತ್ತು ಪಾಕಿಸ್ತಾನದ ನಡುವಿನ ಒಪ್ಪಂದದ ಪ್ರಕಾರ, ದಿನಕ್ಕೆ 5 ಸಾವಿರ ಯಾತ್ರಿಕರು ಐತಿಹಾಸಿಕ ಗುರುದ್ವಾರದಲ್ಲಿ ಪ್ರಾರ್ಥನೆ ಸಲ್ಲಿಸಲು ಪಾಕಿಸ್ತಾನಕ್ಕೆ ಹೋಗಲು ಅವಕಾಶ ಮಾಡಿಕೊಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>