ಅಪಘಾತ ನಡೆದ ಸೆಕುಂಡುಗಳಲ್ಲಿ ಸ್ಥಳದಲ್ಲಿದ್ದ ಬೈಕ್ ಮತ್ತು ಕಾರಿನ ಸವಾರರು ನುಜ್ಜುಗುಜ್ಜಾದ ಆಟೊದಿಂದ ಮಕ್ಕಳನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. 8 ಮಕ್ಕಳಲ್ಲಿ ಮೂವರಿಗೆ ಹೆಚ್ಚು ಗಾಯಗಳಾಗಿದ್ದು, ಒಬ್ಬ ವಿದ್ಯಾರ್ಥಿ ಸ್ಥಿತಿ ಗಂಭೀರವಾಗಿದೆ, ಚಿಕಿತ್ಸೆ ನೀಡಲಾಗುತ್ತಿದೆ, ಉಳಿದವರನ್ನು ಡಿಸ್ಚಾರ್ಜ್ ಮಾಡಿ ಮನೆಗೆ ಕಳುಹಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಶ್ರೀನಿವಾಸ್ ರಾವ್ ಹೇಳಿದ್ದಾರೆ.
ಆಟೊದಲ್ಲಿ ನಿಗದಿಗಿಂತ ಹೆಚ್ಚಿನ ಮಕ್ಕಳನ್ನು ಕರೆದೊಯ್ಯಲಾಗುತ್ತಿತ್ತು, ಆಟೊ ಮತ್ತು ಟ್ರಕ್ ಡ್ರೈವರ್ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದೂ ಅವರು ತಿಳಿಸಿದ್ದಾರೆ