ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಮಕುಸಿತ: ಭಾರತ–ಟಿಬೆಟ್‌ ರಸ್ತೆ ಬಂದ್‌

Last Updated 26 ಜನವರಿ 2023, 16:03 IST
ಅಕ್ಷರ ಗಾತ್ರ

ಶಿಮ್ಲಾ: ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಗುರುವಾರ ಹಿಮಕುಸಿತ ಸಂಭವಿಸಿದ್ದು, ಭಾರತ (ಹಿಂದೂಸ್ತಾನ್)-ಟಿಬೆಟ್ ರಸ್ತೆಯನ್ನು ನಿರ್ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೂಹ್ ಬಳಿಯ ಟಿಂಕು ನಲ್ಹಾ ಬಳಿ ಹಿಮಕುಸಿತ ಸಂಭವಿಸಿದ್ದು, ರಸ್ತೆ (ರಾಷ್ಟ್ರೀಯ ಹೆದ್ದಾರಿ 5) ತೆರವು ಕಾರ್ಯ ನಡೆಯುತ್ತಿದೆ ಎಂದೂ ಅವರು ಹೇಳಿದ್ದಾರೆ.

ಅಧಿಕಾರಿಗಳ ಪ್ರಕಾರ, 4 ರಾಷ್ಟ್ರೀಯ ಹೆದ್ದಾರಿ ಸೇರಿ, ರಾಜ್ಯದ ಇತರ ಭಾಗಗಳಲ್ಲಿ ಹಿಮಪಾತದಿಂದ 256 ರಸ್ತೆಗಳಲ್ಲಿ ಸಂಚಾರಕ್ಕೆ ಅಡ್ಡಿಯಾಗಿದೆ. ಅದರ ಜೊತೆಗೆ 1,024 ಟ್ರಾನ್ಸ್‌ಫಾರ್ಮರ್‌ಗಳು ಸ್ಥಗಿತಗೊಂಡಿವೆ.

ಹಿಮಾಚಲ ಪ್ರದೇಶದ ಅನೇಕ ಎತ್ತರ ಪ್ರದೇಶಗಳಲ್ಲಿ ಜ.29,30ರಂದು ತೀವ್ರ ಮಳೆ ಮತ್ತು ಹಿಮ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದೆ.

ಮಳೆಯಿಂದ ಸಸ್ಯಗಳು ಕೊಳೆಯಲು ಅಥವಾ ಗೋಧಿ ಮತ್ತು ತರಕಾರಿಗಳಲ್ಲಿ ಮೊಳಕೆಯೊಡೆಯಲು ಕಾರಣವಾಗಬಹುದು, ನೀರು ನಿಲ್ಲದಂತೆ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳು ರೈತರಿಗೆ ಸಲಹೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT