‘ಸುರಕ್ಷಿತ ವಿಮಾನ ಸೇವೆ ಒದಗಿಸುವ ವೇಳೆ ವಿಮಾನಯಾನ ಸಿಬ್ಬಂದಿ, ಎಂಜಿನಿಯರ್, ತಂತ್ರಜ್ಞರು ಸೇರಿದಂತೆ ಮುಂಚೂಣಿ ಕಾರ್ಯಕರ್ತರಿಗೆ ಕೋವಿಡ್ ಅಪಾಯಗಳು ಎದುರಾಗಬಹುದು. ಹಾಗಾಗಿ ವಿಮಾನಯಾನ ಕ್ಷೇತ್ರದ ಈ ಕಾರ್ಯಕರ್ತರಿಗೂ ಆದ್ಯತೆಯ ಆಧಾರದಲ್ಲಿ ಕೋವಿಡ್ ಲಸಿಕೆ ನೀಡಬೇಕು’ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರಿಗೆ ಬರೆದ ಪತ್ರದಲ್ಲಿ ಹೇಳಲಾಗಿದೆ.