<p><strong>ನವದೆಹಲಿ:</strong> ಇರಾನ್ನ ಪರಮೋಚ್ಚ ನಾಯಕ ಆಯತೊಲ್ಲಾ ಖಮೇನಿ ಅವರ ಸಾವಿಗೆ ಭಾರತ ಗುರುವಾರ ಸಂತಾಪ ಸೂಚಿಸಿದೆ.</p><p>ಖಮೇನಿ ಅವರು ಮೃತಪಟ್ಟು 5 ದಿನಗಳು ಗತಿಸಿದ ಬಳಿಕ, ಭಾರತ ಸಂತಾಪ ವ್ಯಕ್ತಪಡಿಸಿದೆ. ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಫೆಬ್ರುವರಿ 28ರಂದು ಖಮೇನಿ ಹತರಾಗಿದ್ದಾರೆ. </p><p>ಇಲ್ಲಿನ ಇರಾನ್ ರಾಯಭಾರ ಕಚೇರಿಗೆ ಭೇಟಿ ನೀಡಿದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು, ಭಾರತದಲ್ಲಿನ ಇರಾನ್ ರಾಯಭಾರಿ ಮೊಹಮ್ಮದ್ ಫಥಾಲಿ ಅವರೊಂದಿಗೆ ಮಾತುಕತೆ ನಡೆಸಿ, ಭಾರತದ ಸಂತಾಪ ತಿಳಿಸಿದರು. ನಂತರ, ಸಂತಾಪ ಸೂಚಕ ಪುಸ್ತಕದಲ್ಲಿ ಶೋಕ ಸಂದೇಶ ಬರೆದು, ಸಹಿ ಹಾಕಿದರು.</p><p>ಮತ್ತೊಂದೆಡೆ, ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಕೂಡ ಪ್ರತ್ಯೇಕವಾಗಿ ಸಂತಾಪ ಸೂಚಿಸಿದ್ದಾರೆ.</p><p>ಇರಾನ್ ವಿದೇಶಾಂಗ ಸಚಿವ ಸೈಯದ್ ಅಬ್ಬಾಸ್ ಅರಾಘ್ಚಿ ಅವರೊಂದಿಗೆ ಜೈಶಂಕರ್ ದೂರವಾಣಿ ಮೂಲಕ ಮಾತನಾಡಿದ್ದಾರೆ. ಈ ವೇಳೆ, ಉಭಯ ನಾಯಕರ ನಡುವಿನ ಮಾತುಕತೆ ಕುರಿತು ಹೆಚ್ಚಿನ ವಿವರಗಳು ಲಭ್ಯ ಇಲ್ಲ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಇರಾನ್ನ ಪರಮೋಚ್ಚ ನಾಯಕ ಆಯತೊಲ್ಲಾ ಖಮೇನಿ ಅವರ ಸಾವಿಗೆ ಭಾರತ ಗುರುವಾರ ಸಂತಾಪ ಸೂಚಿಸಿದೆ.</p><p>ಖಮೇನಿ ಅವರು ಮೃತಪಟ್ಟು 5 ದಿನಗಳು ಗತಿಸಿದ ಬಳಿಕ, ಭಾರತ ಸಂತಾಪ ವ್ಯಕ್ತಪಡಿಸಿದೆ. ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಫೆಬ್ರುವರಿ 28ರಂದು ಖಮೇನಿ ಹತರಾಗಿದ್ದಾರೆ. </p><p>ಇಲ್ಲಿನ ಇರಾನ್ ರಾಯಭಾರ ಕಚೇರಿಗೆ ಭೇಟಿ ನೀಡಿದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು, ಭಾರತದಲ್ಲಿನ ಇರಾನ್ ರಾಯಭಾರಿ ಮೊಹಮ್ಮದ್ ಫಥಾಲಿ ಅವರೊಂದಿಗೆ ಮಾತುಕತೆ ನಡೆಸಿ, ಭಾರತದ ಸಂತಾಪ ತಿಳಿಸಿದರು. ನಂತರ, ಸಂತಾಪ ಸೂಚಕ ಪುಸ್ತಕದಲ್ಲಿ ಶೋಕ ಸಂದೇಶ ಬರೆದು, ಸಹಿ ಹಾಕಿದರು.</p><p>ಮತ್ತೊಂದೆಡೆ, ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಕೂಡ ಪ್ರತ್ಯೇಕವಾಗಿ ಸಂತಾಪ ಸೂಚಿಸಿದ್ದಾರೆ.</p><p>ಇರಾನ್ ವಿದೇಶಾಂಗ ಸಚಿವ ಸೈಯದ್ ಅಬ್ಬಾಸ್ ಅರಾಘ್ಚಿ ಅವರೊಂದಿಗೆ ಜೈಶಂಕರ್ ದೂರವಾಣಿ ಮೂಲಕ ಮಾತನಾಡಿದ್ದಾರೆ. ಈ ವೇಳೆ, ಉಭಯ ನಾಯಕರ ನಡುವಿನ ಮಾತುಕತೆ ಕುರಿತು ಹೆಚ್ಚಿನ ವಿವರಗಳು ಲಭ್ಯ ಇಲ್ಲ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>