<p><strong>ನವದೆಹಲಿ:</strong> ರಾಜಕೀಯವಾಗಿ ಭಾರಿ ಮಹತ್ವ ಪಡೆದುಕೊಂಡಿರುವ ಅಯೋಧ್ಯೆಯ ರಾಮಜನ್ಮಭೂಮಿ–ಬಾಬರಿ ಮಸೀದಿ ನಿವೇಶನ ವಿವಾದವನ್ನು ಸಂಧಾನದ ಮೂಲಕ ಇತ್ಯರ್ಥ ಮಾಡಬೇಕೇ ಎಂಬ ಆದೇಶವನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ.</p>.<p>ಬುಧವಾರ ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠವು ಕೂಡಲೇ ಸಂಧಾನಕಾರರ ಹೆಸರು ಸೂಚಿಸುವಂತೆ ಎಲ್ಲ ಕಕ್ಷಿದಾರರಿಗೆ ತಿಳಿಸಿತು.</p>.<p>ದಶಕಗಳಷ್ಟು ಹಳೆಯದಾದ ಭೂ ಒಡೆತನ ವಿವಾದವನ್ನು ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳುವಂತೆ ಹೇಳಿದ ಪೀಠ, ಹಳಸಿರುವ ಸಂಬಂಧ ಸುಧಾರಿಸಲು ಇದು ನೆರವಾಗಬಹುದು ಎಂದು ಸಲಹೆ ನೀಡಿದೆ.</p>.<p>ನ್ಯಾಯಮೂರ್ತಿಗಳಾದ ಎಸ್.ಎ. ಬೊಬ್ಡೆ, ಡಿ.ವೈ. ಚಂದ್ರಚೂಡ್, ಅಶೋಕ್ ಭೂಷಣ್ ಮತ್ತು ಎಸ್.ಎ. ನಜೀರ್ ಅವರು ಸಂವಿಧಾನ ಪೀಠದಲ್ಲಿದ್ದಾರೆ.</p>.<p class="Subhead">ಸಂಧಾನಕ್ಕೆ ನಕಾರ: ವಿವಾದವನ್ನು ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳುವ ಕೋರ್ಟ್ ಸಲಹೆಯನ್ನು ನಿರ್ಮೋಹಿ ಅಖಾಡ ಹೊರತುಪಡಿಸಿ ಉಳಿದ ಹಿಂದೂ ಕಕ್ಷಿದಾರರು ವಿರೋಧಿಸಿದರು. ಮುಸ್ಲಿಂ ಕಕ್ಷಿದಾರರು ಈ ಸಲಹೆಯನ್ನು ಸ್ವಾಗತಿಸಿದರು.</p>.<p>ಉತ್ತರ ಪ್ರದೇಶ ಸರ್ಕಾರದ ಪರವಾಗಿ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಇತ್ಯರ್ಥ ಸಾಧ್ಯತೆಗಳಿದ್ದರೆ ಮಾತ್ರ ಪ್ರಕರಣವನ್ನು ಸಂಧಾನ ಮಾತುಕತೆಗೆ ಶಿಫಾರಸು ಮಾಡಬಹುದು ಎಂದರು.</p>.<p>‘ಅಯೋಧ್ಯೆಯಲ್ಲಿ ರಾಮ ಹುಟ್ಟಿರುವ ಬಗ್ಗೆ ಯಾವುದೇ ವಿವಾದಗಳಿಲ್ಲ. ಆದರೆ, ವಿವಾದ ಉದ್ಭವಿಸಿರುವುದು ರಾಮ ಜನಿಸಿದ ಸ್ಥಳದ ಬಗ್ಗೆ. ಹೀಗಾಗಿ ರಾಮ ಜನ್ಮಸ್ಥಳ ವಿವಾದದ ಇತ್ಯರ್ಥಕ್ಕೆ ಸಂಧಾನ ಮಾತುಕತೆ ಅಗತ್ಯವಿಲ್ಲ’ ಎಂದು ರಾಮಲಲ್ಲಾ ವಿರಾಜಮಾನ ಪರ ವಕೀಲ ಸಿ.ಎಸ್. ವೈದ್ಯನಾಥನ್ ಹೇಳಿದರು.</p>.<p>‘ಹೃದಯ, ಮನಸ್ಸುಗಳ ಗಾಯ ಮಾಯುವುದು ಸಾಧ್ಯವೇ ಎಂಬುದನ್ನು ನಾವು ಪರಿಶೀಲಿಸಬೇಕಾಗಿದೆ. ಸಂಧಾನ ಪ್ರಯತ್ನವನ್ನೇ ಮಾಡದೇ ಸಂಧಾನ ಪ್ರಕ್ರಿಯೆಯನ್ನು ಏಕೆ ತಿರಸ್ಕರಿಸುತ್ತೀರಿ’ ಎಂದು ನ್ಯಾಯಮೂರ್ತಿ ಎಸ್.ಎ.ಬೊಬ್ಡೆ ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರಾಜಕೀಯವಾಗಿ ಭಾರಿ ಮಹತ್ವ ಪಡೆದುಕೊಂಡಿರುವ ಅಯೋಧ್ಯೆಯ ರಾಮಜನ್ಮಭೂಮಿ–ಬಾಬರಿ ಮಸೀದಿ ನಿವೇಶನ ವಿವಾದವನ್ನು ಸಂಧಾನದ ಮೂಲಕ ಇತ್ಯರ್ಥ ಮಾಡಬೇಕೇ ಎಂಬ ಆದೇಶವನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ.</p>.<p>ಬುಧವಾರ ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠವು ಕೂಡಲೇ ಸಂಧಾನಕಾರರ ಹೆಸರು ಸೂಚಿಸುವಂತೆ ಎಲ್ಲ ಕಕ್ಷಿದಾರರಿಗೆ ತಿಳಿಸಿತು.</p>.<p>ದಶಕಗಳಷ್ಟು ಹಳೆಯದಾದ ಭೂ ಒಡೆತನ ವಿವಾದವನ್ನು ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳುವಂತೆ ಹೇಳಿದ ಪೀಠ, ಹಳಸಿರುವ ಸಂಬಂಧ ಸುಧಾರಿಸಲು ಇದು ನೆರವಾಗಬಹುದು ಎಂದು ಸಲಹೆ ನೀಡಿದೆ.</p>.<p>ನ್ಯಾಯಮೂರ್ತಿಗಳಾದ ಎಸ್.ಎ. ಬೊಬ್ಡೆ, ಡಿ.ವೈ. ಚಂದ್ರಚೂಡ್, ಅಶೋಕ್ ಭೂಷಣ್ ಮತ್ತು ಎಸ್.ಎ. ನಜೀರ್ ಅವರು ಸಂವಿಧಾನ ಪೀಠದಲ್ಲಿದ್ದಾರೆ.</p>.<p class="Subhead">ಸಂಧಾನಕ್ಕೆ ನಕಾರ: ವಿವಾದವನ್ನು ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳುವ ಕೋರ್ಟ್ ಸಲಹೆಯನ್ನು ನಿರ್ಮೋಹಿ ಅಖಾಡ ಹೊರತುಪಡಿಸಿ ಉಳಿದ ಹಿಂದೂ ಕಕ್ಷಿದಾರರು ವಿರೋಧಿಸಿದರು. ಮುಸ್ಲಿಂ ಕಕ್ಷಿದಾರರು ಈ ಸಲಹೆಯನ್ನು ಸ್ವಾಗತಿಸಿದರು.</p>.<p>ಉತ್ತರ ಪ್ರದೇಶ ಸರ್ಕಾರದ ಪರವಾಗಿ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಇತ್ಯರ್ಥ ಸಾಧ್ಯತೆಗಳಿದ್ದರೆ ಮಾತ್ರ ಪ್ರಕರಣವನ್ನು ಸಂಧಾನ ಮಾತುಕತೆಗೆ ಶಿಫಾರಸು ಮಾಡಬಹುದು ಎಂದರು.</p>.<p>‘ಅಯೋಧ್ಯೆಯಲ್ಲಿ ರಾಮ ಹುಟ್ಟಿರುವ ಬಗ್ಗೆ ಯಾವುದೇ ವಿವಾದಗಳಿಲ್ಲ. ಆದರೆ, ವಿವಾದ ಉದ್ಭವಿಸಿರುವುದು ರಾಮ ಜನಿಸಿದ ಸ್ಥಳದ ಬಗ್ಗೆ. ಹೀಗಾಗಿ ರಾಮ ಜನ್ಮಸ್ಥಳ ವಿವಾದದ ಇತ್ಯರ್ಥಕ್ಕೆ ಸಂಧಾನ ಮಾತುಕತೆ ಅಗತ್ಯವಿಲ್ಲ’ ಎಂದು ರಾಮಲಲ್ಲಾ ವಿರಾಜಮಾನ ಪರ ವಕೀಲ ಸಿ.ಎಸ್. ವೈದ್ಯನಾಥನ್ ಹೇಳಿದರು.</p>.<p>‘ಹೃದಯ, ಮನಸ್ಸುಗಳ ಗಾಯ ಮಾಯುವುದು ಸಾಧ್ಯವೇ ಎಂಬುದನ್ನು ನಾವು ಪರಿಶೀಲಿಸಬೇಕಾಗಿದೆ. ಸಂಧಾನ ಪ್ರಯತ್ನವನ್ನೇ ಮಾಡದೇ ಸಂಧಾನ ಪ್ರಕ್ರಿಯೆಯನ್ನು ಏಕೆ ತಿರಸ್ಕರಿಸುತ್ತೀರಿ’ ಎಂದು ನ್ಯಾಯಮೂರ್ತಿ ಎಸ್.ಎ.ಬೊಬ್ಡೆ ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>