<p><strong>ಅಯೋಧ್ಯೆ</strong>: ‘ಅಯೋಧ್ಯೆಯಲ್ಲಿ ನಿರ್ಮಿಸಲಾಗುತ್ತಿರುವ ಮಸೀದಿಗೆ 1857ರಲ್ಲಿ ನಡೆದ ಬ್ರಿಟೀಷರ ವಿರುದ್ಧದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ಹೋರಾಟಗಾರ ಮೌಲ್ವಿ ಅಹ್ಮದುಲ್ಲಾ ಷಾ ಅವರ ಹೆಸರಿಡುವ ಸಾಧ್ಯತೆಯಿದೆ.</p>.<p>‘ಮಸೀದಿ ನಿರ್ಮಾಣದ ಮೇಲ್ವಿಚಾರಣೆಗೆ ಸುನ್ನಿ ವಕ್ಫ್ ಮಂಡಳಿ ರಚಿಸಿರುವ ಇಂಡೋ ಇಸ್ಲಾಮಿಕ್ ಕಲ್ಚರಲ್ ಫೌಡೇಷನ್, ಮೌಲ್ವಿ ಅಹ್ಮದುಲ್ಲಾ ಷಾ ಅವರ ಹೆಸರಿಡುವ ಬಗ್ಗೆ ಚಿಂತನೆ ನಡೆಸಿದೆ’ ಎಂದು ಪೌಂಡೇಷನ್ನ ಕಾರ್ಯದರ್ಶಿ ಅಥಾರ್ ಹುಸೈನ್ ಅವರು ತಿಳಿಸಿದರು.</p>.<p>ಈ ಮೊದಲು ಮಸೀದಿಗೆ ಮೊಘಲ್ ಸುಲ್ತಾನ ಬಾಬರ್ ಸೇರಿದಂತೆ ಹಲವರ ಹೆಸರು ಪರಿಗಣನೆಯಲ್ಲಿದ್ದವು. ‘ಬಾಬರಿ ಮಸೀದಿ’ಗೆ ಬಾಬರ್ ಹೆಸರಿಡಲಾಗಿತ್ತು.</p>.<p>'ಅಯೋಧ್ಯೆಯ ಉದ್ದೇಶಿತ ಮಸೀದಿ ಕೋಮುಸೌಹಾರ್ದ ಮತ್ತು ದೇಶಭಕ್ತಿ ಪ್ರತೀಕವಾಗಿರಬೇಕು ಎಂಬ ಕಾರಣಕ್ಕಾಗಿ ಮಸೀದಿಗೆ ಮೌಲ್ವಿ ಅಹ್ಮದುಲ್ಲಾ ಷಾ ಹೆಸರಿಡುವ ಬಗ್ಗೆ ಚಿಂತನೆ ಮಾಡಲಾಗಿದೆ. ಏಕೆಂದರೆ ಅವರು ಸ್ವಾತಂತ್ರ್ಯ ಹೋರಾಟಗಾರ ಮತ್ತು ಮುಸ್ಲಿಂ ಧರ್ಮದ ನಿಷ್ಠಾವಂತ ಅನುಯಾಯಿಯಾಗಿದ್ದರು’ ಎಂದು ಮೂಲಗಳು ಹೇಳಿವೆ.</p>.<p>‘ನಾವು ಈ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸುತ್ತಿದ್ದೇವೆ. ಇದೊಂದು ಉತ್ತಮ ಸಲಹೆಯಾಗಿದೆ. ನಾವು ಇತರರೊಂದಿಗೆ ಚರ್ಚೆ ನಡೆಸಿ ಅಧಿಕೃತವಾಗಿ ಈ ಬಗ್ಗೆ ತಿಳಿಸುತ್ತೇವೆ’ ಎಂದು ಹುಸೈನ್ ಅವರು ಹೇಳಿದ್ದಾರೆ. ಜೂನ್ 5, 1858 ರಲ್ಲಿ ಮೌಲ್ವಿ ಅಹ್ಮದುಲ್ಲಾ ಷಾ ಅವರು ಹುತಾತ್ಮರಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಯೋಧ್ಯೆ</strong>: ‘ಅಯೋಧ್ಯೆಯಲ್ಲಿ ನಿರ್ಮಿಸಲಾಗುತ್ತಿರುವ ಮಸೀದಿಗೆ 1857ರಲ್ಲಿ ನಡೆದ ಬ್ರಿಟೀಷರ ವಿರುದ್ಧದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ಹೋರಾಟಗಾರ ಮೌಲ್ವಿ ಅಹ್ಮದುಲ್ಲಾ ಷಾ ಅವರ ಹೆಸರಿಡುವ ಸಾಧ್ಯತೆಯಿದೆ.</p>.<p>‘ಮಸೀದಿ ನಿರ್ಮಾಣದ ಮೇಲ್ವಿಚಾರಣೆಗೆ ಸುನ್ನಿ ವಕ್ಫ್ ಮಂಡಳಿ ರಚಿಸಿರುವ ಇಂಡೋ ಇಸ್ಲಾಮಿಕ್ ಕಲ್ಚರಲ್ ಫೌಡೇಷನ್, ಮೌಲ್ವಿ ಅಹ್ಮದುಲ್ಲಾ ಷಾ ಅವರ ಹೆಸರಿಡುವ ಬಗ್ಗೆ ಚಿಂತನೆ ನಡೆಸಿದೆ’ ಎಂದು ಪೌಂಡೇಷನ್ನ ಕಾರ್ಯದರ್ಶಿ ಅಥಾರ್ ಹುಸೈನ್ ಅವರು ತಿಳಿಸಿದರು.</p>.<p>ಈ ಮೊದಲು ಮಸೀದಿಗೆ ಮೊಘಲ್ ಸುಲ್ತಾನ ಬಾಬರ್ ಸೇರಿದಂತೆ ಹಲವರ ಹೆಸರು ಪರಿಗಣನೆಯಲ್ಲಿದ್ದವು. ‘ಬಾಬರಿ ಮಸೀದಿ’ಗೆ ಬಾಬರ್ ಹೆಸರಿಡಲಾಗಿತ್ತು.</p>.<p>'ಅಯೋಧ್ಯೆಯ ಉದ್ದೇಶಿತ ಮಸೀದಿ ಕೋಮುಸೌಹಾರ್ದ ಮತ್ತು ದೇಶಭಕ್ತಿ ಪ್ರತೀಕವಾಗಿರಬೇಕು ಎಂಬ ಕಾರಣಕ್ಕಾಗಿ ಮಸೀದಿಗೆ ಮೌಲ್ವಿ ಅಹ್ಮದುಲ್ಲಾ ಷಾ ಹೆಸರಿಡುವ ಬಗ್ಗೆ ಚಿಂತನೆ ಮಾಡಲಾಗಿದೆ. ಏಕೆಂದರೆ ಅವರು ಸ್ವಾತಂತ್ರ್ಯ ಹೋರಾಟಗಾರ ಮತ್ತು ಮುಸ್ಲಿಂ ಧರ್ಮದ ನಿಷ್ಠಾವಂತ ಅನುಯಾಯಿಯಾಗಿದ್ದರು’ ಎಂದು ಮೂಲಗಳು ಹೇಳಿವೆ.</p>.<p>‘ನಾವು ಈ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸುತ್ತಿದ್ದೇವೆ. ಇದೊಂದು ಉತ್ತಮ ಸಲಹೆಯಾಗಿದೆ. ನಾವು ಇತರರೊಂದಿಗೆ ಚರ್ಚೆ ನಡೆಸಿ ಅಧಿಕೃತವಾಗಿ ಈ ಬಗ್ಗೆ ತಿಳಿಸುತ್ತೇವೆ’ ಎಂದು ಹುಸೈನ್ ಅವರು ಹೇಳಿದ್ದಾರೆ. ಜೂನ್ 5, 1858 ರಲ್ಲಿ ಮೌಲ್ವಿ ಅಹ್ಮದುಲ್ಲಾ ಷಾ ಅವರು ಹುತಾತ್ಮರಾದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>