ಮೆರಮಣಿಗೆಯ ಕಾರ್ಯಕ್ರಮದ ಮೂಲಕ ರಾಮನ ಪ್ರತಿಷ್ಠಾಪನೆಗೆ ಕ್ಷಣಗಣನೆ ಶುರುವಾಗಲಿದೆ. ‘ವಿಗ್ರಹಗಳನ್ನು ಸಿದ್ಧಪಡಿಸಲು ಅವಕಾಶ ಸಿಕ್ಕಿರುವುದು ನನ್ನ ಅದೃಷ್ಟ. ಈಗಾಗಲೇ 60 ಪ್ರತಿಮೆಗಳನ್ನು ತಯಾರಿಸಲಾಗಿದೆ‘ ಎಂದು ಮುಖ್ಯ ಶಿಲ್ಪಿ ರಂಜಿತ್ ಮಂಡಲ್ ತಿಳಿಸಿದ್ದಾರೆ.
‘ಅಮೃತಶಿಲೆಯಿಂದ ನಿರ್ಮಿಸಲಾಗಿರುವ ಕಮಲದ ಹೂವಿನ ಮಾದರಿಯ ಪೀಠದ ಮೇಲೆ ಭಗವಾನ್ ರಾಮನ ಮೂರ್ತಿಯನ್ನು ಸ್ಥಾಪಿಸಲಾಗುವುದು. ಇದೇ ಮಾದರಿಯಲ್ಲಿಯೇ ಶ್ರೀರಾಮನ ಪೀಠವನ್ನು ಗರ್ಭಗುಡಿಯಲ್ಲಿಯೂ ಪ್ರತಿಷ್ಠಾಪಿಸಲಾಗುವುದು. ಪೀಠ ಅಥವಾ ಸಿಂಹಾಸನದ ಎತ್ತರವನ್ನು ನಿರ್ಧರಿಸಲಾಗಿದೆ. ರಾಮನವಮಿಯಂದು ಮಧ್ಯಾಹ್ನ 12 ಗಂಟೆಗೆ ಸೂರ್ಯನ ಕಿರಣಗಳು ಶ್ರೀರಾಮನ ಹಣೆಯನ್ನು ಸ್ಪರ್ಶಿಸಿದ ಬೆಳಕು ಗರ್ಭಗುಡಿಯನ್ನು ಬೆಳಗಲಿದೆ‘ ಎಂದು ಟ್ರಸ್ಟಿ ಅನಿಲ್ ಮಿಶ್ರಾ ಮಾಹಿತಿ ಹಂಚಿಕೊಂಡಿದ್ದಾರೆ.
ಜನವರಿ 22 ರಂದು ಮಹಾಮಸ್ತಕಾಭಿಷೇಕ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ನೂರಾರು ಗಣ್ಯರು ಪಾಲ್ಗೊಳ್ಳುವ ನಿರೀಕ್ಷೆಯಿದೆ.