ಖಲೀಫುಲ್ಲಾ ನೇತೃತ್ವದ ಮೂವರು ಸದಸ್ಯರ ಮಧ್ಯಸ್ಥಿಕೆ ಸಮಿತಿಯನ್ನು ಸುಪ್ರೀಂ ಕೋರ್ಟ್ ಮಾರ್ಚ್ 8ರಂದು ನೇಮಿಸಿತ್ತು. ವಿವಾದದ ಸೌಹಾರ್ದಯುತ ಪರಿಹಾರಕ್ಕೆ ಸುಮಾರು ನಾಲ್ಕು ತಿಂಗಳು ಮಧ್ಯಸ್ಥಿಕೆ ಮಾತುಕತೆ ನಡೆದಿತ್ತು. ಆದರೆ, ಅಂತಿಮ ತೀರ್ಮಾನಕ್ಕೆ ಬರಲು ಸಾಧ್ಯವಾಗಿರಲಿಲ್ಲ. ಹಾಗಾಗಿ ಸುಪ್ರೀಂ ಕೋರ್ಟ್ ವಿಚಾರಣೆ ಕೈಗೆತ್ತಿಕೊಂಡಿತ್ತು.