ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

Ram Mandir: ಜ.22ರಂದು ಉ.ಪ್ರದೇಶದಲ್ಲಿ ಶಾಲೆಗಳಿಗೆ ರಜೆ, ಮದ್ಯದಂಗಡಿ ಬಂದ್

Published 9 ಜನವರಿ 2024, 13:36 IST
Last Updated 9 ಜನವರಿ 2024, 13:36 IST
ಅಕ್ಷರ ಗಾತ್ರ

ಲಖನೌ: ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನಾ ಸಮಾರಂಭ ದಿನದಂದು (ಜನವರಿ 22) ರಾಜ್ಯದಾದ್ಯಂತ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ನಿರ್ದೇಶನ ನೀಡಿದ್ದಾರೆ.

ಅದೇ ದಿನ ರಾಜ್ಯದಲ್ಲಿ ಮದ್ಯದಂಗಡಿಗಳನ್ನು ತೆರೆಯಲಾಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಸಿಎಂ ಆದಿತ್ಯನಾಥ ಮಾಹಿತಿ ನೀಡಿದ್ದಾರೆ.

'ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ 'ರಾಷ್ಟ್ರೀಯ ಉತ್ಸವ' ಆಗಿದೆ. ಶತಮಾನಗಳ ಕಾಯುವಿಕೆಯ ನಂತರ ಈ ಶುಭ ಗಳಿಗೆ ಬಂದಿದೆ. ಈ ಸಂದರ್ಭದಲ್ಲಿ ಎಲ್ಲ ಸರ್ಕಾರಿ ಕಚೇರಿಗಳನ್ನು ದಿವ್ಯ ಸ್ವರೂಪದಲ್ಲಿ ಅಲಂಕರಿಸಲಾಗುವುದು. ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಜ. 22ರಂದು ರಜೆ ಘೋಷಿಸಲು ಸೂಚನೆ ನೀಡಿದ್ದೇನೆ. ಬನ್ನಿ ಎಲ್ಲರೂ ಒಟ್ಟಾಗಿ ರಾಮೋತ್ಸವವನ್ನು ಆಚರಿಸೋಣ' ಎಂದು ಕರೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT