ಲಖನೌ: ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನಾ ಸಮಾರಂಭ ದಿನದಂದು (ಜನವರಿ 22) ರಾಜ್ಯದಾದ್ಯಂತ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ನಿರ್ದೇಶನ ನೀಡಿದ್ದಾರೆ.
ಅದೇ ದಿನ ರಾಜ್ಯದಲ್ಲಿ ಮದ್ಯದಂಗಡಿಗಳನ್ನು ತೆರೆಯಲಾಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಿಎಂ ಆದಿತ್ಯನಾಥ ಮಾಹಿತಿ ನೀಡಿದ್ದಾರೆ.
'ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ 'ರಾಷ್ಟ್ರೀಯ ಉತ್ಸವ' ಆಗಿದೆ. ಶತಮಾನಗಳ ಕಾಯುವಿಕೆಯ ನಂತರ ಈ ಶುಭ ಗಳಿಗೆ ಬಂದಿದೆ. ಈ ಸಂದರ್ಭದಲ್ಲಿ ಎಲ್ಲ ಸರ್ಕಾರಿ ಕಚೇರಿಗಳನ್ನು ದಿವ್ಯ ಸ್ವರೂಪದಲ್ಲಿ ಅಲಂಕರಿಸಲಾಗುವುದು. ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಜ. 22ರಂದು ರಜೆ ಘೋಷಿಸಲು ಸೂಚನೆ ನೀಡಿದ್ದೇನೆ. ಬನ್ನಿ ಎಲ್ಲರೂ ಒಟ್ಟಾಗಿ ರಾಮೋತ್ಸವವನ್ನು ಆಚರಿಸೋಣ' ಎಂದು ಕರೆ ನೀಡಿದ್ದಾರೆ.