ಲಖನೌ: ಅಯೋಧ್ಯೆಯಲ್ಲಿ ಜನವರಿ 22ರಂದು ನಡೆಯುವ ಬಾಲರಾಮ ಪ್ರಾಣ ಪ್ರತಿಷ್ಠಾಪನೆ ಸಮಾರಂಭಕ್ಕೆ ದಿನಗಣನೆ ಆರಂಭವಾಗಿದ್ದು, ವಿವಿಧ ರಾಜ್ಯಗಳಿಂದ ಭಕ್ತಾಧಿಗಳು ಅಯೋಧ್ಯೆಯತ್ತ ಹೆಜ್ಜೆ ಹಾಕುತ್ತಿದ್ದಾರೆ.
ಹೈದರಾಬಾದ್ನಿಂದ ಭಕ್ತರು ಕಳುಹಿಸಿದ್ದ 1,265 ಕೆ.ಜಿ ತೂಕದ ಪ್ರಸಾದದ ಲಡ್ಡು ಕರಸೇವಕಪುರಕ್ಕೆ ತಲುಪಿದ ವಿಡಿಯೊವನ್ನು ಸುದ್ದಿಸಂಸ್ಥೆ ‘ಎಎನ್ಐ’ ಎಕ್ಸ್ನಲ್ಲಿ ಹಂಚಿಕೊಂಡಿದೆ.
ಪ್ರಸಾದದ ಲಡ್ಡುವನ್ನು ತಯಾರಿಸಿದ ಶ್ರೀ ರಾಮ್ ಕ್ಯಾಟರಿಂಗ್ ಸರ್ವಿಸಸ್ನ ಮಾಲೀಕ ಎನ್. ನಾಗಭೂಷಣ ರೆಡ್ಡಿ ಮಾತನಾಡಿ, ‘ದೇವರು ನನ್ನ ವ್ಯಾಪಾರ ಮತ್ತು ನನ್ನ ಕುಟುಂಬವನ್ನು ಆಶೀರ್ವದಿಸಿದ್ದಾನೆ. ನಾನು ಬದುಕಿರುವವರೆಗೂ ದೇವರಿಗಾಗಿ ಪ್ರತಿ ದಿನ 1 ಕೆ.ಜಿ ಲಡ್ಡು ತಯಾರಿಸಲು ವಾಗ್ದಾನ ಮಾಡಿದ್ದೇನೆ’ ಎಂದು ಹೇಳಿದ್ದಾರೆ.