<p><strong>ಬೆಂಗಳೂರು:</strong> ಚಿನ್ನದ ಕುಸುರಿ, ಅಮೂಲ್ಯ ರತ್ನ ಹಾಗೂ ಹರಳುಗಳನ್ನು ಬಳಸಿ ತಯಾರಿಸಿದ 800 ಕೆ.ಜಿ ತೂಕದ, ₹2.5 ಕೋಟಿ ಬೆಲೆ ಬಾಳುವ ಸಾಂಪ್ರದಾಯಿಕ ತಂಜಾವೂರು ಶೈಲಿಯಲ್ಲಿರುವ ಶ್ರೀರಾಮನ ಕಲಾಕೃತಿಯನ್ನು ಅಂಚೆ ಇಲಾಖೆ ಲಾಜಿಸ್ಟಿಕ್ಸ್ ಮೂಲಕ ಬೆಂಗಳೂರಿನಿಂದ ಅಯೋಧ್ಯೆಗೆ ತಲುಪಿಸುವಲ್ಲಿ ಯಶಸ್ವಿಯಾಗಿದೆ.</p><p>ಈ ಕಲಾಕೃತಿಯನ್ನು ಬೆಂಗಳೂರಿನ ಜಯಶ್ರೀ ಫಣೀಶ್ ಅವರು ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದಾರೆ ಎಂದು <a href="https://www.pib.gov.in/PressReleasePage.aspx?PRID=2207801&reg=3&lang=2">ಪಿಐಬಿ ಪ್ರಕಟಣೆ</a> ತಿಳಿಸಿದೆ.</p><p>ಈ ಕಲಾಕೃತಿ 12 ಅಡಿ ಅಗಲ ಮತ್ತು 8 ಅಡಿ ಎತ್ತರವಿದೆ. ಮರದ ಚೌಕಟ್ಟಿನಲ್ಲಿ ಕಲಾಕೃತಿಯನ್ನು ಇರಿಸಲಾಗಿದ್ದು, ಮುಂಭಾಗದಲ್ಲಿ ಗ್ಲಾಸ್ ಅಳವಡಿಸಲಾಗಿದೆ.</p><p> ಡಿ.17ರಂದು ಬೆಂಗಳೂರಿನಿಂದ ಹೊರಟಿದ್ದ ಈ ಕಲಾಕೃತಿಯನ್ನು, 1,900 ಕಿ.ಮೀ ದೂರ ಸಾಗಿಸಿ ಡಿ.22ರಂದು ಅಯೋಧ್ಯೆ ರಾಮಮಂದಿರದಲ್ಲಿ ಇಳಿಸಲಾಗಿದೆ. </p><p>ಅಂಚೆ ಇಲಾಖೆಯು ಇದೇ ಮೊದಲ ಬಾರಿಗೆ ಇಷ್ಟು ಮೌಲ್ಯದ ವಸ್ತುವನ್ನು ಸಾಗಿಸಿರುವುದಾಗಿ ಹೇಳಿದೆ. ಬೆಂಗಳೂರಿನಿಂದ ಹೊರಟಿದ್ದ ಈ ಕಲಾಕೃತಿಯನ್ನು ಬೆಂಗಳೂರು, ಹೈದರಾಬಾದ್, ನಾಗ್ಪುರ, ಜಬಲ್ಪುರ, ರೇವಾ, ಪ್ರಯಾಗರಾಜ್ ಮೂಲಕ ಅಯೋಧ್ಯೆಗೆ ಸಾಗಿಸಲಾಗಿದೆ. ಈ ಮಾರ್ಗದಲ್ಲಿ ಕರ್ನಾಟಕ, ತೆಲಂಗಾಣ, ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದ ಅಂಚೆ ಇಲಾಖೆಯ ವಿಭಾಗೀಯ ಮುಖ್ಯಸ್ಥರು ಮತ್ತು ಹಿರಿಯ ಅಂಚೆ ಅಧಿಕಾರಿಗಳು ಮೇಲ್ವಿಚಾರಣೆ ಮಾಡುತ್ತಿದ್ದರು.</p><p>ಈ ಕಲಾಕೃತಿಯನ್ನು ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರ ಸಮ್ಮುಖದಲ್ಲಿ ಕ್ಷೇತ್ರದ ಆವರಣದಲ್ಲಿ ಅಳವಡಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಚಿನ್ನದ ಕುಸುರಿ, ಅಮೂಲ್ಯ ರತ್ನ ಹಾಗೂ ಹರಳುಗಳನ್ನು ಬಳಸಿ ತಯಾರಿಸಿದ 800 ಕೆ.ಜಿ ತೂಕದ, ₹2.5 ಕೋಟಿ ಬೆಲೆ ಬಾಳುವ ಸಾಂಪ್ರದಾಯಿಕ ತಂಜಾವೂರು ಶೈಲಿಯಲ್ಲಿರುವ ಶ್ರೀರಾಮನ ಕಲಾಕೃತಿಯನ್ನು ಅಂಚೆ ಇಲಾಖೆ ಲಾಜಿಸ್ಟಿಕ್ಸ್ ಮೂಲಕ ಬೆಂಗಳೂರಿನಿಂದ ಅಯೋಧ್ಯೆಗೆ ತಲುಪಿಸುವಲ್ಲಿ ಯಶಸ್ವಿಯಾಗಿದೆ.</p><p>ಈ ಕಲಾಕೃತಿಯನ್ನು ಬೆಂಗಳೂರಿನ ಜಯಶ್ರೀ ಫಣೀಶ್ ಅವರು ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದಾರೆ ಎಂದು <a href="https://www.pib.gov.in/PressReleasePage.aspx?PRID=2207801&reg=3&lang=2">ಪಿಐಬಿ ಪ್ರಕಟಣೆ</a> ತಿಳಿಸಿದೆ.</p><p>ಈ ಕಲಾಕೃತಿ 12 ಅಡಿ ಅಗಲ ಮತ್ತು 8 ಅಡಿ ಎತ್ತರವಿದೆ. ಮರದ ಚೌಕಟ್ಟಿನಲ್ಲಿ ಕಲಾಕೃತಿಯನ್ನು ಇರಿಸಲಾಗಿದ್ದು, ಮುಂಭಾಗದಲ್ಲಿ ಗ್ಲಾಸ್ ಅಳವಡಿಸಲಾಗಿದೆ.</p><p> ಡಿ.17ರಂದು ಬೆಂಗಳೂರಿನಿಂದ ಹೊರಟಿದ್ದ ಈ ಕಲಾಕೃತಿಯನ್ನು, 1,900 ಕಿ.ಮೀ ದೂರ ಸಾಗಿಸಿ ಡಿ.22ರಂದು ಅಯೋಧ್ಯೆ ರಾಮಮಂದಿರದಲ್ಲಿ ಇಳಿಸಲಾಗಿದೆ. </p><p>ಅಂಚೆ ಇಲಾಖೆಯು ಇದೇ ಮೊದಲ ಬಾರಿಗೆ ಇಷ್ಟು ಮೌಲ್ಯದ ವಸ್ತುವನ್ನು ಸಾಗಿಸಿರುವುದಾಗಿ ಹೇಳಿದೆ. ಬೆಂಗಳೂರಿನಿಂದ ಹೊರಟಿದ್ದ ಈ ಕಲಾಕೃತಿಯನ್ನು ಬೆಂಗಳೂರು, ಹೈದರಾಬಾದ್, ನಾಗ್ಪುರ, ಜಬಲ್ಪುರ, ರೇವಾ, ಪ್ರಯಾಗರಾಜ್ ಮೂಲಕ ಅಯೋಧ್ಯೆಗೆ ಸಾಗಿಸಲಾಗಿದೆ. ಈ ಮಾರ್ಗದಲ್ಲಿ ಕರ್ನಾಟಕ, ತೆಲಂಗಾಣ, ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದ ಅಂಚೆ ಇಲಾಖೆಯ ವಿಭಾಗೀಯ ಮುಖ್ಯಸ್ಥರು ಮತ್ತು ಹಿರಿಯ ಅಂಚೆ ಅಧಿಕಾರಿಗಳು ಮೇಲ್ವಿಚಾರಣೆ ಮಾಡುತ್ತಿದ್ದರು.</p><p>ಈ ಕಲಾಕೃತಿಯನ್ನು ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರ ಸಮ್ಮುಖದಲ್ಲಿ ಕ್ಷೇತ್ರದ ಆವರಣದಲ್ಲಿ ಅಳವಡಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>