ಈ ಕುರಿತು ರಾಷ್ಟ್ರೀಯ ಸುದ್ದಿ ಸಂಸ್ಥೆ ಎಎನ್ಐ ಜತೆ ಮಾತನಾಡಿರುವ ದೇಗುಲದ ಅರ್ಚಕ, ಇಫ್ತಾರ್ ಕೂಟದ ಆಯೋಜಕ ಯುಗಲ್ ಕಿಶೋರ್, ‘ದೇಗುಲದ ಆವರಣದಲ್ಲಿ ಆಯೋಜಿಸುತ್ತಿರುವ ಮೂರನೇ ಇಫ್ತಾರ್ ಕೂಟವಿದು. ಭವಿಷ್ಯದಲ್ಲೂ ನಾವು ಹೀಗೆಯೇ ನಡೆದುಕೊಳ್ಳುತ್ತೇವೆ. ನವೋತ್ಸಾಹದಿಂದ ಎಲ್ಲ ಧರ್ಮದ ಹಬ್ಬಗಳನ್ನೂ ನಾವುಆಚರಿಸಬೇಕು,’ಎಂದು ಅವರು ಅಭಿಪ್ರಾಯಪಟ್ಟರು.