ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಯೋಧ್ಯೆ: ಇನ್ನು ಮುಂದೆ ಬಾಲರಾಮನಿಗೆ ಪ್ರತಿದಿನ ಮಧ್ಯಾಹ್ನ 1 ಗಂಟೆ ವಿಶ್ರಾಂತಿ

Published 16 ಫೆಬ್ರುವರಿ 2024, 10:58 IST
Last Updated 16 ಫೆಬ್ರುವರಿ 2024, 10:58 IST
ಅಕ್ಷರ ಗಾತ್ರ

ಅಯೋಧ್ಯೆ: ಅಯೋಧ್ಯೆಯ ರಾಮಮಂದಿರದ ಬಾಗಿಲು ಇನ್ನು ಮುಂದೆ ಪ್ರತಿದಿನ 1 ಗಂಟೆ ಮುಚ್ಚಿರಲಿದೆ. ಈ ವೇಳೆ ಭಕ್ತರಿಗೆ ಬಾಲರಾಮನ ದರ್ಶನಕ್ಕೆ ಅವಕಾಶವಿರುವುದಿಲ್ಲ ಎಂದು ಮಂದಿರದ ಪ್ರಧಾನ ಅರ್ಚಕರು ತಿಳಿಸಿದ್ದಾರೆ.

‘ಬಾಲರಾಮ ಇನ್ನೂ ಐದು ವರ್ಷದವನು. ದೀರ್ಘ ಸಮಯದವರೆಗೆ ಎಚ್ಚರವಿರಲು ಸಾಧ್ಯವಿಲ್ಲ. ಬಾಲರಾಮನಿಗೆ ವಿಶ್ರಾಂತಿಯ ಅಗತ್ಯವಿರುತ್ತದೆ. ಹೀಗಾಗಿ ಪ್ರತಿದಿನ ಮಧ್ಯಾಹ್ನ 12.30 ರಿಂದ 1.30ರವರೆಗೆ ದೇವಾಲಯದ ಬಾಗಿಲನ್ನು ಮುಚ್ಚಲು ಟ್ರಸ್ಟ್‌ ನಿರ್ಧರಿಸಿದೆ’ ಎಂದು ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್‌ ಪಿಟಿಐಗೆ ತಿಳಿಸಿದ್ದಾರೆ.

ರಾಮ ಮಂದಿರ ಉದ್ಘಾಟನೆಯಾದ ದಿನದಿಂದಲೇ (ಜ.22) ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಅಪಾರ ಪ್ರಮಾಣದಲ್ಲಿ ಭಕ್ತರು ಬರುತ್ತಿದ್ದ ಕಾರಣ ದರ್ಶನದ ಅವಧಿಯನ್ನು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ವಿಸ್ತರಿಸಲಾಗಿತ್ತು. ಈ ವೇಳೆ ಲಕ್ಷಾಂತರ ಭಕ್ತರಿಗೆ ಬಾಲರಾಮನ ದರ್ಶನ ಸಿಗುತ್ತಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT