<p><strong>ಲಖನೌ:</strong> ಸುನ್ನಿ ಕೇಂದ್ರೀಯ ವಕ್ಫ್ ಮಂಡಳಿ ಮಂಗಳವಾರ ಇಲ್ಲಿ ಸಭೆಸೇರಲಿದ್ದು, ಅಯೋಧ್ಯೆ ವಿವಾದ ಕುರಿತಂತೆ ಸುಪ್ರೀಂ ಕೋರ್ಟ್ ತೀರ್ಪು ಕುರಿತು ಚರ್ಚಿಸಲಿದೆ. ತೀರ್ಪು ಪ್ರಶ್ನಿಸಿ ಮೇಲ್ಮನವಿಯನ್ನು ಸಲ್ಲಿಸಬೇಕೇ, ಬೇಡವೇ ಎಂಬ ಬಗ್ಗೆ ಸದಸ್ಯರಲ್ಲಿ ವಿಭಿನ್ನ ಅಭಿಪ್ರಾಯಗಳಿವೆ. ಹೀಗಾಗಿ, ಸಭೆ ಮಹತ್ವದ್ದಾಗಿದೆ.</p>.<p>ಸುಪ್ರೀಂ ಕೋರ್ಟ್ ಆದೇಶಿಸಿರುವಂತೆ ಮಸೀದಿಯನ್ನು ನಿರ್ಮಿಸಲು ಭೂಮಿ ಪಡೆಯವ ಕುರಿತಂತೆಯೂ ಸಭೆ ಚರ್ಚೆ ನಡೆಸುವ ಸಂಭವವಿದೆ ಎಂದು ಮಂಡಳಿ ಅಧ್ಯಕ್ಷ ಜುಫರ್ ಫರೂಕಿ ಸೋಮವಾರ ತಿಳಿಸಿದರು.</p>.<p>ರಾಮಜನ್ಮಭೂಮಿ –ಬಾಬರಿ ಮಸೀದಿ ನಿವೇಶನ ವಿವಾದ ಕುರಿತು ‘ಸುಪ್ರೀಂ’ನ ಪಂಚ ನ್ಯಾಯಮೂರ್ತಿಗಳಿದ್ದ ಪೀಠ ನೀಡಿದ್ದ ಐತಿಹಾಸಿಕ ತೀರ್ಪು ಪ್ರಶ್ನಿಸಿ ಮೇಲ್ಮನವಿಯನ್ನು ಸಲ್ಲಿಸುವುದು ಬೇಡ ಎಂದು ಈ ಮೊದಲು ಫರೂಕಿ ಪ್ರತಿಪಾದಿಸಿದ್ದರು. ಕೆಲ ಸದಸ್ಯರು ಇದಕ್ಕೆ ಭಿನ್ನವಾದ ನಿಲುವು ವ್ಯಕ್ತಪಡಿಸಿದ್ದರು.</p>.<p>‘ಮಂಗಳವಾರದ ಸಭೆಯಲ್ಲಿ ಸದಸ್ಯರು ಯಾವುದೇ ವಿಷಯ ಕುರಿತು ಚರ್ಚಿಸಬಹುದು. ಮಂಡಳಿ ಪರವಾಗಿ ನಿರ್ಧಾರ ಕೈಗೊಳ್ಳಲು ನನಗೆ ಅಧಿಕಾರ ನೀಡಲಾಗಿದೆ. ಇದಕ್ಕೆ ಯಾರದ್ದಾದರೂ ತಕರಾರು ಇದ್ದರೆ ಸಭೆಯಲ್ಲಿ ವಿಷಯ ಪ್ರಸ್ತಾಪಿಸಬಹುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಸುನ್ನಿ ಕೇಂದ್ರೀಯ ವಕ್ಫ್ ಮಂಡಳಿ ಮಂಗಳವಾರ ಇಲ್ಲಿ ಸಭೆಸೇರಲಿದ್ದು, ಅಯೋಧ್ಯೆ ವಿವಾದ ಕುರಿತಂತೆ ಸುಪ್ರೀಂ ಕೋರ್ಟ್ ತೀರ್ಪು ಕುರಿತು ಚರ್ಚಿಸಲಿದೆ. ತೀರ್ಪು ಪ್ರಶ್ನಿಸಿ ಮೇಲ್ಮನವಿಯನ್ನು ಸಲ್ಲಿಸಬೇಕೇ, ಬೇಡವೇ ಎಂಬ ಬಗ್ಗೆ ಸದಸ್ಯರಲ್ಲಿ ವಿಭಿನ್ನ ಅಭಿಪ್ರಾಯಗಳಿವೆ. ಹೀಗಾಗಿ, ಸಭೆ ಮಹತ್ವದ್ದಾಗಿದೆ.</p>.<p>ಸುಪ್ರೀಂ ಕೋರ್ಟ್ ಆದೇಶಿಸಿರುವಂತೆ ಮಸೀದಿಯನ್ನು ನಿರ್ಮಿಸಲು ಭೂಮಿ ಪಡೆಯವ ಕುರಿತಂತೆಯೂ ಸಭೆ ಚರ್ಚೆ ನಡೆಸುವ ಸಂಭವವಿದೆ ಎಂದು ಮಂಡಳಿ ಅಧ್ಯಕ್ಷ ಜುಫರ್ ಫರೂಕಿ ಸೋಮವಾರ ತಿಳಿಸಿದರು.</p>.<p>ರಾಮಜನ್ಮಭೂಮಿ –ಬಾಬರಿ ಮಸೀದಿ ನಿವೇಶನ ವಿವಾದ ಕುರಿತು ‘ಸುಪ್ರೀಂ’ನ ಪಂಚ ನ್ಯಾಯಮೂರ್ತಿಗಳಿದ್ದ ಪೀಠ ನೀಡಿದ್ದ ಐತಿಹಾಸಿಕ ತೀರ್ಪು ಪ್ರಶ್ನಿಸಿ ಮೇಲ್ಮನವಿಯನ್ನು ಸಲ್ಲಿಸುವುದು ಬೇಡ ಎಂದು ಈ ಮೊದಲು ಫರೂಕಿ ಪ್ರತಿಪಾದಿಸಿದ್ದರು. ಕೆಲ ಸದಸ್ಯರು ಇದಕ್ಕೆ ಭಿನ್ನವಾದ ನಿಲುವು ವ್ಯಕ್ತಪಡಿಸಿದ್ದರು.</p>.<p>‘ಮಂಗಳವಾರದ ಸಭೆಯಲ್ಲಿ ಸದಸ್ಯರು ಯಾವುದೇ ವಿಷಯ ಕುರಿತು ಚರ್ಚಿಸಬಹುದು. ಮಂಡಳಿ ಪರವಾಗಿ ನಿರ್ಧಾರ ಕೈಗೊಳ್ಳಲು ನನಗೆ ಅಧಿಕಾರ ನೀಡಲಾಗಿದೆ. ಇದಕ್ಕೆ ಯಾರದ್ದಾದರೂ ತಕರಾರು ಇದ್ದರೆ ಸಭೆಯಲ್ಲಿ ವಿಷಯ ಪ್ರಸ್ತಾಪಿಸಬಹುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>