<p><strong>ಮುಂಬೈ</strong>: ಮಾಜಿ ಸಚಿವ ಬಾಬಾ ಸಿದ್ದೀಕಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಫಿಡವಿಟ್ ಸಲ್ಲಿಸಿ ಎಂದು ಪೊಲೀಸರಿಗೆ ಬಾಂಬೆ ಹೈಕೋರ್ಟ್ ಮಂಗಳವಾರ ನಿರ್ದೇಶಿಸಿದೆ.</p>.<p>ಸಿದ್ದೀಕಿ ಅವರ ಪತ್ನಿ ಶೆಹಜೀನ್ ಸಿದ್ದೀಕಿ ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯೆಯಾಗಿ ಅಫಿಡವಿಟ್ ಸಲ್ಲಿಸುವಂತೆ ಮುಂಬೈ ಜಂಟಿ ಪೊಲೀಸ್ ಆಯುಕ್ತರು (ಅಪರಾಧ) ಮತ್ತು ತನಿಖಾಧಿಕಾರಿಗೆ ಸೂಚಿಸಿದೆ.</p>.<p>2024ರ ಅ.12ರಂದು ಬಾಬಾ ಹತ್ಯೆಗೀಡಾಗಿದ್ದರು.</p>.<p>ಮೂರು ಬಾರಿ ಶಾಸಕರಾಗಿದ್ದ ಸಿದ್ದೀಕಿ, ಹಿಂದಿನ ಕಾಂಗ್ರೆಸ್–ಎನ್ಸಿಪಿ ಸರ್ಕಾರದಲ್ಲಿ ವಿವಿಧ ಖಾತೆ ನಿರ್ವಹಿಸಿದ್ದಾರೆ. ಕಳೆದ ಲೋಕಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಮತ್ತು ಮಹಾ ವಿಕಾಸ್ ಆಘಾಡಿ ಮೈತ್ರಿಕೂಟವನ್ನು ತೊರೆದು ಅಜಿತ್ ಪವಾರ್ ನೇತೃತ್ವದ ಎನ್ಸಿಪಿಗೆ ಸೇರ್ಪಡೆಗೊಂಡಿದ್ದರು. ಬಾಲಿವುಡ್ನ ಖ್ಯಾತನಾಮರೊಂದಿಗೂ ಸಂಪರ್ಕ ಹೊಂದಿದ್ದರು.</p>
<p><strong>ಮುಂಬೈ</strong>: ಮಾಜಿ ಸಚಿವ ಬಾಬಾ ಸಿದ್ದೀಕಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಫಿಡವಿಟ್ ಸಲ್ಲಿಸಿ ಎಂದು ಪೊಲೀಸರಿಗೆ ಬಾಂಬೆ ಹೈಕೋರ್ಟ್ ಮಂಗಳವಾರ ನಿರ್ದೇಶಿಸಿದೆ.</p>.<p>ಸಿದ್ದೀಕಿ ಅವರ ಪತ್ನಿ ಶೆಹಜೀನ್ ಸಿದ್ದೀಕಿ ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯೆಯಾಗಿ ಅಫಿಡವಿಟ್ ಸಲ್ಲಿಸುವಂತೆ ಮುಂಬೈ ಜಂಟಿ ಪೊಲೀಸ್ ಆಯುಕ್ತರು (ಅಪರಾಧ) ಮತ್ತು ತನಿಖಾಧಿಕಾರಿಗೆ ಸೂಚಿಸಿದೆ.</p>.<p>2024ರ ಅ.12ರಂದು ಬಾಬಾ ಹತ್ಯೆಗೀಡಾಗಿದ್ದರು.</p>.<p>ಮೂರು ಬಾರಿ ಶಾಸಕರಾಗಿದ್ದ ಸಿದ್ದೀಕಿ, ಹಿಂದಿನ ಕಾಂಗ್ರೆಸ್–ಎನ್ಸಿಪಿ ಸರ್ಕಾರದಲ್ಲಿ ವಿವಿಧ ಖಾತೆ ನಿರ್ವಹಿಸಿದ್ದಾರೆ. ಕಳೆದ ಲೋಕಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಮತ್ತು ಮಹಾ ವಿಕಾಸ್ ಆಘಾಡಿ ಮೈತ್ರಿಕೂಟವನ್ನು ತೊರೆದು ಅಜಿತ್ ಪವಾರ್ ನೇತೃತ್ವದ ಎನ್ಸಿಪಿಗೆ ಸೇರ್ಪಡೆಗೊಂಡಿದ್ದರು. ಬಾಲಿವುಡ್ನ ಖ್ಯಾತನಾಮರೊಂದಿಗೂ ಸಂಪರ್ಕ ಹೊಂದಿದ್ದರು.</p>