<p><strong>ಜೈಪುರ</strong>: ದೇಶದಲ್ಲಿ ಮೊಘಲರ ಆಕ್ರಮಣದ ಸಂದರ್ಭದಲ್ಲಿ ಬಾಬರ್ ಮತ್ತು ಔರಂಗಜೇಬ್ ಬಹಳಷ್ಟು ದೇವಸ್ಥಾನಗಳನ್ನು ಕೆಡವಿ ಮಸೀದಿ ನಿರ್ಮಿಸಿದ್ದಾರೆ ಎಂದು ರಾಜಸ್ಥಾನದ ಶಿಕ್ಷಣ ಸಚಿವ ಮದನ್ ದಿಲಾವರ್ ಹೇಳಿದ್ದಾರೆ.</p><p>ಅಜ್ಮೀರ್ದಲ್ಲಿರುವ, ಸೂಫಿ ಸಂತ ಮೊಯಿನುದ್ದೀನ್ ಚಿಶ್ತಿ ದರ್ಗಾ ಒಳಗಡೆ ಶಿವನ ದೇವಸ್ಥಾನವಿದೆ ಎಂಬುದಾಗಿ ಸಲ್ಲಿಸಲಾಗಿರುವ ಅರ್ಜಿಗೆ ಸಂಬಂಧಿಸಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್ಐ), ಅಜ್ಮೀರ್ ದರ್ಗಾ ಸಮಿತಿ ಮತ್ತು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯಕ್ಕೆ ಸ್ಥಳೀಯ ನ್ಯಾಯಾಲಯವೊಂದು ನೋಟಿಸ್ ಜಾರಿ ಮಾಡಿದ್ದು, ಈ ಕುರಿತಂತೆ ಸಚಿವರು ಪ್ರತಿಕ್ರಿಯಿಸಿದ್ದಾರೆ. </p><p>ಒಂದು ವೇಳೆ ನ್ಯಾಯಾಲಯದ ಆದೇಶದ ಮೇಲೆ ಉತ್ಖನನ ನಡೆದರೆ, ಅಲ್ಲಿ ಕಂಡುಬರುವ ಅವಶೇಷಗಳ ಆಧಾರದ ಮೇಲೆ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.</p><p>ವಿಶ್ವದಾದ್ಯಂತ ಹೆಸರುವಾಸಿಯಾಗಿರುವ ಅಜ್ಮೀರ್ ದರ್ಗಾಕ್ಕೆ ಪ್ರತಿನಿತ್ಯ ಸಾವಿರಾರು ಮಂದಿ ಭೇಟಿ ನೀಡುತ್ತಾರೆ.</p><p>‘ದೇಶದ ಬಹಳಷ್ಟು ದೇಗುಲಗಳನ್ನು ಕೆಡವಿ, ಬಾಬರ್ ಮತ್ತು ಔರಂಗಜೇಬ್ ಮಸೀದಿಗಳನ್ನು ನಿರ್ಮಿಸಿರುವುದು ಸತ್ಯ. ನ್ಯಾಯಾಲಯ ಉತ್ಖನನಕ್ಕೆ ಆದೇಶಿಸಿದರೆ ಅಲ್ಲಿ ಸಿಗುವ ಅವಶೇಷಗಳ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ’ಎಂದಿದ್ದಾರೆ.</p><p>ಅಜ್ಮೀರ್ದಲ್ಲಿರುವ, ಸೂಫಿ ಸಂತ ಮೊಯಿನುದ್ದೀನ್ ಚಿಶ್ತಿ ದರ್ಗಾ ಒಳಗಡೆ ಶಿವನ ದೇವಸ್ಥಾನವಿದೆ ಎಂಬುದಾಗಿ ಹಿಂದೂ ಸೇನಾ ಸಂಘಟನೆ ಮುಖಂಡ ವಿಷ್ಣು ಗುಪ್ತ ಎಂಬುವವರು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ವಿಚಾರಣೆಯನ್ನು ಡಿಸೆಂಬರ್ 20ಕ್ಕೆ ಮುಂದೂಡಲಾಗಿದೆ.</p>.ಅಜ್ಮೀರ್: ಮೊಯಿನುದ್ದೀನ್ ಚಿಶ್ತಿ ದರ್ಗಾದಲ್ಲಿ ಶಿವನ ದೇಗುಲ ಇರುವ ಕುರಿತು ದಾವೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ</strong>: ದೇಶದಲ್ಲಿ ಮೊಘಲರ ಆಕ್ರಮಣದ ಸಂದರ್ಭದಲ್ಲಿ ಬಾಬರ್ ಮತ್ತು ಔರಂಗಜೇಬ್ ಬಹಳಷ್ಟು ದೇವಸ್ಥಾನಗಳನ್ನು ಕೆಡವಿ ಮಸೀದಿ ನಿರ್ಮಿಸಿದ್ದಾರೆ ಎಂದು ರಾಜಸ್ಥಾನದ ಶಿಕ್ಷಣ ಸಚಿವ ಮದನ್ ದಿಲಾವರ್ ಹೇಳಿದ್ದಾರೆ.</p><p>ಅಜ್ಮೀರ್ದಲ್ಲಿರುವ, ಸೂಫಿ ಸಂತ ಮೊಯಿನುದ್ದೀನ್ ಚಿಶ್ತಿ ದರ್ಗಾ ಒಳಗಡೆ ಶಿವನ ದೇವಸ್ಥಾನವಿದೆ ಎಂಬುದಾಗಿ ಸಲ್ಲಿಸಲಾಗಿರುವ ಅರ್ಜಿಗೆ ಸಂಬಂಧಿಸಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್ಐ), ಅಜ್ಮೀರ್ ದರ್ಗಾ ಸಮಿತಿ ಮತ್ತು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯಕ್ಕೆ ಸ್ಥಳೀಯ ನ್ಯಾಯಾಲಯವೊಂದು ನೋಟಿಸ್ ಜಾರಿ ಮಾಡಿದ್ದು, ಈ ಕುರಿತಂತೆ ಸಚಿವರು ಪ್ರತಿಕ್ರಿಯಿಸಿದ್ದಾರೆ. </p><p>ಒಂದು ವೇಳೆ ನ್ಯಾಯಾಲಯದ ಆದೇಶದ ಮೇಲೆ ಉತ್ಖನನ ನಡೆದರೆ, ಅಲ್ಲಿ ಕಂಡುಬರುವ ಅವಶೇಷಗಳ ಆಧಾರದ ಮೇಲೆ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.</p><p>ವಿಶ್ವದಾದ್ಯಂತ ಹೆಸರುವಾಸಿಯಾಗಿರುವ ಅಜ್ಮೀರ್ ದರ್ಗಾಕ್ಕೆ ಪ್ರತಿನಿತ್ಯ ಸಾವಿರಾರು ಮಂದಿ ಭೇಟಿ ನೀಡುತ್ತಾರೆ.</p><p>‘ದೇಶದ ಬಹಳಷ್ಟು ದೇಗುಲಗಳನ್ನು ಕೆಡವಿ, ಬಾಬರ್ ಮತ್ತು ಔರಂಗಜೇಬ್ ಮಸೀದಿಗಳನ್ನು ನಿರ್ಮಿಸಿರುವುದು ಸತ್ಯ. ನ್ಯಾಯಾಲಯ ಉತ್ಖನನಕ್ಕೆ ಆದೇಶಿಸಿದರೆ ಅಲ್ಲಿ ಸಿಗುವ ಅವಶೇಷಗಳ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ’ಎಂದಿದ್ದಾರೆ.</p><p>ಅಜ್ಮೀರ್ದಲ್ಲಿರುವ, ಸೂಫಿ ಸಂತ ಮೊಯಿನುದ್ದೀನ್ ಚಿಶ್ತಿ ದರ್ಗಾ ಒಳಗಡೆ ಶಿವನ ದೇವಸ್ಥಾನವಿದೆ ಎಂಬುದಾಗಿ ಹಿಂದೂ ಸೇನಾ ಸಂಘಟನೆ ಮುಖಂಡ ವಿಷ್ಣು ಗುಪ್ತ ಎಂಬುವವರು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ವಿಚಾರಣೆಯನ್ನು ಡಿಸೆಂಬರ್ 20ಕ್ಕೆ ಮುಂದೂಡಲಾಗಿದೆ.</p>.ಅಜ್ಮೀರ್: ಮೊಯಿನುದ್ದೀನ್ ಚಿಶ್ತಿ ದರ್ಗಾದಲ್ಲಿ ಶಿವನ ದೇಗುಲ ಇರುವ ಕುರಿತು ದಾವೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>