ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದು ಬಾಬರಿ ಮಸೀದಿ ಧ್ವಂಸ ದಿನ: ಕಟ್ಟೆಚ್ಚರ

Tight security ahead of Babri Masjid demolition anniversary
Last Updated 5 ಡಿಸೆಂಬರ್ 2019, 20:00 IST
ಅಕ್ಷರ ಗಾತ್ರ

ಅಯೋಧ್ಯಾ: ಡಿಸೆಂಬರ್ 6ರ ಬಾಬರಿ ಮಸೀದಿ ಧ್ವಂಸ ದಿನದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ರಾಜ್ಯದಾದ್ಯಂತ ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿದ್ದಾರೆ.

ಅಯೋಧ್ಯೆ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತೀರ್ಪು ನೀಡಿ ಡಿ. 6ಕ್ಕೆ ಒಂದು ತಿಂಗಳಾಗಲಿದೆ. ‘ದೇವಾಲಯಗಳ ನಗರಿ’ ಅಯೋಧ್ಯೆಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆಯೆಂದು ಉತ್ತರ ಪ್ರದೇಶದ ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

‘ಅಯೋಧ್ಯೆ ತೀರ್ಪು ಪ್ರಕಟವಾದ ದಿನ ನ. 9ರಂದು ಹೇಗೆ ವ್ಯಾಪಕ ಬಂದೋಬಸ್ತ್ ಮತ್ತು ಕಟ್ಟೆಚ್ಚರ ವಹಿಸಿದ್ದೆವೋ, ಡಿ. 6ರಂದು ಅಷ್ಟೇ ಕಟ್ಟೆಚ್ಚರ ಮತ್ತು ಬಂದೋಬಸ್ತ್ ಮಾಡಲಾಗಿದೆ. ನ.9ರಂದು ರೂಪಿಸಿದ ಯೋಜನೆಯ ಮುಂದುವರಿಕೆಯಾಗಿ ಡಿ. 6ರ ಭದ್ರತಾ ವ್ಯವಸ್ಥೆ ಇರಲಿದೆ’ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಪಿ.ವಿ. ರಾಮಶಾಸ್ತ್ರಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT