<p><strong>ಬದರಿನಾಥ</strong>: ಕೊರೊನಾ ಸಾಂಕ್ರಾಮಿಕದಿಂದ ಮುಚ್ಚಲ್ಪಟ್ಟಿದ್ದ ಬದರಿನಾಥ್ ದೇವಸ್ಥಾನವು ಭಾನುವಾರಭಕ್ತರಿಗಾಗಿ ಸಾಂಪ್ರದಾಯಿಕ ಆಚರಣೆಗಳು ಹಾಗೂ ವೇದ ಸ್ತೋತ್ರಗಳ ಪಠಣದೊಂದಿಗೆ ಪುನಃ ಆರಂಭವಾಗಿದೆ.</p>.<p>ದೇಶ, ವಿದೇಶದಿಂದ ಬಂದ ಸಾವಿರಾರು ಭಕ್ತರು ಶ್ರೀ ವಿಷ್ಣುವಿನ ದೇವಸ್ಥಾನದ ಪುನರಾರಂಭದ ಈ ವಿಶೇಷ ಸಂದರ್ಭಕ್ಕೆ ಸಾಕ್ಷಿಯಾಗಿದ್ದರು. ಪ್ರಧಾನ ಅರ್ಚಕ ಈಶ್ವರಿ ಪ್ರಸಾದ್ ನಂಬೂದರಿ ಧಾರ್ಮಿಕ ವಿಧವಿಧಾನಗಳನ್ನು ನೆರವೇರಿಸಿದರು.</p>.<p>ಇದರೊಂದಿಗೆ ಚಾರ್ ಧಾಮ್ನ ಯಾತ್ರೆಯು ಸಂಪೂರ್ಣವಾಗಿ ಆರಂಭವಾಗಿದೆ. ಮೇ 3ರಂದು ಗಂಗೋತ್ರಿ ಹಾಗೂ ಯಮುನೋತ್ರಿ ಆರಂಭವಾಗಿದ್ದವು. ಮೇ 6ರಂದು ಕೇದಾರನಾಥ ದೇಗುಲಕ್ಕೆ ಪ್ರವೇಶ ಪ್ರಾರಂಭವಾಗಿತ್ತು.</p>.<p>ಕೋವಿಡ್ನಿಂದಾಗಿ ಕಳೆದ ಎರಡು ವರ್ಷಗಳಿಂದ ಚಾರ್ಧಾಮ್ ಯಾತ್ರೆಯು ನಿಂತು ಹೋಗಿತ್ತು. ನಂತರದಲ್ಲಿ ಚಾರ್ಧಾಮ್ ಯಾತ್ರೆ ಮತ್ತೆ ಆರಂಭವಾದರೂ, ಕೋವಿಡ್ ನಿಯಮಗಳಿಂದ ಯಾತ್ರಾರ್ಥಿಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಕುಸಿದಿತ್ತು. ಇದೀಗ ಯಾವುದೇ ನಿರ್ಬಂಧವಿಲ್ಲದೆ, ಯಾತ್ರಾರ್ಥಿಗಳು ಚಾರ್ಧಾಮ್ ಯಾತ್ರೆ ಮಾಡಬಹುದಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬದರಿನಾಥ</strong>: ಕೊರೊನಾ ಸಾಂಕ್ರಾಮಿಕದಿಂದ ಮುಚ್ಚಲ್ಪಟ್ಟಿದ್ದ ಬದರಿನಾಥ್ ದೇವಸ್ಥಾನವು ಭಾನುವಾರಭಕ್ತರಿಗಾಗಿ ಸಾಂಪ್ರದಾಯಿಕ ಆಚರಣೆಗಳು ಹಾಗೂ ವೇದ ಸ್ತೋತ್ರಗಳ ಪಠಣದೊಂದಿಗೆ ಪುನಃ ಆರಂಭವಾಗಿದೆ.</p>.<p>ದೇಶ, ವಿದೇಶದಿಂದ ಬಂದ ಸಾವಿರಾರು ಭಕ್ತರು ಶ್ರೀ ವಿಷ್ಣುವಿನ ದೇವಸ್ಥಾನದ ಪುನರಾರಂಭದ ಈ ವಿಶೇಷ ಸಂದರ್ಭಕ್ಕೆ ಸಾಕ್ಷಿಯಾಗಿದ್ದರು. ಪ್ರಧಾನ ಅರ್ಚಕ ಈಶ್ವರಿ ಪ್ರಸಾದ್ ನಂಬೂದರಿ ಧಾರ್ಮಿಕ ವಿಧವಿಧಾನಗಳನ್ನು ನೆರವೇರಿಸಿದರು.</p>.<p>ಇದರೊಂದಿಗೆ ಚಾರ್ ಧಾಮ್ನ ಯಾತ್ರೆಯು ಸಂಪೂರ್ಣವಾಗಿ ಆರಂಭವಾಗಿದೆ. ಮೇ 3ರಂದು ಗಂಗೋತ್ರಿ ಹಾಗೂ ಯಮುನೋತ್ರಿ ಆರಂಭವಾಗಿದ್ದವು. ಮೇ 6ರಂದು ಕೇದಾರನಾಥ ದೇಗುಲಕ್ಕೆ ಪ್ರವೇಶ ಪ್ರಾರಂಭವಾಗಿತ್ತು.</p>.<p>ಕೋವಿಡ್ನಿಂದಾಗಿ ಕಳೆದ ಎರಡು ವರ್ಷಗಳಿಂದ ಚಾರ್ಧಾಮ್ ಯಾತ್ರೆಯು ನಿಂತು ಹೋಗಿತ್ತು. ನಂತರದಲ್ಲಿ ಚಾರ್ಧಾಮ್ ಯಾತ್ರೆ ಮತ್ತೆ ಆರಂಭವಾದರೂ, ಕೋವಿಡ್ ನಿಯಮಗಳಿಂದ ಯಾತ್ರಾರ್ಥಿಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಕುಸಿದಿತ್ತು. ಇದೀಗ ಯಾವುದೇ ನಿರ್ಬಂಧವಿಲ್ಲದೆ, ಯಾತ್ರಾರ್ಥಿಗಳು ಚಾರ್ಧಾಮ್ ಯಾತ್ರೆ ಮಾಡಬಹುದಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>