<p><strong>ನವದೆಹಲಿ: </strong>ಪ್ರಸಿದ್ಧ ಯಾತ್ರಾಸ್ಥಳ ಉತ್ತರಾಖಂಡದ ಬದರಿನಾಥ ದೇಗುಲದ ಬಾಗಿಲನ್ನು ಇಂದು ಮುಂಜಾನೆ 4.30ಕ್ಕೆ ತೆರೆಯಲಾಗಿದೆ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಮುಖ್ಯ ಅರ್ಚಕ ಸೇರಿದಂತೆ 28ಜನರಿಗೆ ಮಾತ್ರ ದೇವಾಲಯ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ಭಕ್ತಾಧಿಗಳಿಗೆ ದೇವಸ್ಥಾನ ಪ್ರವೇಶಕ್ಕೆ ಅನುಮತಿ ಇರುವುದಿಲ್ಲ. ಕೋವಿಡ್–19 ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ’ ಎಂದು ಜೋಶಿಮಠದ ಉಪ ವಿಭಾಗೀಯ ಅಧಿಕಾರಿ ಅನಿಲ್ ಚನ್ಯಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಆರು ತಿಂಗಳ ಚಳಿಗಾಲದ ವಿರಾಮದ ನಂತರ ಏಪ್ರಿಲ್ 29ರಂದು ಕೇದಾರನಾಥ ದೇವಾಲಯದ ದ್ವಾರಗಳನ್ನು ತೆರೆಯಲಾಗಿತ್ತು. ಆದರೆ, ಕೊರೊನಾ ವೈರಸ್ ಲಾಕ್ಡೌನ್ ಹಿನ್ನೆಲೆ ಯಾತ್ರಾರ್ಥಿಗಳ ಪ್ರವೇಶಕ್ಕೆ ಅನುಮತಿ ನಿರಾಕರಿಸಲಾಗಿತ್ತು.</p>.<p>ಇಂದು ಬದರಿನಾಥ ದೇವಾಲಯವನ್ನು ತೆರೆಯಲಾಗುವುದು ಎಂದು ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ತಿಳಿಸಿದ್ದರು. ದೇವಾಲಯ ಮುಚ್ಚಿದ ಕಾರಣ ವಾರ್ಷಿಕ ಪಂಚಮುಖಿ ಯಾತ್ರೆಯನ್ನು ಯಾತ್ರಿಕರಿಲ್ಲದೆ ನಡೆಸಲಾಯಿತು.</p>.<p>ಚಾರ್ ಧಾಮ್ ತೀರ್ಥಯಾತ್ರೆಯ ಒಂದು ಭಾಗವಾಗಿರುವ ಈ ಯಾತ್ರೆಯನ್ನು ಸಾಮಾನ್ಯವಾಗಿ ಪ್ರತಿವರ್ಷ 1,000 ಕ್ಕೂ ಹೆಚ್ಚು ಯಾತ್ರಾರ್ಥಿಗಳೊಂದಿಗೆ ಸೇನೆಯ ಬೆಟಾಲಿಯನ್ ನೇತೃತ್ವದಲ್ಲಿ ನಡೆಸಲಾಗುತ್ತಿತ್ತು<wbr />.ಆದರೆ, ಲಾಕ್ಡೌನ್ ಹಿನ್ನೆಲೆ ಕೇವಲ ಐದು ಮಂದಿಯಾತ್ರೆ ನೆರವೇರಿಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಪ್ರಸಿದ್ಧ ಯಾತ್ರಾಸ್ಥಳ ಉತ್ತರಾಖಂಡದ ಬದರಿನಾಥ ದೇಗುಲದ ಬಾಗಿಲನ್ನು ಇಂದು ಮುಂಜಾನೆ 4.30ಕ್ಕೆ ತೆರೆಯಲಾಗಿದೆ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಮುಖ್ಯ ಅರ್ಚಕ ಸೇರಿದಂತೆ 28ಜನರಿಗೆ ಮಾತ್ರ ದೇವಾಲಯ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>‘ಭಕ್ತಾಧಿಗಳಿಗೆ ದೇವಸ್ಥಾನ ಪ್ರವೇಶಕ್ಕೆ ಅನುಮತಿ ಇರುವುದಿಲ್ಲ. ಕೋವಿಡ್–19 ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ’ ಎಂದು ಜೋಶಿಮಠದ ಉಪ ವಿಭಾಗೀಯ ಅಧಿಕಾರಿ ಅನಿಲ್ ಚನ್ಯಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಆರು ತಿಂಗಳ ಚಳಿಗಾಲದ ವಿರಾಮದ ನಂತರ ಏಪ್ರಿಲ್ 29ರಂದು ಕೇದಾರನಾಥ ದೇವಾಲಯದ ದ್ವಾರಗಳನ್ನು ತೆರೆಯಲಾಗಿತ್ತು. ಆದರೆ, ಕೊರೊನಾ ವೈರಸ್ ಲಾಕ್ಡೌನ್ ಹಿನ್ನೆಲೆ ಯಾತ್ರಾರ್ಥಿಗಳ ಪ್ರವೇಶಕ್ಕೆ ಅನುಮತಿ ನಿರಾಕರಿಸಲಾಗಿತ್ತು.</p>.<p>ಇಂದು ಬದರಿನಾಥ ದೇವಾಲಯವನ್ನು ತೆರೆಯಲಾಗುವುದು ಎಂದು ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ತಿಳಿಸಿದ್ದರು. ದೇವಾಲಯ ಮುಚ್ಚಿದ ಕಾರಣ ವಾರ್ಷಿಕ ಪಂಚಮುಖಿ ಯಾತ್ರೆಯನ್ನು ಯಾತ್ರಿಕರಿಲ್ಲದೆ ನಡೆಸಲಾಯಿತು.</p>.<p>ಚಾರ್ ಧಾಮ್ ತೀರ್ಥಯಾತ್ರೆಯ ಒಂದು ಭಾಗವಾಗಿರುವ ಈ ಯಾತ್ರೆಯನ್ನು ಸಾಮಾನ್ಯವಾಗಿ ಪ್ರತಿವರ್ಷ 1,000 ಕ್ಕೂ ಹೆಚ್ಚು ಯಾತ್ರಾರ್ಥಿಗಳೊಂದಿಗೆ ಸೇನೆಯ ಬೆಟಾಲಿಯನ್ ನೇತೃತ್ವದಲ್ಲಿ ನಡೆಸಲಾಗುತ್ತಿತ್ತು<wbr />.ಆದರೆ, ಲಾಕ್ಡೌನ್ ಹಿನ್ನೆಲೆ ಕೇವಲ ಐದು ಮಂದಿಯಾತ್ರೆ ನೆರವೇರಿಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>