<p>ಬಾಗಲಕೋಟೆ: ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತ ಔಷಧ ವ್ಯಾಪಾರಿಗಳ ಸಂಘದ ಜಿಲ್ಲಾ ಘಟಕವು ಮೇ 20 ರಂದು ಮುಷ್ಕರ ಹಮ್ಮಿಕೊಂಡಿದೆ ಎಂದು ಸಂಘದ ಜಿಲ್ಲಾ ಕಾರ್ಯದರ್ಶಿ ಬಿ.ಆರ್.ಕಟ್ಟಿ ಹೇಳಿದರು.</p>.<p>ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಔಷಧಗಳ ಆನ್ಲೈನ್ ಮಾರಾಟ ನಿಲ್ಲಿಸುವುದು. ಕಾರ್ಪೋರೇಟ್ ವಿನಾಯಿತಿ ನಿಲ್ಲಿಸುವುದು. ನಕಲಿ ಔಷಧ ದೂರವಿಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಾಗುವುದು ಎಂದರು.</p>.<p>ಬೆಳಿಗ್ಗೆ 11ಕ್ಕೆ ನವನಗರದ ಜಿಲ್ಲಾಡಳಿತ ಭವನದ ಮುಂದೆ ನಡೆಯುವ ಪ್ರತಿಭಟನೆಯಲ್ಲಿ ಎಲ್ಲಾ ಔಷಧ ವ್ಯಾಪಾರಿಗಳು ಅಂಗಡಿ ಮುಚ್ಚಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.</p>.<p>ಈ ಮುಷ್ಕರವು ರಾಷ್ಟ್ರದಾದ್ಯಂತ ನಡೆಯಲಿದ್ದು, ಸಂಘದ ಎಲ್ಲ ಸದಸ್ಯರು ಸ್ವಯಂ ಪ್ರೇರಿತರಾಗಿ ಪ್ರತಿಭಟನೆಯಲ್ಲಿ ಭಾಗವಹಿಸಬೇಕು. ದೇಶದಲ್ಲಿ 12.40 ಲಕ್ಷಕ್ಕೂ ಹೆಚ್ಚಕ್ಕೂ ಔಷಧ ವ್ಯಾಪಾರಿಗಳಿದ್ದು, ಆನ್ಲೈನ್ ಪೋರ್ಟಲ್ಗಳ ಅನಿಯಂತ್ರಿತವಾಗಿ ಕಾರ್ಯ ನಿರ್ವಹಿಸುವುದರಿಂದ ಅದರ ವಿರುದ್ಧ ಬೀದಿಗಿಳಿದು ಪ್ರತಿಭಟನೆ ಮಾಡಬೇಕಾಗಿದೆ ಎಂದರು.</p>.<p>ಅಕ್ರಮಣಕಾರಿ ಬೆಲೆ ನಿಗದಿ, ತುರ್ತು ಅಧಿಸೂಚನೆಗಳನ್ನು ಹಿಂತೆಗೆದುಕೊಳ್ಳಬೇಕು. ಕೋವಿಡ್ ಸಮಯದಲ್ಲಿ ಮಾಡಲಾದ ಅಧಿಸೂಚನೆ ಮುಂದುವರಿಸಿದ್ದು, ಅದನ್ನು ತಕ್ಷಣವೇ ರದ್ದುಗೊಳಿಸಬೇಕು. ಸರ್ಕಾರ ಸೂಕ್ತ ಕ್ರಮಕೈಗೊಳ್ಳದಿದ್ದರೆ ಅನಿರ್ದಿಷ್ಠಾವಧಿ ಮುಷ್ಕರ ಮಾಡಲಾಗುವುದು ಎಂದು ಹೇಳಿದರು.</p>.<p>ಅಧ್ಯಕ್ಷ ಅಶೋಕ ಬಿಜ್ಜಳ, ಪ್ರಭು ಬೀಳಗಿ, ಗುರುದತ್ತ ಗುಳೇದ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-19-1362661045</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಗಲಕೋಟೆ: ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತ ಔಷಧ ವ್ಯಾಪಾರಿಗಳ ಸಂಘದ ಜಿಲ್ಲಾ ಘಟಕವು ಮೇ 20 ರಂದು ಮುಷ್ಕರ ಹಮ್ಮಿಕೊಂಡಿದೆ ಎಂದು ಸಂಘದ ಜಿಲ್ಲಾ ಕಾರ್ಯದರ್ಶಿ ಬಿ.ಆರ್.ಕಟ್ಟಿ ಹೇಳಿದರು.</p>.<p>ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಔಷಧಗಳ ಆನ್ಲೈನ್ ಮಾರಾಟ ನಿಲ್ಲಿಸುವುದು. ಕಾರ್ಪೋರೇಟ್ ವಿನಾಯಿತಿ ನಿಲ್ಲಿಸುವುದು. ನಕಲಿ ಔಷಧ ದೂರವಿಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಾಗುವುದು ಎಂದರು.</p>.<p>ಬೆಳಿಗ್ಗೆ 11ಕ್ಕೆ ನವನಗರದ ಜಿಲ್ಲಾಡಳಿತ ಭವನದ ಮುಂದೆ ನಡೆಯುವ ಪ್ರತಿಭಟನೆಯಲ್ಲಿ ಎಲ್ಲಾ ಔಷಧ ವ್ಯಾಪಾರಿಗಳು ಅಂಗಡಿ ಮುಚ್ಚಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.</p>.<p>ಈ ಮುಷ್ಕರವು ರಾಷ್ಟ್ರದಾದ್ಯಂತ ನಡೆಯಲಿದ್ದು, ಸಂಘದ ಎಲ್ಲ ಸದಸ್ಯರು ಸ್ವಯಂ ಪ್ರೇರಿತರಾಗಿ ಪ್ರತಿಭಟನೆಯಲ್ಲಿ ಭಾಗವಹಿಸಬೇಕು. ದೇಶದಲ್ಲಿ 12.40 ಲಕ್ಷಕ್ಕೂ ಹೆಚ್ಚಕ್ಕೂ ಔಷಧ ವ್ಯಾಪಾರಿಗಳಿದ್ದು, ಆನ್ಲೈನ್ ಪೋರ್ಟಲ್ಗಳ ಅನಿಯಂತ್ರಿತವಾಗಿ ಕಾರ್ಯ ನಿರ್ವಹಿಸುವುದರಿಂದ ಅದರ ವಿರುದ್ಧ ಬೀದಿಗಿಳಿದು ಪ್ರತಿಭಟನೆ ಮಾಡಬೇಕಾಗಿದೆ ಎಂದರು.</p>.<p>ಅಕ್ರಮಣಕಾರಿ ಬೆಲೆ ನಿಗದಿ, ತುರ್ತು ಅಧಿಸೂಚನೆಗಳನ್ನು ಹಿಂತೆಗೆದುಕೊಳ್ಳಬೇಕು. ಕೋವಿಡ್ ಸಮಯದಲ್ಲಿ ಮಾಡಲಾದ ಅಧಿಸೂಚನೆ ಮುಂದುವರಿಸಿದ್ದು, ಅದನ್ನು ತಕ್ಷಣವೇ ರದ್ದುಗೊಳಿಸಬೇಕು. ಸರ್ಕಾರ ಸೂಕ್ತ ಕ್ರಮಕೈಗೊಳ್ಳದಿದ್ದರೆ ಅನಿರ್ದಿಷ್ಠಾವಧಿ ಮುಷ್ಕರ ಮಾಡಲಾಗುವುದು ಎಂದು ಹೇಳಿದರು.</p>.<p>ಅಧ್ಯಕ್ಷ ಅಶೋಕ ಬಿಜ್ಜಳ, ಪ್ರಭು ಬೀಳಗಿ, ಗುರುದತ್ತ ಗುಳೇದ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-19-1362661045</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>