<p><strong>ಸುಲ್ತಾನಪುರ(ಉತ್ತರ ಪ್ರದೇಶ)</strong>: ಕೋವಿಡ್–19 ನಿರ್ಬಂಧಗಳ ಉಲ್ಲಂಘನೆಗೆ ಸಂಬಂಧಿಸಿದ ಪ್ರಕರಣದಲ್ಲಿ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ವಿರುದ್ಧ ಇಲ್ಲಿನ ಸಂಸದರ–ಶಾಸಕರ ನ್ಯಾಯಾಲಯ ಗುರುವಾರ ಬಂಧನ ವಾರಂಟ್ ಹೊರಡಿಸಿದೆ.</p>.<p>‘ಸಂಜಯ್ ಸಿಂಗ್ ಅವರು ಹಲವು ಬಾರಿ ವಿಚಾರಣೆಗೆ ಗೈರಾಗಿರುವ ಹಿನ್ನೆಲೆಯಲ್ಲಿ, ನ್ಯಾಯಾಧೀಶ ಶುಭಂ ವರ್ಮಾ ಅವರು ಸಿಂಗ್ ವಿರುದ್ಧ ವಾರಂಟ್ ಜಾರಿ ಮಾಡಿದ್ದಾರೆ’ ಎಂದು ವಿಶೇಷ ಸರ್ಕಾರಿ ವಕೀಲ ವೈಭವ್ ಪಾಂಡೆ ತಿಳಿಸಿದ್ದಾರೆ.</p>.<p>2021ರ ಏಪ್ರಿಲ್ 13ರಂದು ಸಂಜಯ್ ಸಿಂಗ್ ವಿರುದ್ಧ ಪ್ರಕರಣ ದಾಖಲಾಗಿತ್ತು.</p>.<p>‘ಪರವಾನಗಿ ಇಲ್ಲದೆಯೇ ಸಂಜಯ್ ಸಿಂಗ್ ಅವರು ಸುಲ್ತಾನಪುರ ಜಿಲ್ಲೆಯ ಹಸನ್ಪುರದಲ್ಲಿ ಆಗ ನಡೆಸಿದ್ದ ಸಭೆಯಲ್ಲಿ 50–60 ಜನರು ಪಾಲ್ಗೊಂಡಿದ್ದರು. ಈ ಹಿನ್ನೆಲೆಯಲ್ಲಿ, ಸಾಂಕ್ರಾಮಿಕ ರೋಗಗಳ ಕಾಯ್ದೆ ಉಲ್ಲಂಘನೆ ಆರೋಪದಡಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು’ ಎಂದು ಪಾಂಡೆ ತಿಳಿಸಿದ್ದಾರೆ.</p>.<p>ವಿಚಾರಣೆ ನಡೆಸಿದ್ದ ಪೊಲೀಸರು, ಸಂಜಯ್ ಸಿಂಗ್ ಹಾಗೂ ಮಕ್ಸೂದ್ ಅನ್ಸಾರಿ, ಸಲೀಮ್ ಅನ್ಸಾರಿ, ಜಗದೀಶ್ ಯಾದವ್, ಮಕ್ಸುದ್ ಸುಕಾಯ್, ಧರ್ಮರಾಜ್, ಜೀಶನ್, ಸೆಹಬನ್, ಸಿಕಂದರ್, ಜಲೀಲ್ ಹಾಗೂ ಅಜಯ್ ಎಂಬುವವರ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದರು.</p>.<p>ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಜೂನ್ 29ಕ್ಕೆ ಮುಂದೂಡಿದೆ ಎಂದೂ ಪಾಂಡೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುಲ್ತಾನಪುರ(ಉತ್ತರ ಪ್ರದೇಶ)</strong>: ಕೋವಿಡ್–19 ನಿರ್ಬಂಧಗಳ ಉಲ್ಲಂಘನೆಗೆ ಸಂಬಂಧಿಸಿದ ಪ್ರಕರಣದಲ್ಲಿ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ವಿರುದ್ಧ ಇಲ್ಲಿನ ಸಂಸದರ–ಶಾಸಕರ ನ್ಯಾಯಾಲಯ ಗುರುವಾರ ಬಂಧನ ವಾರಂಟ್ ಹೊರಡಿಸಿದೆ.</p>.<p>‘ಸಂಜಯ್ ಸಿಂಗ್ ಅವರು ಹಲವು ಬಾರಿ ವಿಚಾರಣೆಗೆ ಗೈರಾಗಿರುವ ಹಿನ್ನೆಲೆಯಲ್ಲಿ, ನ್ಯಾಯಾಧೀಶ ಶುಭಂ ವರ್ಮಾ ಅವರು ಸಿಂಗ್ ವಿರುದ್ಧ ವಾರಂಟ್ ಜಾರಿ ಮಾಡಿದ್ದಾರೆ’ ಎಂದು ವಿಶೇಷ ಸರ್ಕಾರಿ ವಕೀಲ ವೈಭವ್ ಪಾಂಡೆ ತಿಳಿಸಿದ್ದಾರೆ.</p>.<p>2021ರ ಏಪ್ರಿಲ್ 13ರಂದು ಸಂಜಯ್ ಸಿಂಗ್ ವಿರುದ್ಧ ಪ್ರಕರಣ ದಾಖಲಾಗಿತ್ತು.</p>.<p>‘ಪರವಾನಗಿ ಇಲ್ಲದೆಯೇ ಸಂಜಯ್ ಸಿಂಗ್ ಅವರು ಸುಲ್ತಾನಪುರ ಜಿಲ್ಲೆಯ ಹಸನ್ಪುರದಲ್ಲಿ ಆಗ ನಡೆಸಿದ್ದ ಸಭೆಯಲ್ಲಿ 50–60 ಜನರು ಪಾಲ್ಗೊಂಡಿದ್ದರು. ಈ ಹಿನ್ನೆಲೆಯಲ್ಲಿ, ಸಾಂಕ್ರಾಮಿಕ ರೋಗಗಳ ಕಾಯ್ದೆ ಉಲ್ಲಂಘನೆ ಆರೋಪದಡಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು’ ಎಂದು ಪಾಂಡೆ ತಿಳಿಸಿದ್ದಾರೆ.</p>.<p>ವಿಚಾರಣೆ ನಡೆಸಿದ್ದ ಪೊಲೀಸರು, ಸಂಜಯ್ ಸಿಂಗ್ ಹಾಗೂ ಮಕ್ಸೂದ್ ಅನ್ಸಾರಿ, ಸಲೀಮ್ ಅನ್ಸಾರಿ, ಜಗದೀಶ್ ಯಾದವ್, ಮಕ್ಸುದ್ ಸುಕಾಯ್, ಧರ್ಮರಾಜ್, ಜೀಶನ್, ಸೆಹಬನ್, ಸಿಕಂದರ್, ಜಲೀಲ್ ಹಾಗೂ ಅಜಯ್ ಎಂಬುವವರ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದರು.</p>.<p>ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಜೂನ್ 29ಕ್ಕೆ ಮುಂದೂಡಿದೆ ಎಂದೂ ಪಾಂಡೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>