ನವದೆಹಲಿ: ‘ಜಿಹಾದಿಗಳು ಕಳೆದ ಎರಡು ವರ್ಷಗಳಲ್ಲಿ ಬಜರಂಗ ದಳದ 9 ಕಾರ್ಯಕರ್ತರನ್ನು ಹತ್ಯೆ ಮಾಡಿದ್ದು, 32 ಮಂದಿಯ ಮೇಲೆ ದಾಳಿ ನಡೆಸಿದ್ದಾರೆ. ಇದನ್ನು ಖಂಡಿಸಿ ಬಜರಂಗ ದಳವು ದೇಶದಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಇದೇ 17 ಮತ್ತು 18ರಂದು ಪ್ರತಿಭಟನೆ ನಡೆಸಲಿದೆ’ ಎಂದು ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ಸೋಮವಾರ ಪ್ರಕಟಣೆಯಲ್ಲಿ ತಿಳಿಸಿದೆ.