ನವದೆಹಲಿ: ಜನವರಿ 3ರಂದು ನನಕಾನಾ ಸಾಹಿಬ್ ಗುರುದ್ವಾರದ ಮೇಲೆ ನಡೆದ ದಾಳಿ ಖಂಡಿಸಿ ಬಜರಂಗ ದಳ ಮತ್ತು ದುರ್ಗಾವಾಹಿನಿ ಕಾರ್ಯಕರ್ತರು ಮಂಗಳವಾರ ದೆಹಲಿಯಲ್ಲಿರುವ ಪಾಕಿಸ್ತಾನ ಹೈಕಮಿಷನ್ ಕಚೇರಿ ಬಳಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಭದ್ರತಾ ಪಡೆ ಮತ್ತು ಪ್ರತಿಭಟನಾಕಾರರ ನಡುವೆ ಜಟಾಪಟಿ ನಡೆದಿದ್ದು 10 ಮಂದಿ ಪ್ರತಿಭಟನಕಾರರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.