<p><strong>ಲಖನೌ: </strong>ಕೊಲೆ ಪ್ರಕರಣವೊಂದರಲ್ಲಿ ಬಂಧನಕ್ಕೊಳಗಾಗಿದ್ದ ಸ್ಥಳೀಯ ಪಕ್ಷವೊಂದರ ಮುಖಂಡನ ಪರವಾಗಿ ಹೇಳಿಕೆ ನೀಡಿದ್ದ ತನ್ನ ಪಕ್ಷದ ಶಾಸಕ ಸುರೇಂದ್ರ ಸಿಂಗ್ಗೆ ಉತ್ತರ ಪ್ರದೇಶದ ಸ್ಥಳೀಯ ಬಿಜೆಪಿ ಘಟಕ ಶೋಕಾಸ್ ನೋಟಿಸ್ ನೀಡಿದೆ.</p>.<p>‘ನೋಟಿಸ್ ತಲುಪಿದ ಒಂದು ವಾರದೊಳಗೆ ಪ್ರತಿಕ್ರಿಯೆ ನೀಡಬೇಕು. ಅಲ್ಲಿವರೆಗೂ ಯಾವುದೇ ಹೇಳಿಕೆ ನೀಡಬಾರದು‘ ಎಂದು ಸೂಚಿಸಿರುವುದಾಗಿ ಬಿಜೆಪಿ ಮುಖಂಡ ಸ್ವತಂತ್ರ ದೇವ್ ಸಿಂಗ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.</p>.<p>ಅಂಗಡಿಗಳಿಗೆ ಪಡಿತರ ವಿತರಿಸುವ ವಿಷಯಕ್ಕೆ ಸಂಬಂಧಿಸಿದಂತೆ ಬಲ್ಲಿಯಾ ಜಿಲ್ಲೆಯ ದುರ್ಜನ್ಪುರ ಹಳ್ಳಿಯಲ್ಲಿ ನಡೆದ ಘರ್ಷಣೆಯಲ್ಲಿ, ಸ್ಥಳೀಯ ಪಕ್ಷದ ಮುಖಂಡ ಧೀರೇಂದ್ರ ಪ್ರತಾಪ್ ಸಿಂಗ್, 46 ವರ್ಷದ ವ್ಯಕ್ತಿಯೊಬ್ಬನ ಮೇಲೆ ಗುಂಡು ಹಾರಿಸಿದ. ಘಟನೆಯಲ್ಲಿ ಆ ವ್ಯಕ್ತಿ ಸಾವನ್ನಪ್ಪಿದ. ಘಟನೆಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ ಶಾಸಕ ಸುರೇಂದ್ರ ಸಿಂಗ್, ‘ಪರಿಸ್ಥಿತಿ ಕೈ ಮೀರಿತ್ತು. ಹಾಗಾಗಿ ಅವರು ಆತ್ಮ ರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ‘ ಎಂದು ಧೀರೇಂದ್ರ ಸಿಂಗ್ ಕೃತ್ಯವನ್ನು ಸಮರ್ಥಿಸಿಕೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ: </strong>ಕೊಲೆ ಪ್ರಕರಣವೊಂದರಲ್ಲಿ ಬಂಧನಕ್ಕೊಳಗಾಗಿದ್ದ ಸ್ಥಳೀಯ ಪಕ್ಷವೊಂದರ ಮುಖಂಡನ ಪರವಾಗಿ ಹೇಳಿಕೆ ನೀಡಿದ್ದ ತನ್ನ ಪಕ್ಷದ ಶಾಸಕ ಸುರೇಂದ್ರ ಸಿಂಗ್ಗೆ ಉತ್ತರ ಪ್ರದೇಶದ ಸ್ಥಳೀಯ ಬಿಜೆಪಿ ಘಟಕ ಶೋಕಾಸ್ ನೋಟಿಸ್ ನೀಡಿದೆ.</p>.<p>‘ನೋಟಿಸ್ ತಲುಪಿದ ಒಂದು ವಾರದೊಳಗೆ ಪ್ರತಿಕ್ರಿಯೆ ನೀಡಬೇಕು. ಅಲ್ಲಿವರೆಗೂ ಯಾವುದೇ ಹೇಳಿಕೆ ನೀಡಬಾರದು‘ ಎಂದು ಸೂಚಿಸಿರುವುದಾಗಿ ಬಿಜೆಪಿ ಮುಖಂಡ ಸ್ವತಂತ್ರ ದೇವ್ ಸಿಂಗ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.</p>.<p>ಅಂಗಡಿಗಳಿಗೆ ಪಡಿತರ ವಿತರಿಸುವ ವಿಷಯಕ್ಕೆ ಸಂಬಂಧಿಸಿದಂತೆ ಬಲ್ಲಿಯಾ ಜಿಲ್ಲೆಯ ದುರ್ಜನ್ಪುರ ಹಳ್ಳಿಯಲ್ಲಿ ನಡೆದ ಘರ್ಷಣೆಯಲ್ಲಿ, ಸ್ಥಳೀಯ ಪಕ್ಷದ ಮುಖಂಡ ಧೀರೇಂದ್ರ ಪ್ರತಾಪ್ ಸಿಂಗ್, 46 ವರ್ಷದ ವ್ಯಕ್ತಿಯೊಬ್ಬನ ಮೇಲೆ ಗುಂಡು ಹಾರಿಸಿದ. ಘಟನೆಯಲ್ಲಿ ಆ ವ್ಯಕ್ತಿ ಸಾವನ್ನಪ್ಪಿದ. ಘಟನೆಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ ಶಾಸಕ ಸುರೇಂದ್ರ ಸಿಂಗ್, ‘ಪರಿಸ್ಥಿತಿ ಕೈ ಮೀರಿತ್ತು. ಹಾಗಾಗಿ ಅವರು ಆತ್ಮ ರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ‘ ಎಂದು ಧೀರೇಂದ್ರ ಸಿಂಗ್ ಕೃತ್ಯವನ್ನು ಸಮರ್ಥಿಸಿಕೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>