<p><strong>ನವದೆಹಲಿ:</strong> ‘ಪಂಜಾಬ್ ಮಾಜಿ ಮುಖ್ಯಮಂತ್ರಿ ಬಿಯಾಂತ್ ಸಿಂಗ್ ಅವರ ಹತ್ಯೆ ಪ್ರಕರಣದಲ್ಲಿ ಮರಣ ದಂಡನೆಗೆ ಗುರಿಯಾಗಿರುವ ಬಲ್ವಂತ್ ಸಿಂಗ್ ರಾಜೋನಾನನ್ನು ಇನ್ನೂ ಯಾಕೆ ಗಲ್ಲಿಗೇರಿಸಿಲ್ಲ’ ಎಂದು ಕೇಂದ್ರ ಸರ್ಕಾರವನ್ನು ಸುಪ್ರೀಂ ಕೋರ್ಟ್ ಬುಧವಾರ ಪ್ರಶ್ನಿಸಿದೆ.</p>.<p>ಕ್ಷಮಾದಾನ ಕೋರಿ ತಾನು ಸಲ್ಲಿಸಿದ್ದ ಅರ್ಜಿ ಕುರಿತು ನಿರ್ಧಾರ ಕೈಗೊಳ್ಳುವಲ್ಲಿ ವಿಳಂಬವಾಗಿದೆ. ಹೀಗಾಗಿ, ತನಗೆ ವಿಧಿಸಿರುವ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸುವಂತೆ ಕೋರಿ ರಾಜೋನಾ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ವೇಳೆ, ಸುಪ್ರೀಂ ಕೋರ್ಟ್ ಈ ಪ್ರಶ್ನೆ ಕೇಳಿದೆ.</p>.<p>ನ್ಯಾಯಮೂರ್ತಿಗಳಾದ ವಿಕ್ರಮನಾಥ್, ಸಂದೀಪ್ ಮೆಹ್ತಾ ಹಾಗೂ ಎನ್.ವಿ.ಅಂಜಾರಿಯಾ ಅವರು ಇದ್ದ ಪೀಠವು ಅರ್ಜಿ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ, ‘ಬಿಯಾಂತ್ ಸಿಂಗ್ ಹತ್ಯೆ ಗಂಭೀರ ಅಪರಾಧ’ ಎಂದು ಕೇಂದ್ರದ ಪರ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ.ನಟರಾಜ್ ಪೀಠಕ್ಕೆ ತಿಳಿಸಿದರು.</p>.<p>ಆಗ, ‘ಹಾಗಾದರೆ, ಈವರೆಗೆ ಆತನನ್ನು ಯಾಕೆ ಗಲ್ಲಿಗೇರಿಸಿಲ್ಲ? ಈ ಲೋಪಕ್ಕೆ ಯಾರನ್ನು ದೂರಬೇಕು’ ಎಂದು ಪ್ರಶ್ನಿಸಿದ ಪೀಠ, ‘ಆತನಿಗೆ ವಿಧಿಸಿರುವ ಗಲ್ಲು ಶಿಕ್ಷೆಗೆ ನ್ಯಾಯಾಲಯವಂತೂ ತಡೆ ನೀಡಿಲ್ಲ’ ಎಂದು ಹೇಳಿತು.</p>.<p>‘ನನ್ನ ಕಕ್ಷಿದಾರ ಸಲ್ಲಿಸಿರುವ ಕ್ಷಮಾದಾನ ಅರ್ಜಿ ಕುರಿತಂತೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ರಾಜೋನಾ ಭಾರತದ ಪ್ರಜೆ. ಈ ವಿಚಾರ ಭಾರತ ಮತ್ತು ಪಾಕಿಸ್ತಾನ ನಡುವಿನ ವ್ಯಾಜ್ಯವಲ್ಲ’ ಎಂದು ರಾಜೋನಾ ಪರ ಹಾಜರಿದ್ದ ಹಿರಿಯ ವಕೀಲ ಮುಕುಲ್ ರೋಹಟಗಿ ಹೇಳಿದರು.</p>.<p>ಆಗ, ಸಂಬಂಧಪಟ್ಟವರಿಂದ ಮಾಹಿತಿ ಪಡೆದು, ಪೀಠಕ್ಕೆ ತಿಳಿಸುವುದಾಗಿ ನಟರಾಜ್ ಹೇಳಿದರು. ವಾದ, ಪ್ರತಿವಾದಗಳನ್ನು ಅಲಿಸಿದ ಪೀಠವು, ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 15ಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಪಂಜಾಬ್ ಮಾಜಿ ಮುಖ್ಯಮಂತ್ರಿ ಬಿಯಾಂತ್ ಸಿಂಗ್ ಅವರ ಹತ್ಯೆ ಪ್ರಕರಣದಲ್ಲಿ ಮರಣ ದಂಡನೆಗೆ ಗುರಿಯಾಗಿರುವ ಬಲ್ವಂತ್ ಸಿಂಗ್ ರಾಜೋನಾನನ್ನು ಇನ್ನೂ ಯಾಕೆ ಗಲ್ಲಿಗೇರಿಸಿಲ್ಲ’ ಎಂದು ಕೇಂದ್ರ ಸರ್ಕಾರವನ್ನು ಸುಪ್ರೀಂ ಕೋರ್ಟ್ ಬುಧವಾರ ಪ್ರಶ್ನಿಸಿದೆ.</p>.<p>ಕ್ಷಮಾದಾನ ಕೋರಿ ತಾನು ಸಲ್ಲಿಸಿದ್ದ ಅರ್ಜಿ ಕುರಿತು ನಿರ್ಧಾರ ಕೈಗೊಳ್ಳುವಲ್ಲಿ ವಿಳಂಬವಾಗಿದೆ. ಹೀಗಾಗಿ, ತನಗೆ ವಿಧಿಸಿರುವ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸುವಂತೆ ಕೋರಿ ರಾಜೋನಾ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ವೇಳೆ, ಸುಪ್ರೀಂ ಕೋರ್ಟ್ ಈ ಪ್ರಶ್ನೆ ಕೇಳಿದೆ.</p>.<p>ನ್ಯಾಯಮೂರ್ತಿಗಳಾದ ವಿಕ್ರಮನಾಥ್, ಸಂದೀಪ್ ಮೆಹ್ತಾ ಹಾಗೂ ಎನ್.ವಿ.ಅಂಜಾರಿಯಾ ಅವರು ಇದ್ದ ಪೀಠವು ಅರ್ಜಿ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ, ‘ಬಿಯಾಂತ್ ಸಿಂಗ್ ಹತ್ಯೆ ಗಂಭೀರ ಅಪರಾಧ’ ಎಂದು ಕೇಂದ್ರದ ಪರ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ.ನಟರಾಜ್ ಪೀಠಕ್ಕೆ ತಿಳಿಸಿದರು.</p>.<p>ಆಗ, ‘ಹಾಗಾದರೆ, ಈವರೆಗೆ ಆತನನ್ನು ಯಾಕೆ ಗಲ್ಲಿಗೇರಿಸಿಲ್ಲ? ಈ ಲೋಪಕ್ಕೆ ಯಾರನ್ನು ದೂರಬೇಕು’ ಎಂದು ಪ್ರಶ್ನಿಸಿದ ಪೀಠ, ‘ಆತನಿಗೆ ವಿಧಿಸಿರುವ ಗಲ್ಲು ಶಿಕ್ಷೆಗೆ ನ್ಯಾಯಾಲಯವಂತೂ ತಡೆ ನೀಡಿಲ್ಲ’ ಎಂದು ಹೇಳಿತು.</p>.<p>‘ನನ್ನ ಕಕ್ಷಿದಾರ ಸಲ್ಲಿಸಿರುವ ಕ್ಷಮಾದಾನ ಅರ್ಜಿ ಕುರಿತಂತೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ರಾಜೋನಾ ಭಾರತದ ಪ್ರಜೆ. ಈ ವಿಚಾರ ಭಾರತ ಮತ್ತು ಪಾಕಿಸ್ತಾನ ನಡುವಿನ ವ್ಯಾಜ್ಯವಲ್ಲ’ ಎಂದು ರಾಜೋನಾ ಪರ ಹಾಜರಿದ್ದ ಹಿರಿಯ ವಕೀಲ ಮುಕುಲ್ ರೋಹಟಗಿ ಹೇಳಿದರು.</p>.<p>ಆಗ, ಸಂಬಂಧಪಟ್ಟವರಿಂದ ಮಾಹಿತಿ ಪಡೆದು, ಪೀಠಕ್ಕೆ ತಿಳಿಸುವುದಾಗಿ ನಟರಾಜ್ ಹೇಳಿದರು. ವಾದ, ಪ್ರತಿವಾದಗಳನ್ನು ಅಲಿಸಿದ ಪೀಠವು, ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 15ಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>