<p class="title"><strong>ನವದೆಹಲಿ:</strong> ಸರ್ಕಾರದ ನಿರ್ಮಾಣ ಯೋಜನೆಗಳಲ್ಲಿ ಸುಟ್ಟ ಮಣ್ಣಿನ ಇಟ್ಟಿಗೆಗಳ ಬಳಕೆಯನ್ನು ನಿಷೇಧಿಸುವ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ. ಪರಿಸರಸ್ನೇಹಿ ಉತ್ಪನ್ನಗಳಿಗೆ ಉತ್ತೇಜನ ನೀಡುವುದು ಇದರ ಉದ್ದೇಶ.</p>.<p class="bodytext">ಸುಣ್ಣ ಮಣ್ಣಿನ ಇಟ್ಟಿಗೆಗಳನ್ನು ನಿಷೇಧಿಸಲು ಸಾಧ್ಯವೇ ಎಂದು ಪರಿಶೀಲಿಸುವಂತೆ ಕೇಂದ್ರ ಲೋಕೋಪಯೋಗಿ (ಸಿಪಿಡಬ್ಲ್ಯುಡಿ) ಇಲಾಖೆಗೆ ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯ ಸೂಚನೆ ನೀಡಿದೆ. ಈ ಬಗ್ಗೆ ಪರಿಶೀಲಿಸಿ ಮಂಗಳವಾರದ ಒಳಗೆ ವರದಿ ಸಲ್ಲಿಸಲುಸಿಪಿಡಬ್ಲ್ಯುಡಿ ತನ್ನ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ ಎಂದು ಮೂಲಗಳು ಹೇಳಿವೆ.</p>.<p class="bodytext">‘ತ್ಯಾಜ್ಯವನ್ನು ಬಳಸಿ ಪರಿಸರಸ್ನೇಹಿ ಇಟ್ಟಿಗೆ ತಯಾರಿಸುವ ತಂತ್ರಜ್ಞಾನ ಲಭ್ಯವಿದೆ. ಇದರ ಬಳಕೆ ತ್ಯಾಜ್ಯದ ಸಮಸ್ಯೆಗೆ ಪರಿಹಾರ ಒದಗಿಸುವುದರ ಜತೆಗೆ ಪರಿಸರಸ್ನೇಹಿ ಉತ್ಪನ್ನಗಳ ತಯಾರಿಕೆಗೂ ಪ್ರೋತ್ಸಾಹ ನೀಡುತ್ತದೆ’ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.<p class="bodytext">ಇಟ್ಟಿಗೆ ಸುಡಲು ಇಟ್ಟಿಗೆ ಗೂಡುಗಳಲ್ಲಿ ಕಲ್ಲಿದ್ದಲು ಬಳಸಲಾಗುತ್ತದೆ. ಇದು ವಾಯುಮಾಲಿನ್ಯಕ್ಕೆ ಕಾರಣವಾಗುತ್ತದೆ.</p>.<p class="bodytext">ಸುಪ್ರೀಂ ಕೋರ್ಟ್ ನೇಮಿಸಿದ ಉನ್ನತಾಧಿಕಾರ ಸಮಿತಿಯು ಇಟ್ಟಿಗೆ ಗೂಡುಗಳಲ್ಲಿ ಮಾಲಿನ್ಯವನ್ನು ಶೇ 80ರಷ್ಟು ತಗ್ಗಿಸುವ ಜಿಗ್ಜ್ಯಾಗ್ ತಂತ್ರಜ್ಞಾನ ಬಳಸಬೇಕು ಎಂದು ರಾಷ್ಟ್ರ ರಾಜಧಾನಿ ಸುತ್ತಲಿನ ರಾಜ್ಯಗಳಿಗೆ ಅಕ್ಟೋಬರ್ನಲ್ಲಿ ಸೂಚಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ:</strong> ಸರ್ಕಾರದ ನಿರ್ಮಾಣ ಯೋಜನೆಗಳಲ್ಲಿ ಸುಟ್ಟ ಮಣ್ಣಿನ ಇಟ್ಟಿಗೆಗಳ ಬಳಕೆಯನ್ನು ನಿಷೇಧಿಸುವ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ. ಪರಿಸರಸ್ನೇಹಿ ಉತ್ಪನ್ನಗಳಿಗೆ ಉತ್ತೇಜನ ನೀಡುವುದು ಇದರ ಉದ್ದೇಶ.</p>.<p class="bodytext">ಸುಣ್ಣ ಮಣ್ಣಿನ ಇಟ್ಟಿಗೆಗಳನ್ನು ನಿಷೇಧಿಸಲು ಸಾಧ್ಯವೇ ಎಂದು ಪರಿಶೀಲಿಸುವಂತೆ ಕೇಂದ್ರ ಲೋಕೋಪಯೋಗಿ (ಸಿಪಿಡಬ್ಲ್ಯುಡಿ) ಇಲಾಖೆಗೆ ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯ ಸೂಚನೆ ನೀಡಿದೆ. ಈ ಬಗ್ಗೆ ಪರಿಶೀಲಿಸಿ ಮಂಗಳವಾರದ ಒಳಗೆ ವರದಿ ಸಲ್ಲಿಸಲುಸಿಪಿಡಬ್ಲ್ಯುಡಿ ತನ್ನ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ ಎಂದು ಮೂಲಗಳು ಹೇಳಿವೆ.</p>.<p class="bodytext">‘ತ್ಯಾಜ್ಯವನ್ನು ಬಳಸಿ ಪರಿಸರಸ್ನೇಹಿ ಇಟ್ಟಿಗೆ ತಯಾರಿಸುವ ತಂತ್ರಜ್ಞಾನ ಲಭ್ಯವಿದೆ. ಇದರ ಬಳಕೆ ತ್ಯಾಜ್ಯದ ಸಮಸ್ಯೆಗೆ ಪರಿಹಾರ ಒದಗಿಸುವುದರ ಜತೆಗೆ ಪರಿಸರಸ್ನೇಹಿ ಉತ್ಪನ್ನಗಳ ತಯಾರಿಕೆಗೂ ಪ್ರೋತ್ಸಾಹ ನೀಡುತ್ತದೆ’ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.</p>.<p class="bodytext">ಇಟ್ಟಿಗೆ ಸುಡಲು ಇಟ್ಟಿಗೆ ಗೂಡುಗಳಲ್ಲಿ ಕಲ್ಲಿದ್ದಲು ಬಳಸಲಾಗುತ್ತದೆ. ಇದು ವಾಯುಮಾಲಿನ್ಯಕ್ಕೆ ಕಾರಣವಾಗುತ್ತದೆ.</p>.<p class="bodytext">ಸುಪ್ರೀಂ ಕೋರ್ಟ್ ನೇಮಿಸಿದ ಉನ್ನತಾಧಿಕಾರ ಸಮಿತಿಯು ಇಟ್ಟಿಗೆ ಗೂಡುಗಳಲ್ಲಿ ಮಾಲಿನ್ಯವನ್ನು ಶೇ 80ರಷ್ಟು ತಗ್ಗಿಸುವ ಜಿಗ್ಜ್ಯಾಗ್ ತಂತ್ರಜ್ಞಾನ ಬಳಸಬೇಕು ಎಂದು ರಾಷ್ಟ್ರ ರಾಜಧಾನಿ ಸುತ್ತಲಿನ ರಾಜ್ಯಗಳಿಗೆ ಅಕ್ಟೋಬರ್ನಲ್ಲಿ ಸೂಚಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>