<p class="bodytext">ಇಂದೋರ್ (ಪಿಟಿಐ): ರಾಷ್ಟ್ರೀಯ ಸ್ವಯಂಸೇವಕ ಸಂಘದಂತಹ ‘ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದಿರುವ’ ಸಂಘಟನೆಯನ್ನು ಸರ್ಕಾರಿ ನೌಕರರಿಗೆ ನಿಷೇಧಿಸಲಾದ ಸಂಸ್ಥೆಗಳ ಪಟ್ಟಿಯಲ್ಲಿ ಸೇರಿಸಲಾಗಿದೆ ಎಂಬ ತಪ್ಪನ್ನು ಅರಿತುಕೊಳ್ಳಲು ಕೇಂದ್ರ ಸರ್ಕಾರಕ್ಕೆ ಐದು ದಶಕಗಳು ಬೇಕಾದವು ಎಂದು ಮಧ್ಯಪ್ರದೇಶ ಹೈಕೋರ್ಟ್ ಗುರುವಾರ ಹೇಳಿದೆ.</p>.<p class="bodytext">ಕೇಂದ್ರ ಸರ್ಕಾರದ ನಿವೃತ್ತ ನೌಕರ ಪುರುಷೋತ್ತಮ್ ಗುಪ್ತಾ ಎಂಬವರು ಸಲ್ಲಿಸಿದ್ದ ಅರ್ಜಿಯನ್ನು ವಿಲೇವಾರಿ ಮಾಡುವ ಸಮಯದಲ್ಲಿ ನ್ಯಾಯಮೂರ್ತಿಗಳಾದ ಸುಶ್ರುತಾ ಅರವಿಂದ್ ಧರ್ಮಾಧಿಕಾರಿ ಮತ್ತು ಗಜೇಂದ್ರ ಸಿಂಗ್ ಅವರಿದ್ದ ಪೀಠವು ಈ ಅಭಿಪ್ರಾಯ ವ್ಯಕ್ತಪಡಿಸಿತು.</p>.<p class="bodytext">ಸರ್ಕಾರಿ ನೌಕರರು ಆರ್ಎಸ್ಎಸ್ ಸದಸ್ಯತ್ವ ಪಡೆಯುವುದು ಮತ್ತು ಅವುಗಳ ಕಾರ್ಯಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ನಿಷೇಧಿಸಿರುವ ನಿಯಮವನ್ನು ಪ್ರಶ್ನಿಸಿ ಗುಪ್ತಾ ಅವರು ಕಳೆದ ವರ್ಷ ಸೆಪ್ಟೆಂಬರ್ 19 ರಂದು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.</p>.<p class="bodytext">‘ಕೇಂದ್ರ ಸರ್ಕಾರದ ಅನೇಕ ನೌಕರರು ಹಲವು ವಿಧಗಳಲ್ಲಿ ದೇಶ ಸೇವೆ ಸಲ್ಲಿಸುವ ಆಕಾಂಕ್ಷೆ ಹೊಂದಿರುತ್ತಾರೆ. ಆದರೆ ಈ ನಿಷೇಧದಿಂದಾಗಿ ಐದು ದಶಕಗಳವರೆಗೆ ಅವರ ಆಕಾಂಕ್ಷೆಗೆ ಅಡ್ಡಿಯಾಗಿತ್ತು. ಇದೀಗ ನ್ಯಾಯಾಲಯದ ಗಮನಕ್ಕೆ ಬಂದಾಗ ಆ ನಿಷೇಧವನ್ನು ತೆಗೆದು ಹಾಕಲಾಗಿದೆ’ ಎಂದು ಪೀಠವು ಹೇಳಿತು. </p>.<p>ಆರ್ಎಸ್ಎಸ್ ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸುವುದು ಮತ್ತು ಸದಸ್ಯತ್ವ ಪಡೆಯುವುದಕ್ಕೆ ವಿಧಿಸಲಾಗಿದ್ದ ನಿಷೇಧವನ್ನು ಕೇಂದ್ರ ಸರ್ಕಾರ ಈಚೆಗೆ ವಾಪಸ್ ಪಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="bodytext">ಇಂದೋರ್ (ಪಿಟಿಐ): ರಾಷ್ಟ್ರೀಯ ಸ್ವಯಂಸೇವಕ ಸಂಘದಂತಹ ‘ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದಿರುವ’ ಸಂಘಟನೆಯನ್ನು ಸರ್ಕಾರಿ ನೌಕರರಿಗೆ ನಿಷೇಧಿಸಲಾದ ಸಂಸ್ಥೆಗಳ ಪಟ್ಟಿಯಲ್ಲಿ ಸೇರಿಸಲಾಗಿದೆ ಎಂಬ ತಪ್ಪನ್ನು ಅರಿತುಕೊಳ್ಳಲು ಕೇಂದ್ರ ಸರ್ಕಾರಕ್ಕೆ ಐದು ದಶಕಗಳು ಬೇಕಾದವು ಎಂದು ಮಧ್ಯಪ್ರದೇಶ ಹೈಕೋರ್ಟ್ ಗುರುವಾರ ಹೇಳಿದೆ.</p>.<p class="bodytext">ಕೇಂದ್ರ ಸರ್ಕಾರದ ನಿವೃತ್ತ ನೌಕರ ಪುರುಷೋತ್ತಮ್ ಗುಪ್ತಾ ಎಂಬವರು ಸಲ್ಲಿಸಿದ್ದ ಅರ್ಜಿಯನ್ನು ವಿಲೇವಾರಿ ಮಾಡುವ ಸಮಯದಲ್ಲಿ ನ್ಯಾಯಮೂರ್ತಿಗಳಾದ ಸುಶ್ರುತಾ ಅರವಿಂದ್ ಧರ್ಮಾಧಿಕಾರಿ ಮತ್ತು ಗಜೇಂದ್ರ ಸಿಂಗ್ ಅವರಿದ್ದ ಪೀಠವು ಈ ಅಭಿಪ್ರಾಯ ವ್ಯಕ್ತಪಡಿಸಿತು.</p>.<p class="bodytext">ಸರ್ಕಾರಿ ನೌಕರರು ಆರ್ಎಸ್ಎಸ್ ಸದಸ್ಯತ್ವ ಪಡೆಯುವುದು ಮತ್ತು ಅವುಗಳ ಕಾರ್ಯಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ನಿಷೇಧಿಸಿರುವ ನಿಯಮವನ್ನು ಪ್ರಶ್ನಿಸಿ ಗುಪ್ತಾ ಅವರು ಕಳೆದ ವರ್ಷ ಸೆಪ್ಟೆಂಬರ್ 19 ರಂದು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.</p>.<p class="bodytext">‘ಕೇಂದ್ರ ಸರ್ಕಾರದ ಅನೇಕ ನೌಕರರು ಹಲವು ವಿಧಗಳಲ್ಲಿ ದೇಶ ಸೇವೆ ಸಲ್ಲಿಸುವ ಆಕಾಂಕ್ಷೆ ಹೊಂದಿರುತ್ತಾರೆ. ಆದರೆ ಈ ನಿಷೇಧದಿಂದಾಗಿ ಐದು ದಶಕಗಳವರೆಗೆ ಅವರ ಆಕಾಂಕ್ಷೆಗೆ ಅಡ್ಡಿಯಾಗಿತ್ತು. ಇದೀಗ ನ್ಯಾಯಾಲಯದ ಗಮನಕ್ಕೆ ಬಂದಾಗ ಆ ನಿಷೇಧವನ್ನು ತೆಗೆದು ಹಾಕಲಾಗಿದೆ’ ಎಂದು ಪೀಠವು ಹೇಳಿತು. </p>.<p>ಆರ್ಎಸ್ಎಸ್ ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸುವುದು ಮತ್ತು ಸದಸ್ಯತ್ವ ಪಡೆಯುವುದಕ್ಕೆ ವಿಧಿಸಲಾಗಿದ್ದ ನಿಷೇಧವನ್ನು ಕೇಂದ್ರ ಸರ್ಕಾರ ಈಚೆಗೆ ವಾಪಸ್ ಪಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>