‘ಈ ವಿಚಾರವಾಗಿ ನ್ಯಾಯಾಲಯವು ಈಗಾಗಲೇ ಹಲವು ಆದೇಶಗಳನ್ನು ನೀಡಿದೆ. ಹೀಗಾಗಿ ಮಧ್ಯಂತರ ಅರ್ಜಿ ಕುರಿತಾಗಿ ನಿರ್ದಿಷ್ಟ ಆದೇಶ ಹೊರಡಿಸುವ ಅಗತ್ಯ ಇಲ್ಲ. ಈಗಾಗಲೇ ಹೊರಡಿಸಿರುವ ಆದೇಶವು ರಾಜಸ್ಥಾನ ಸೇರಿದಂತೆ ಎಲ್ಲ ರಾಜ್ಯಗಳಿಗೂ ಅನ್ವಯ. ಹಬ್ಬಗಳ ಸಂದರ್ಭದಲ್ಲಿ ಮಾತ್ರವಲ್ಲ, ಅದರ ನಂತರವೂ ಈ ಆದೇಶದ ಪಾಲನೆಯಾಗಬೇಕು’ ಎಂದು ನ್ಯಾಯಪೀಠ ಸ್ಪಷ್ಪಪಡಿಸಿತು.