<p><strong>ಶ್ರೀನಗರ</strong>: ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ದಾಳಿಯನ್ನು ಖಂಡಿಸಿ ಕಾಶ್ಮೀರದ ವ್ಯಾಪಾರೋದ್ಯಮ ಮತ್ತು ಪ್ರವಾಸೋದ್ಯಮ ಸಂಘಟನೆಗಳು ಬುಧವಾರ ಸಂಪೂರ್ಣ ಬಂದ್ ಆಚರಿಸಲು ಕರೆ ನೀಡಿವೆ.</p><p>ದಾಳಿಯಿಂದಾಗಿ ಇಡೀ ಕಾಶ್ಮೀರ ಆಘಾತಕ್ಕೆ ಒಳಗಾಗಿದೆ. ದಾಳಿಯನ್ನು ವ್ಯಾಪಕವಾಗಿ ಖಂಡಿಸಲಾಗಿದೆ. ಹಿಂಸಾಚಾರವನ್ನು ಎದುರಿಸಲು ಒಗ್ಗಟ್ಟಾಗಬೇಕು ಎಂಬ ಆಗ್ರಹ ವ್ಯಕ್ತವಾಗಿದೆ.</p><p>ಕಾಶ್ಮೀರ ವಾಣಿಜ್ಯೋದ್ಯಮ ಸಂಘಟನೆ (ಸಿಸಿಐಕೆ),<br>ಜಮ್ಮು ಮತ್ತು ಕಾಶ್ಮೀರ ಹೋಟೆಲ್ ಮಾಲೀಕರ ಕ್ಲಬ್ (ಜೆಕೆೆಎಚ್ಸಿ), ಎಲ್ಲ ಪ್ರಮುಖ ಟ್ರಾವೆಲ್ ಸಂಘಟನೆಗಳು, ರೆಸ್ಟೋರೆಂಟ್ ಮಾಲೀಕರು, ನಾಗರಿಕ ಸಮುದಾಯದ ಸಂಘಟನೆಗಳು ಕಾಶ್ಮೀರ ಬಂದ್ಗೆ ಕರೆ ನೀಡಿವೆ.</p><p>ಸಂತ್ರಸ್ತರ ಜೊತೆ ಇದ್ದೇವೆ ಎಂಬ ಸಂದೇಶ ರವಾನಿಸಲು ಸಾರ್ವಜನಿಕರು ಒಂದು ದಿನದ ಮಟ್ಟಿಗೆ ತಮ್ಮ ದೈನಂದಿನ ಚಟುವಟಿಕೆಗಳನ್ನು ಕೈಬಿಡಬೇಕು ಎಂಬ ಮನವಿ ಮಾಡಲಾಗಿದೆ.</p><p>‘ಇದೊಂದು ದುರಂತ ಮಾತ್ರವೇ ಅಲ್ಲ, ಇದು ಎಚ್ಚರಿಕೆಯ ಕರೆಗಂಟೆ’ ಎಂದು ಶ್ರೀನಗರದ ಹೋಟೆಲ್ ಮಾಲೀಕ ಇಕ್ಬಾಲ್ ಟ್ರಾಂಬೂ ಹೇಳಿದರು.</p><p>‘ಪ್ರವಾಸಿಗರ ಮೇಲಿನ ದಾಳಿಯು ಹಿಂದೆಂದೂ ಆಗಿರಲಿಲ್ಲ... ಕಾಶ್ಮೀರವು ಭಯೋತ್ಪಾದನೆಯ ಎಲ್ಲ ಬಗೆಗಳನ್ನು ತಿರಸ್ಕರಿಸುತ್ತದೆ ಎಂಬುದನ್ನು ತೋರಿಸಬೇಕು, ಈ ಹಿಂಸಾಚಾರವನ್ನು ಏಕಕಂಠದಲ್ಲಿ ಖಂಡಿಸಬೇಕು’ ಎಂದು ಅವರು ಹೇಳಿದರು. ಬಂದ್ ಕರೆಗೆ ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಬೆಂಬಲ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ</strong>: ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ದಾಳಿಯನ್ನು ಖಂಡಿಸಿ ಕಾಶ್ಮೀರದ ವ್ಯಾಪಾರೋದ್ಯಮ ಮತ್ತು ಪ್ರವಾಸೋದ್ಯಮ ಸಂಘಟನೆಗಳು ಬುಧವಾರ ಸಂಪೂರ್ಣ ಬಂದ್ ಆಚರಿಸಲು ಕರೆ ನೀಡಿವೆ.</p><p>ದಾಳಿಯಿಂದಾಗಿ ಇಡೀ ಕಾಶ್ಮೀರ ಆಘಾತಕ್ಕೆ ಒಳಗಾಗಿದೆ. ದಾಳಿಯನ್ನು ವ್ಯಾಪಕವಾಗಿ ಖಂಡಿಸಲಾಗಿದೆ. ಹಿಂಸಾಚಾರವನ್ನು ಎದುರಿಸಲು ಒಗ್ಗಟ್ಟಾಗಬೇಕು ಎಂಬ ಆಗ್ರಹ ವ್ಯಕ್ತವಾಗಿದೆ.</p><p>ಕಾಶ್ಮೀರ ವಾಣಿಜ್ಯೋದ್ಯಮ ಸಂಘಟನೆ (ಸಿಸಿಐಕೆ),<br>ಜಮ್ಮು ಮತ್ತು ಕಾಶ್ಮೀರ ಹೋಟೆಲ್ ಮಾಲೀಕರ ಕ್ಲಬ್ (ಜೆಕೆೆಎಚ್ಸಿ), ಎಲ್ಲ ಪ್ರಮುಖ ಟ್ರಾವೆಲ್ ಸಂಘಟನೆಗಳು, ರೆಸ್ಟೋರೆಂಟ್ ಮಾಲೀಕರು, ನಾಗರಿಕ ಸಮುದಾಯದ ಸಂಘಟನೆಗಳು ಕಾಶ್ಮೀರ ಬಂದ್ಗೆ ಕರೆ ನೀಡಿವೆ.</p><p>ಸಂತ್ರಸ್ತರ ಜೊತೆ ಇದ್ದೇವೆ ಎಂಬ ಸಂದೇಶ ರವಾನಿಸಲು ಸಾರ್ವಜನಿಕರು ಒಂದು ದಿನದ ಮಟ್ಟಿಗೆ ತಮ್ಮ ದೈನಂದಿನ ಚಟುವಟಿಕೆಗಳನ್ನು ಕೈಬಿಡಬೇಕು ಎಂಬ ಮನವಿ ಮಾಡಲಾಗಿದೆ.</p><p>‘ಇದೊಂದು ದುರಂತ ಮಾತ್ರವೇ ಅಲ್ಲ, ಇದು ಎಚ್ಚರಿಕೆಯ ಕರೆಗಂಟೆ’ ಎಂದು ಶ್ರೀನಗರದ ಹೋಟೆಲ್ ಮಾಲೀಕ ಇಕ್ಬಾಲ್ ಟ್ರಾಂಬೂ ಹೇಳಿದರು.</p><p>‘ಪ್ರವಾಸಿಗರ ಮೇಲಿನ ದಾಳಿಯು ಹಿಂದೆಂದೂ ಆಗಿರಲಿಲ್ಲ... ಕಾಶ್ಮೀರವು ಭಯೋತ್ಪಾದನೆಯ ಎಲ್ಲ ಬಗೆಗಳನ್ನು ತಿರಸ್ಕರಿಸುತ್ತದೆ ಎಂಬುದನ್ನು ತೋರಿಸಬೇಕು, ಈ ಹಿಂಸಾಚಾರವನ್ನು ಏಕಕಂಠದಲ್ಲಿ ಖಂಡಿಸಬೇಕು’ ಎಂದು ಅವರು ಹೇಳಿದರು. ಬಂದ್ ಕರೆಗೆ ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಬೆಂಬಲ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>