<p><strong>ಹೈದರಾಬಾದ್</strong>: ಬೆಂಗಳೂರು–ಹೈದರಾಬಾದ್ ಪ್ರದೇಶವನ್ನು ‘ಏರೋಸ್ಪೇಸ್ ಮತ್ತು ಡಿಫೆನ್ಸ್ ಕಾರಿಡಾರ್’ ಎಂದು ಘೋಷಿಸುವಂತೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದರು.</p>.<p>ಸಫ್ರಾನ್ ಘಟಕಕ್ಕೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕಳೆದ ಕೆಲವು ವರ್ಷಗಳಲ್ಲಿ ತೆಲಂಗಾಣದ ಏರೊಸ್ಪೇಸ್ ಮತ್ತು ಡಿಫೆನ್ಸ್ ವಲಯದಿಂದ ರಫ್ತು ದ್ವಿಗುಣವಾಗಿದೆ. ಕಳೆದ 9 ತಿಂಗಳಲ್ಲಿ ಸುಮಾರು ₹30,000 ಕೋಟಿ ಔಷಧ ರಫ್ತಾಗಿದೆ’ ಎಂದು ತಿಳಿಸಿದರು.</p>.<p>‘ನಾಗರಿಕ ವಿಮಾನಯಾನ ಸಚಿವಾಲಯದಿಂದ ತೆಲಂಗಾಣವು ಏರೊಸ್ಪೇಸ್ ಪ್ರಶಸ್ತಿ ಪಡೆದಿದೆ. ಏರೊಸ್ಪೇಸ್ ವಲಯದಲ್ಲಿ ಹೂಡಿಕೆಗೆ ಕೌಶಲ ಅಭಿವೃದ್ಧಿ ಅಗತ್ಯ. ಹೀಗಾಗಿ ಬೆಂಗಳೂರು–ಹೈದರಾಬಾದ್ ಪ್ರದೇಶವನ್ನು ಏರೋಸ್ಪೇಸ್ ಮತ್ತು ಡಿಫೆನ್ಸ್ ಕಾರಿಡಾರ್ ಎಂದು ಘೋಷಿಸಬೇಕು’ ಎಂದು ಮನವಿ ಮಾಡಿದರು.</p>.<p>ತೆಲಂಗಾಣದ ಏರೊಸ್ಪೇಸ್ ಮತ್ತು ರಕ್ಷಣಾ ವಲಯದ ಬೆಳವಣಿಗೆಯಲ್ಲಿ ಸಫ್ರಾನ್ ಘಟಕವು ಮಹತ್ವ ಮೈಲುಗಲ್ಲಾಗಲಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ಬೆಂಗಳೂರು–ಹೈದರಾಬಾದ್ ಪ್ರದೇಶವನ್ನು ‘ಏರೋಸ್ಪೇಸ್ ಮತ್ತು ಡಿಫೆನ್ಸ್ ಕಾರಿಡಾರ್’ ಎಂದು ಘೋಷಿಸುವಂತೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದರು.</p>.<p>ಸಫ್ರಾನ್ ಘಟಕಕ್ಕೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕಳೆದ ಕೆಲವು ವರ್ಷಗಳಲ್ಲಿ ತೆಲಂಗಾಣದ ಏರೊಸ್ಪೇಸ್ ಮತ್ತು ಡಿಫೆನ್ಸ್ ವಲಯದಿಂದ ರಫ್ತು ದ್ವಿಗುಣವಾಗಿದೆ. ಕಳೆದ 9 ತಿಂಗಳಲ್ಲಿ ಸುಮಾರು ₹30,000 ಕೋಟಿ ಔಷಧ ರಫ್ತಾಗಿದೆ’ ಎಂದು ತಿಳಿಸಿದರು.</p>.<p>‘ನಾಗರಿಕ ವಿಮಾನಯಾನ ಸಚಿವಾಲಯದಿಂದ ತೆಲಂಗಾಣವು ಏರೊಸ್ಪೇಸ್ ಪ್ರಶಸ್ತಿ ಪಡೆದಿದೆ. ಏರೊಸ್ಪೇಸ್ ವಲಯದಲ್ಲಿ ಹೂಡಿಕೆಗೆ ಕೌಶಲ ಅಭಿವೃದ್ಧಿ ಅಗತ್ಯ. ಹೀಗಾಗಿ ಬೆಂಗಳೂರು–ಹೈದರಾಬಾದ್ ಪ್ರದೇಶವನ್ನು ಏರೋಸ್ಪೇಸ್ ಮತ್ತು ಡಿಫೆನ್ಸ್ ಕಾರಿಡಾರ್ ಎಂದು ಘೋಷಿಸಬೇಕು’ ಎಂದು ಮನವಿ ಮಾಡಿದರು.</p>.<p>ತೆಲಂಗಾಣದ ಏರೊಸ್ಪೇಸ್ ಮತ್ತು ರಕ್ಷಣಾ ವಲಯದ ಬೆಳವಣಿಗೆಯಲ್ಲಿ ಸಫ್ರಾನ್ ಘಟಕವು ಮಹತ್ವ ಮೈಲುಗಲ್ಲಾಗಲಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>