<p><strong>ನವದೆಹಲಿ:</strong> ಭಾರತ ಮತ್ತು ಬಾಂಗ್ಲಾದೇಶದ ಜತೆಗಿನ ಸಂಬಂಧವು ಮೂರನೇ ದೇಶಗಳ ಸಂಬಂಧದಿಂದ ಸ್ವತಂತ್ರವಾಗಿದೆ ಎಂದು ಭಾರತ ಪ್ರತಿಪಾದಿಸಿದೆ. </p>.<p>ತನ್ನ ರಾಷ್ಟ್ರೀಯ ಹಿತಾಸಕ್ತಿಗಳ ಮೇಲೆ ಪ್ರಭಾವ ಬೀರುವಂತಹ ಪಕ್ಕದ ದೇಶಗಳ ವಿದ್ಯಮಾನಗಳ ಮೇಲೆ ಕೇಂದ್ರ ಸರ್ಕಾರ ಸದಾ ನಿಗಾವಹಿಸುತ್ತಿದೆ. ಅಲ್ಲದೆ ಅಲ್ಲಿರುವ ಭಾರತೀಯರನ್ನು ರಕ್ಷಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಸರ್ಕಾರ ಶುಕ್ರವಾರ ಲೋಕಸಭೆಗೆ ತಿಳಿಸಿದೆ. </p>.<p>ಪ್ರಜಾಪ್ರಭುತ್ವ, ಸ್ಥಿರ, ಶಾಂತಿಯುತ, ಪ್ರಗತಿಪರ ಮತ್ತು ಎಲ್ಲರನ್ನೂ ಒಳಗೊಂಡ ಬಾಂಗ್ಲಾದೇಶವನ್ನು ಭಾರತ ಬೆಂಬಲಿಸುತ್ತದೆ. ಈ ಕುರಿತು ಅಲ್ಲಿನ ಮಧ್ಯಂತರ ಸರ್ಕಾರಕ್ಕೂ ತಿಳಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ರಾಜ್ಯ ಖಾತೆ ಸಚಿವ ಕೀರ್ತಿ ವರ್ಧನ್ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. </p>.<p>‘ಭಾರತವು ಪಕ್ಕದ ದೇಶಗಳ ಜತೆ ಉತ್ತಮ ಸಂಬಂಧ ಹೊಂದಲು ಆದ್ಯತೆ ನೀಡುತ್ತದೆ. ಪರಸ್ಪರ ಹಿತಾಸಕ್ತಿಗಳು, ಸೂಕ್ಷ್ಮತೆ ಮತ್ತು ಚಾಲ್ತಿಯಲ್ಲಿರುವ ದ್ವಿಪಕ್ಷೀಯ, ಪ್ರಾದೇಶಿಕ, ಜಾಗತಿಕ ಸಂದರ್ಭಗಳಿಗೆ ತಕ್ಕಂತೆ ಅದು ವಿಕಸನಗೊಳ್ಳುತ್ತದೆ’ ಎಂದು ಅವರು ಹೇಳಿದ್ದಾರೆ. </p>.<p>ಭಾರತ– ಬಾಂಗ್ಲಾದೇಶದ ನಡುವಿನ ದ್ವಿಪಕ್ಷೀಯ ಸಂಬಂಧಗಳು ಸೂಕ್ಷ್ಮ ಹಂತದಲ್ಲಿ ಸಾಗುತ್ತಿದೆಯೇ ಮತ್ತು ಪಾಕಿಸ್ತಾನವು ಈ ಪರಿಸ್ಥಿತಿಯ ಲಾಭ ಪಡೆಯಲು ಯತ್ನಿಸುತ್ತಿದೆಯೇ ಎಂದು ಕೇಳಲಾದ ಪ್ರಶ್ನೆಗೆ ಸಚಿವರು ಉತ್ತರಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಭಾರತ ಮತ್ತು ಬಾಂಗ್ಲಾದೇಶದ ಜತೆಗಿನ ಸಂಬಂಧವು ಮೂರನೇ ದೇಶಗಳ ಸಂಬಂಧದಿಂದ ಸ್ವತಂತ್ರವಾಗಿದೆ ಎಂದು ಭಾರತ ಪ್ರತಿಪಾದಿಸಿದೆ. </p>.<p>ತನ್ನ ರಾಷ್ಟ್ರೀಯ ಹಿತಾಸಕ್ತಿಗಳ ಮೇಲೆ ಪ್ರಭಾವ ಬೀರುವಂತಹ ಪಕ್ಕದ ದೇಶಗಳ ವಿದ್ಯಮಾನಗಳ ಮೇಲೆ ಕೇಂದ್ರ ಸರ್ಕಾರ ಸದಾ ನಿಗಾವಹಿಸುತ್ತಿದೆ. ಅಲ್ಲದೆ ಅಲ್ಲಿರುವ ಭಾರತೀಯರನ್ನು ರಕ್ಷಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಸರ್ಕಾರ ಶುಕ್ರವಾರ ಲೋಕಸಭೆಗೆ ತಿಳಿಸಿದೆ. </p>.<p>ಪ್ರಜಾಪ್ರಭುತ್ವ, ಸ್ಥಿರ, ಶಾಂತಿಯುತ, ಪ್ರಗತಿಪರ ಮತ್ತು ಎಲ್ಲರನ್ನೂ ಒಳಗೊಂಡ ಬಾಂಗ್ಲಾದೇಶವನ್ನು ಭಾರತ ಬೆಂಬಲಿಸುತ್ತದೆ. ಈ ಕುರಿತು ಅಲ್ಲಿನ ಮಧ್ಯಂತರ ಸರ್ಕಾರಕ್ಕೂ ತಿಳಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ರಾಜ್ಯ ಖಾತೆ ಸಚಿವ ಕೀರ್ತಿ ವರ್ಧನ್ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. </p>.<p>‘ಭಾರತವು ಪಕ್ಕದ ದೇಶಗಳ ಜತೆ ಉತ್ತಮ ಸಂಬಂಧ ಹೊಂದಲು ಆದ್ಯತೆ ನೀಡುತ್ತದೆ. ಪರಸ್ಪರ ಹಿತಾಸಕ್ತಿಗಳು, ಸೂಕ್ಷ್ಮತೆ ಮತ್ತು ಚಾಲ್ತಿಯಲ್ಲಿರುವ ದ್ವಿಪಕ್ಷೀಯ, ಪ್ರಾದೇಶಿಕ, ಜಾಗತಿಕ ಸಂದರ್ಭಗಳಿಗೆ ತಕ್ಕಂತೆ ಅದು ವಿಕಸನಗೊಳ್ಳುತ್ತದೆ’ ಎಂದು ಅವರು ಹೇಳಿದ್ದಾರೆ. </p>.<p>ಭಾರತ– ಬಾಂಗ್ಲಾದೇಶದ ನಡುವಿನ ದ್ವಿಪಕ್ಷೀಯ ಸಂಬಂಧಗಳು ಸೂಕ್ಷ್ಮ ಹಂತದಲ್ಲಿ ಸಾಗುತ್ತಿದೆಯೇ ಮತ್ತು ಪಾಕಿಸ್ತಾನವು ಈ ಪರಿಸ್ಥಿತಿಯ ಲಾಭ ಪಡೆಯಲು ಯತ್ನಿಸುತ್ತಿದೆಯೇ ಎಂದು ಕೇಳಲಾದ ಪ್ರಶ್ನೆಗೆ ಸಚಿವರು ಉತ್ತರಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>