<p><strong>ನವದೆಹಲಿ</strong>: ಸುಮಾರು 11 ವರ್ಷಗಳಿಂದ ಪರಿಷ್ಕರಣೆ ಆಗದ ನೌಕರರ ಭವಿಷ್ಯ ನಿಧಿ (ಇಪಿಎಫ್ಒ) ಯೋಜನೆಯ ವೇತನ ಮಿತಿಯನ್ನು ಪರಿಷ್ಕರಿಸುವ ಕುರಿತು ನಾಲ್ಕು ತಿಂಗಳಲ್ಲಿ ಪರಿಶೀಲಿಸಿ ನಿರ್ಧಾರ ತೆಗೆದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.</p>.<p>ಸಾಮಾಜಿಕ ಭದ್ರತಾ ಯೋಜನೆಗಳ ಸೌಲಭ್ಯವನ್ನು ಉದ್ಯೋಗಿಗಳಿಗೆ ನೀಡಲು ನೌಕರರ ಭವಿಷ್ಯ ನಿಧಿ ಸಂಘಟನೆಯು ಪ್ರಸ್ತುತ ತಿಂಗಳಿಗೆ ₹15,000 ವೇತನ ಮಿತಿ ನಿಗದಿಮಾಡಿದೆ. ಅದಕ್ಕೂ ಹೆಚ್ಚಿನ ವೇತನ ಹೊಂದಿರುವವರನ್ನು ಅದು ಪರಿಗಣನೆಗೆ ತೆಗೆದುಕೊಳ್ಳುತ್ತಿಲ್ಲ ಎಂದು ಆಪಾದಿಸಿ ನವೀನ್ ಪ್ರಕಾಶ್ ನೌಟಿಯಾಲ್ ಎಂಬುವರು ಅರ್ಜಿ ಸಲ್ಲಿಸಿದ್ದಾರೆ.</p>.<p>ಈ ಕುರಿತ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಜೆ.ಕೆ. ಮಾಹೇಶ್ವರಿ ಮತ್ತು ಎ.ಎಸ್.ಚಂದೂರ್ಕರ್ ಅವರ ಪೀಠ ನಡೆಸಿ, ಆದೇಶ ನೀಡಿದೆ.</p>.<p>‘ಕೇಂದ್ರ ಮತ್ತು ವಿವಿಧ ರಾಜ್ಯಗಳಲ್ಲಿ ಕನಿಷ್ಠ ವೇತನವು ತಿಂಗಳಿಗೆ ₹15,000 ದಾಟಿದ್ದರೂ, ಇಪಿಎಫ್ಒ ದಶಕಗಳಿಂದ ಈ ಮಿತಿಯನ್ನು ಪರಿಷ್ಕರಿಸುವ ಗೋಜಿಗೆ ಹೋಗಿಲ್ಲ’ ಎಂದು ಅರ್ಜಿದಾರರ ಪರ ವಕೀಲರಾದ ಪ್ರಣವ್ ಸಚ್ದೇವ ಮತ್ತು ನೇಹಾ ರಥಿ ವಾದಿಸಿದರು.</p>.<p>ಈ ಮಿತಿಗಿಂತ ಹೆಚ್ಚು ವೇತನ ಪಡೆಯುತ್ತಿರುವ ಉದ್ಯೋಗಿಗಳಿಗೆ ಅನ್ಯಾಯ ಆಗುತ್ತಿದೆ. ಇದು ಕಾರ್ಮಿಕರನ್ನು ಇಪಿಎಫ್ಒ ಯೋಜನೆಯ ಪ್ರಯೋಜನಗಳಿಂದ ವಂಚಿತರನ್ನಾಗಿಸುತ್ತಿದೆ ಎಂದು ಅವರು ಹೇಳಿದರು.</p>.<p>ಅರ್ಜಿಯನ್ನು ವಿಲೇವಾರಿ ಮಾಡಿದ ಪೀಠವು, ಈ ಕುರಿತು ಎರಡು ವಾರಗಳಲ್ಲಿ ಆದೇಶದ ಪ್ರತಿಯೊಂದಿಗೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿ ಎಂದು ಅರ್ಜಿದಾರರಿಗೆ ತಿಳಿಸಿತು. ಅಲ್ಲದೆ, ಇದನ್ನು ಪರಿಶೀಲಿಸಿ ನಾಲ್ಕು ತಿಂಗಳೊಳಗೆ ನಿರ್ಧಾರ ತೆಗೆದುಕೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಸುಮಾರು 11 ವರ್ಷಗಳಿಂದ ಪರಿಷ್ಕರಣೆ ಆಗದ ನೌಕರರ ಭವಿಷ್ಯ ನಿಧಿ (ಇಪಿಎಫ್ಒ) ಯೋಜನೆಯ ವೇತನ ಮಿತಿಯನ್ನು ಪರಿಷ್ಕರಿಸುವ ಕುರಿತು ನಾಲ್ಕು ತಿಂಗಳಲ್ಲಿ ಪರಿಶೀಲಿಸಿ ನಿರ್ಧಾರ ತೆಗೆದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.</p>.<p>ಸಾಮಾಜಿಕ ಭದ್ರತಾ ಯೋಜನೆಗಳ ಸೌಲಭ್ಯವನ್ನು ಉದ್ಯೋಗಿಗಳಿಗೆ ನೀಡಲು ನೌಕರರ ಭವಿಷ್ಯ ನಿಧಿ ಸಂಘಟನೆಯು ಪ್ರಸ್ತುತ ತಿಂಗಳಿಗೆ ₹15,000 ವೇತನ ಮಿತಿ ನಿಗದಿಮಾಡಿದೆ. ಅದಕ್ಕೂ ಹೆಚ್ಚಿನ ವೇತನ ಹೊಂದಿರುವವರನ್ನು ಅದು ಪರಿಗಣನೆಗೆ ತೆಗೆದುಕೊಳ್ಳುತ್ತಿಲ್ಲ ಎಂದು ಆಪಾದಿಸಿ ನವೀನ್ ಪ್ರಕಾಶ್ ನೌಟಿಯಾಲ್ ಎಂಬುವರು ಅರ್ಜಿ ಸಲ್ಲಿಸಿದ್ದಾರೆ.</p>.<p>ಈ ಕುರಿತ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಜೆ.ಕೆ. ಮಾಹೇಶ್ವರಿ ಮತ್ತು ಎ.ಎಸ್.ಚಂದೂರ್ಕರ್ ಅವರ ಪೀಠ ನಡೆಸಿ, ಆದೇಶ ನೀಡಿದೆ.</p>.<p>‘ಕೇಂದ್ರ ಮತ್ತು ವಿವಿಧ ರಾಜ್ಯಗಳಲ್ಲಿ ಕನಿಷ್ಠ ವೇತನವು ತಿಂಗಳಿಗೆ ₹15,000 ದಾಟಿದ್ದರೂ, ಇಪಿಎಫ್ಒ ದಶಕಗಳಿಂದ ಈ ಮಿತಿಯನ್ನು ಪರಿಷ್ಕರಿಸುವ ಗೋಜಿಗೆ ಹೋಗಿಲ್ಲ’ ಎಂದು ಅರ್ಜಿದಾರರ ಪರ ವಕೀಲರಾದ ಪ್ರಣವ್ ಸಚ್ದೇವ ಮತ್ತು ನೇಹಾ ರಥಿ ವಾದಿಸಿದರು.</p>.<p>ಈ ಮಿತಿಗಿಂತ ಹೆಚ್ಚು ವೇತನ ಪಡೆಯುತ್ತಿರುವ ಉದ್ಯೋಗಿಗಳಿಗೆ ಅನ್ಯಾಯ ಆಗುತ್ತಿದೆ. ಇದು ಕಾರ್ಮಿಕರನ್ನು ಇಪಿಎಫ್ಒ ಯೋಜನೆಯ ಪ್ರಯೋಜನಗಳಿಂದ ವಂಚಿತರನ್ನಾಗಿಸುತ್ತಿದೆ ಎಂದು ಅವರು ಹೇಳಿದರು.</p>.<p>ಅರ್ಜಿಯನ್ನು ವಿಲೇವಾರಿ ಮಾಡಿದ ಪೀಠವು, ಈ ಕುರಿತು ಎರಡು ವಾರಗಳಲ್ಲಿ ಆದೇಶದ ಪ್ರತಿಯೊಂದಿಗೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿ ಎಂದು ಅರ್ಜಿದಾರರಿಗೆ ತಿಳಿಸಿತು. ಅಲ್ಲದೆ, ಇದನ್ನು ಪರಿಶೀಲಿಸಿ ನಾಲ್ಕು ತಿಂಗಳೊಳಗೆ ನಿರ್ಧಾರ ತೆಗೆದುಕೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>