<p>ಬಾಂಗ್ಲಾದೇಶದಲ್ಲಿ 2024ರ ಆಗಸ್ಟ್ನಿಂದ 2026ರ ಫೆಬ್ರುವರಿ ನಡುವೆ, ಹಿಂದೂ ಸೇರಿದಂತೆ ಅಲ್ಪಸಂಖ್ಯಾತರ ಮೇಲೆ 3,100ಕ್ಕೂ ಹೆಚ್ಚು ಹಿಂಸಾಚಾರದ ಘಟನೆಗಳು ನಡೆದಿವೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಪ್ರಸ್ತಾಪಿಸಿದೆ.</p><p>ಗುರುವಾರ ರಾಜ್ಯಸಭೆಯಲ್ಲಿ ಈ ಕುರಿತ ಪ್ರಶ್ನೆಯೊಂದಕ್ಕೆ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವೆ ಪಬಿತ್ರಾ ಮಾರ್ಗರಿಟಾ ಲಿಖಿತ ಉತ್ತರ ನೀಡಿ ಮಾತನಾಡಿದರು.</p><p>ಅಲಸಂಖ್ಯಾತರ ವಿರುದ್ಧ ನಡೆದ ಹತ್ಯೆಗಳು, ಬೆಂಕಿ ಹಚ್ಚುವಿಕೆ ಮತ್ತು ಹಿಂಸಾಚಾರಕ್ಕೆ ಕಾರಣರಾದ ಅಪರಾಧಿಗಳನ್ನು ಅಲ್ಲಿನ ನ್ಯಾಯಾಲಯವು ಬಂಧಿಸುತ್ತದೆ ಎಂಬ ವಿಶ್ವಾಸವು ಭಾರತಕ್ಕಿದೆ. ತನ್ನ ನಾಗರಿಕರ ಸಂಪೂರ್ಣ ಜವಾಬ್ದಾರಿಯು ಆ ದೇಶದ್ದಾಗಿರುತ್ತದೆ ಎಂದು ಹೇಳಿದ್ದಾರೆ.</p><p>ಬಾಂಗ್ಲಾದೇಶದಲ್ಲಿರುವ ಭಾರತೀಯ ನಾಗರಿಕರ ಸಹಾಯಕ್ಕಾಗಿ ಭಾರತ ಸರ್ಕಾರ ಹಾಗೂ ರಾಯಭಾರ ಕಚೇರಿ ಸದಾ ಸಿದ್ದವಿದೆ ಹಾಗು 24 ಗಂಟೆಗಳ ತುರ್ತು ಸಹಾಯವಾಣಿ ಲಭ್ಯವಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಂಗ್ಲಾದೇಶದಲ್ಲಿ 2024ರ ಆಗಸ್ಟ್ನಿಂದ 2026ರ ಫೆಬ್ರುವರಿ ನಡುವೆ, ಹಿಂದೂ ಸೇರಿದಂತೆ ಅಲ್ಪಸಂಖ್ಯಾತರ ಮೇಲೆ 3,100ಕ್ಕೂ ಹೆಚ್ಚು ಹಿಂಸಾಚಾರದ ಘಟನೆಗಳು ನಡೆದಿವೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಪ್ರಸ್ತಾಪಿಸಿದೆ.</p><p>ಗುರುವಾರ ರಾಜ್ಯಸಭೆಯಲ್ಲಿ ಈ ಕುರಿತ ಪ್ರಶ್ನೆಯೊಂದಕ್ಕೆ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವೆ ಪಬಿತ್ರಾ ಮಾರ್ಗರಿಟಾ ಲಿಖಿತ ಉತ್ತರ ನೀಡಿ ಮಾತನಾಡಿದರು.</p><p>ಅಲಸಂಖ್ಯಾತರ ವಿರುದ್ಧ ನಡೆದ ಹತ್ಯೆಗಳು, ಬೆಂಕಿ ಹಚ್ಚುವಿಕೆ ಮತ್ತು ಹಿಂಸಾಚಾರಕ್ಕೆ ಕಾರಣರಾದ ಅಪರಾಧಿಗಳನ್ನು ಅಲ್ಲಿನ ನ್ಯಾಯಾಲಯವು ಬಂಧಿಸುತ್ತದೆ ಎಂಬ ವಿಶ್ವಾಸವು ಭಾರತಕ್ಕಿದೆ. ತನ್ನ ನಾಗರಿಕರ ಸಂಪೂರ್ಣ ಜವಾಬ್ದಾರಿಯು ಆ ದೇಶದ್ದಾಗಿರುತ್ತದೆ ಎಂದು ಹೇಳಿದ್ದಾರೆ.</p><p>ಬಾಂಗ್ಲಾದೇಶದಲ್ಲಿರುವ ಭಾರತೀಯ ನಾಗರಿಕರ ಸಹಾಯಕ್ಕಾಗಿ ಭಾರತ ಸರ್ಕಾರ ಹಾಗೂ ರಾಯಭಾರ ಕಚೇರಿ ಸದಾ ಸಿದ್ದವಿದೆ ಹಾಗು 24 ಗಂಟೆಗಳ ತುರ್ತು ಸಹಾಯವಾಣಿ ಲಭ್ಯವಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>