ವಶಪಡಿಸಿಕೊಂಡಿರುವ ಮಾಂಸದ ತುಂಡುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ ಬಳಿಕ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಪೊಲೀಸರು ಹೇಳಿದ್ದಾರೆ.
ಹೆಚ್ಚಿನ ತನಿಖೆಗಾಗಿ ಫ್ಲಾಟ್ನ ಒಳಚರಂಡಿ ಪೈಪ್ಗಳನ್ನು ಒಡೆಯಬೇಕಾಗುತ್ತದೆ. ಇದಕ್ಕೆ ನಿವಾಸಿಗಳು ಸಹಕರಿಸಬೇಕು ಎಂದು ಸಿಐಡಿ ಪೊಲೀಸರು ಕೇಳಿಕೊಂಡಿದ್ದಾರೆ.
ಅನಾರ್ ಅವರ ಕೊಲೆ ಬಾಂಗ್ಲಾದೇಶದಲ್ಲಿ ತೀವ್ರ ಸಂಚಲನ ಮೂಡಿಸಿದ್ದು ಅಲ್ಲಿನ ಪೊಲೀಸರೂ ಪ್ರತ್ಯೇಕ ತನಿಖೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕೋಲ್ಕತ್ತಕ್ಕೆ ಆಗಮಿಸಿರುವ ಅವರು ಪಶ್ಚಿಮ ಬಂಗಾಳದಲ್ಲಿ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರ ಸಹಕಾರವನ್ನು ಕೇಳಿದ್ದಾರೆ.
ಪ್ರಕರಣದಲ್ಲಿ ಇದುವರೆಗೆ ಸಿಐಡಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವರನ್ನು ವಿಚಾರಣೆ ನಡೆಸಲು ಬಾಂಗ್ಲಾ ಪೊಲೀಸ್ ತಂಡ ಇಚ್ಛೆ ವ್ಯಕ್ತಪಡಿಸಿದೆ.
‘ಇದೊಂದು ಯೋಜಿತ ಹತ್ಯೆ. ಅನ್ವರುಲ್ ಅವರ ಆಪ್ತರಾದ ಅಮೆರಿಕದಲ್ಲಿರುವ ಪ್ರಜೆಯೊಬ್ಬರು ಸುಮಾರು ₹5 ಕೋಟಿ ಹಣ ಪಾವತಿಸಿ ಅನ್ವರುಲ್ ಅವರನ್ನು ಹತ್ಯೆ ಮಾಡಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ’ ಎಂದು ಸಿಐಡಿ ಹೇಳಿದೆ.