<p><strong>ನವದೆಹಲಿ:</strong> ಬಾಂಗ್ಲಾದೇಶದಲ್ಲಿ ಈಚೆಗೆ ನಡೆದ ಬೆಳವಣಿಗೆಗಳ ಬಗ್ಗೆ ಭಾರತವು ಕಳವಳ ವ್ಯಕ್ತಪಡಿಸಿರುವ ಹೊರತಾಗಿಯೂ, ಅಲ್ಲಿನ ಎಂಟು ಮಾಜಿ ಸೈನಿಕರು ಮತ್ತು ಸೇನೆಯ ಇಬ್ಬರು ಅಧಿಕಾರಿಗಳು ‘1971ರ ಬಾಂಗ್ಲಾ ವಿಮೋಚನಾ ಯುದ್ದ’ದ ಸ್ಮರಣಾರ್ಥ ಆಯೋಜಿಸಿದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕೋಲ್ಕತ್ತಕ್ಕೆ ಬಂದರು.</p>.<p>ಅದಕ್ಕೆ ಪ್ರತಿಯಾಗಿ ಭಾರತದ ಎಂಟು ಮಾಜಿ ಸೈನಿಕರು ಮತ್ತು ಇಬ್ಬರು ಅಧಿಕಾರಿಗಳು ಯುದ್ಧದ 53ನೇ ವರ್ಷಾಚರಣೆ ಪ್ರಯುಕ್ತ ಆಯೋಜಿಸಿರುವ ‘ವಿಜಯ್ ದಿವಸ್’ ಕಾರ್ಯಕ್ರಮದಲ್ಲಿ ಭಾಗಿಯಾಗಲು ಢಾಕಾ ತಲುಪಿದರು.</p>.<p>ಬಾಂಗ್ಲಾದ ನಿಯೋಗವು ಭಾರತೀಯ ಸೇನೆಯ ಪೂರ್ವ ಕಮಾಂಡ್ನ ಕೇಂದ್ರ ಕಚೇರಿಯಾಗಿರುವ ಕೋಲ್ಕತ್ತದ ಫೋರ್ಟ್ ವಿಲಿಯಂನಲ್ಲಿ ಸೋಮವಾರ ಆಯೋಜಿಸಿದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿತು.</p>.<p>ಬಾಂಗ್ಲಾದೇಶವನ್ನು ಸಾರ್ವಭೌಮ ರಾಷ್ಟ್ರವನ್ನಾಗಿಸಲು ಕಾರಣವಾದ 1971ರ ಪಾಕಿಸ್ತಾನ ವಿರುದ್ಧದ ಯುದ್ಧದಲ್ಲಿ ಭಾರತವು ಜಯಗಳಿಸಿದ ನೆನಪಿಗಾಗಿ ಪ್ರತಿ ವರ್ಷ ಡಿಸೆಂಬರ್ 16ರಂದು ‘ವಿಜಯ್ ದಿವಸ್’ ಆಚರಿಸಲಾಗುತ್ತದೆ. </p>.<div dir="ltr"> <div class="gmail_signature" dir="ltr"> <div dir="ltr"> <div> </div> </div> </div> </div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಬಾಂಗ್ಲಾದೇಶದಲ್ಲಿ ಈಚೆಗೆ ನಡೆದ ಬೆಳವಣಿಗೆಗಳ ಬಗ್ಗೆ ಭಾರತವು ಕಳವಳ ವ್ಯಕ್ತಪಡಿಸಿರುವ ಹೊರತಾಗಿಯೂ, ಅಲ್ಲಿನ ಎಂಟು ಮಾಜಿ ಸೈನಿಕರು ಮತ್ತು ಸೇನೆಯ ಇಬ್ಬರು ಅಧಿಕಾರಿಗಳು ‘1971ರ ಬಾಂಗ್ಲಾ ವಿಮೋಚನಾ ಯುದ್ದ’ದ ಸ್ಮರಣಾರ್ಥ ಆಯೋಜಿಸಿದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕೋಲ್ಕತ್ತಕ್ಕೆ ಬಂದರು.</p>.<p>ಅದಕ್ಕೆ ಪ್ರತಿಯಾಗಿ ಭಾರತದ ಎಂಟು ಮಾಜಿ ಸೈನಿಕರು ಮತ್ತು ಇಬ್ಬರು ಅಧಿಕಾರಿಗಳು ಯುದ್ಧದ 53ನೇ ವರ್ಷಾಚರಣೆ ಪ್ರಯುಕ್ತ ಆಯೋಜಿಸಿರುವ ‘ವಿಜಯ್ ದಿವಸ್’ ಕಾರ್ಯಕ್ರಮದಲ್ಲಿ ಭಾಗಿಯಾಗಲು ಢಾಕಾ ತಲುಪಿದರು.</p>.<p>ಬಾಂಗ್ಲಾದ ನಿಯೋಗವು ಭಾರತೀಯ ಸೇನೆಯ ಪೂರ್ವ ಕಮಾಂಡ್ನ ಕೇಂದ್ರ ಕಚೇರಿಯಾಗಿರುವ ಕೋಲ್ಕತ್ತದ ಫೋರ್ಟ್ ವಿಲಿಯಂನಲ್ಲಿ ಸೋಮವಾರ ಆಯೋಜಿಸಿದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿತು.</p>.<p>ಬಾಂಗ್ಲಾದೇಶವನ್ನು ಸಾರ್ವಭೌಮ ರಾಷ್ಟ್ರವನ್ನಾಗಿಸಲು ಕಾರಣವಾದ 1971ರ ಪಾಕಿಸ್ತಾನ ವಿರುದ್ಧದ ಯುದ್ಧದಲ್ಲಿ ಭಾರತವು ಜಯಗಳಿಸಿದ ನೆನಪಿಗಾಗಿ ಪ್ರತಿ ವರ್ಷ ಡಿಸೆಂಬರ್ 16ರಂದು ‘ವಿಜಯ್ ದಿವಸ್’ ಆಚರಿಸಲಾಗುತ್ತದೆ. </p>.<div dir="ltr"> <div class="gmail_signature" dir="ltr"> <div dir="ltr"> <div> </div> </div> </div> </div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>