<p><strong>ಭೋಪಾಲ್(ಮಧ್ಯ ಪ್ರದೇಶ)</strong>: ಅಕ್ರಮ ವಲಸೆ ವಿರುದ್ಧದ ಕಾರ್ಯಾಚರಣೆ ವೇಳೆ ಭೋಪಾಲ್ ಪೊಲೀಸರು ಕಳೆದ ಎಂಟು ವರ್ಷಗಳಿಂದ ‘ನೇಹಾ’ ಎಂಬ ನಕಲಿ ಗುರುತಿನಡಿ ನಗರದಲ್ಲಿ ವಾಸಿಸುತ್ತಿದ್ದ ಬಾಂಗ್ಲಾ ಪ್ರಜೆ ಅಬ್ದುಲ್ ಕಲಾಂ ಎಂಬವರನ್ನು ಬಂಧಿಸಿದ್ದಾರೆ.</p><p>10ನೇ ವಯಸ್ಸಿಗೆ ಬಾಂಗ್ಲಾದೇಶದಿಂದ ಭಾರತಕ್ಕೆ ಬಂದ ಅಬ್ದುಲ್, 20 ವರ್ಷಗಳನ್ನು ಮುಂಬೈನಲ್ಲಿ ಕಳೆದಿದ್ದಾರೆ. ಕಳೆದ 8 ವರ್ಷದಿಂದ ಭೋಪಾಲ್ನ ಬುಧ್ವಾರಾದಲ್ಲಿ ನೆಲೆಸಿರುವ ಅವರು ಮಂಗಳಮುಖಿ ಎಂದು ಹೇಳಿಕೊಂಡು ಸ್ಥಳೀಯ ಹಿಜಡಾ ಸಮುದಾಯದ ಸಕ್ರಿಯ ಸದಸ್ಯರಾಗಿದ್ದಾರೆ ಎಂದು ಪೊಲೀಸರ ಹೇಳಿಕೆಯನ್ನು ಉಲ್ಲೇಖಿಸಿ ಎನ್ಡಿಟಿವಿ ವರದಿ ಮಾಡಿದೆ.</p><p>ಸ್ಥಳೀಯ ಏಜೆಂಟರ ಸಹಾಯದಿಂದ ನಕಲಿ ದಾಖಲೆಗಳನ್ನು ಬಳಸಿಕೊಂಡು ಆಧಾರ್ ಕಾರ್ಡ್, ಪಡಿತರ ಚೀಟಿ, ಪಾಸ್ಪೋರ್ಟ್ ಸೇರಿದಂತೆ ಪ್ರಮುಖ ದಾಖಲೆಗಳನ್ನು ಪಡೆದುಕೊಂಡಿದ್ದಾರೆ ಎಂಬುದು ತನಿಖೆಯ ವೇಳೆ ಬೆಳಕಿಗೆ ಬಂದಿದೆ.</p><p>‘ನಕಲಿ ಗುರುತಿನ ಚೀಟಿಯನ್ನು ಬಳಸಿಕೊಂಡು ಭಾರತದಲ್ಲಿ ನೆಲೆಸಿದ್ದಲ್ಲದೇ, ನಕಲಿ ಪಾಸ್ಪೋರ್ಟ್ ಅನ್ನು ಬಳಸಿಕೊಂಡು ವಿದೇಶಕ್ಕೂ ಪ್ರಯಾಣ ಮಾಡಿದ್ದಾರೆ. ಬುಧ್ವಾರಾದಲ್ಲಿ ಹಲವು ಮನೆಗಳನ್ನು ಬದಲಾಯಿಸಿರುವ ಈತ, ನೇಹಾ ಎಂಬ ಹೆಸರಿನಿಂದ ಗುರುತಿಸಿಕೊಂಡಿದ್ದನು’ ಎಂದು ಪೊಲೀಸರು ತಿಳಿಸಿದ್ದಾರೆ.</p><p>‘ಗುರುತನ್ನು ಮರೆಮಾಚಲು ಮಂಗಳಮುಖಿಯಾಗಿ ವೇಷ ಮರೆಸಿಕೊಂಡಿದ್ದಾನಾ? ಅಥವಾ ಜೈವಿಕವಾಗಿ ಲಿಂಗತ್ವ ಅಲ್ಪಸಂಖ್ಯಾತನಾ? ಎಂಬ ಬಗ್ಗೆ ಪರೀಕ್ಷೆ ನಡೆಸಲಾಗುತ್ತಿದೆ’ ಎಂದು ತಿಳಿಸಿದ್ದಾರೆ.</p><p>‘ಮಹಾರಾಷ್ಟ್ರದಲ್ಲೂ ಮಂಗಳಮುಖಿಯಾಗಿ ಅಬ್ದುಲ್ ಸಕ್ರಿಯವಾಗಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿದ್ದು, ಯಾವುದಾದರೂ ಭೂಗತ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭೋಪಾಲ್(ಮಧ್ಯ ಪ್ರದೇಶ)</strong>: ಅಕ್ರಮ ವಲಸೆ ವಿರುದ್ಧದ ಕಾರ್ಯಾಚರಣೆ ವೇಳೆ ಭೋಪಾಲ್ ಪೊಲೀಸರು ಕಳೆದ ಎಂಟು ವರ್ಷಗಳಿಂದ ‘ನೇಹಾ’ ಎಂಬ ನಕಲಿ ಗುರುತಿನಡಿ ನಗರದಲ್ಲಿ ವಾಸಿಸುತ್ತಿದ್ದ ಬಾಂಗ್ಲಾ ಪ್ರಜೆ ಅಬ್ದುಲ್ ಕಲಾಂ ಎಂಬವರನ್ನು ಬಂಧಿಸಿದ್ದಾರೆ.</p><p>10ನೇ ವಯಸ್ಸಿಗೆ ಬಾಂಗ್ಲಾದೇಶದಿಂದ ಭಾರತಕ್ಕೆ ಬಂದ ಅಬ್ದುಲ್, 20 ವರ್ಷಗಳನ್ನು ಮುಂಬೈನಲ್ಲಿ ಕಳೆದಿದ್ದಾರೆ. ಕಳೆದ 8 ವರ್ಷದಿಂದ ಭೋಪಾಲ್ನ ಬುಧ್ವಾರಾದಲ್ಲಿ ನೆಲೆಸಿರುವ ಅವರು ಮಂಗಳಮುಖಿ ಎಂದು ಹೇಳಿಕೊಂಡು ಸ್ಥಳೀಯ ಹಿಜಡಾ ಸಮುದಾಯದ ಸಕ್ರಿಯ ಸದಸ್ಯರಾಗಿದ್ದಾರೆ ಎಂದು ಪೊಲೀಸರ ಹೇಳಿಕೆಯನ್ನು ಉಲ್ಲೇಖಿಸಿ ಎನ್ಡಿಟಿವಿ ವರದಿ ಮಾಡಿದೆ.</p><p>ಸ್ಥಳೀಯ ಏಜೆಂಟರ ಸಹಾಯದಿಂದ ನಕಲಿ ದಾಖಲೆಗಳನ್ನು ಬಳಸಿಕೊಂಡು ಆಧಾರ್ ಕಾರ್ಡ್, ಪಡಿತರ ಚೀಟಿ, ಪಾಸ್ಪೋರ್ಟ್ ಸೇರಿದಂತೆ ಪ್ರಮುಖ ದಾಖಲೆಗಳನ್ನು ಪಡೆದುಕೊಂಡಿದ್ದಾರೆ ಎಂಬುದು ತನಿಖೆಯ ವೇಳೆ ಬೆಳಕಿಗೆ ಬಂದಿದೆ.</p><p>‘ನಕಲಿ ಗುರುತಿನ ಚೀಟಿಯನ್ನು ಬಳಸಿಕೊಂಡು ಭಾರತದಲ್ಲಿ ನೆಲೆಸಿದ್ದಲ್ಲದೇ, ನಕಲಿ ಪಾಸ್ಪೋರ್ಟ್ ಅನ್ನು ಬಳಸಿಕೊಂಡು ವಿದೇಶಕ್ಕೂ ಪ್ರಯಾಣ ಮಾಡಿದ್ದಾರೆ. ಬುಧ್ವಾರಾದಲ್ಲಿ ಹಲವು ಮನೆಗಳನ್ನು ಬದಲಾಯಿಸಿರುವ ಈತ, ನೇಹಾ ಎಂಬ ಹೆಸರಿನಿಂದ ಗುರುತಿಸಿಕೊಂಡಿದ್ದನು’ ಎಂದು ಪೊಲೀಸರು ತಿಳಿಸಿದ್ದಾರೆ.</p><p>‘ಗುರುತನ್ನು ಮರೆಮಾಚಲು ಮಂಗಳಮುಖಿಯಾಗಿ ವೇಷ ಮರೆಸಿಕೊಂಡಿದ್ದಾನಾ? ಅಥವಾ ಜೈವಿಕವಾಗಿ ಲಿಂಗತ್ವ ಅಲ್ಪಸಂಖ್ಯಾತನಾ? ಎಂಬ ಬಗ್ಗೆ ಪರೀಕ್ಷೆ ನಡೆಸಲಾಗುತ್ತಿದೆ’ ಎಂದು ತಿಳಿಸಿದ್ದಾರೆ.</p><p>‘ಮಹಾರಾಷ್ಟ್ರದಲ್ಲೂ ಮಂಗಳಮುಖಿಯಾಗಿ ಅಬ್ದುಲ್ ಸಕ್ರಿಯವಾಗಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿದ್ದು, ಯಾವುದಾದರೂ ಭೂಗತ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>