<p><strong>ಪಿಲಿಭಿತ್ (ಉತ್ತರ ಪ್ರದೇಶ):</strong> ಪೂರ್ವ ಪಾಕಿಸ್ತಾನದಿಂದ (ಇಂದಿನ ಬಾಂಗ್ಲಾದೇಶ) ಸ್ಥಳಾಂತರಗೊಂಡು, ಇಲ್ಲಿನ ಪಿಲಿಭಿತ್ ಜಿಲ್ಲೆಯ 25 ಹಳ್ಳಿಗಳಲ್ಲಿ ನೆಲೆಸಿರುವ 2,196 ಬಾಂಗ್ಲಾ ನಿರಾಶ್ರಿತರಿಗೆ ಭೂ ಮಾಲೀಕತ್ವದ ಹಕ್ಕು ನೀಡಲು ಉತ್ತರ ಪ್ರದೇಶ ಸರ್ಕಾರ ಸಜ್ಜಾಗಿದೆ.</p>.<p>ಇತ್ತೀಚೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದರಿಂದಾಗಿ ನಿರಾಶ್ರಿತ ಕುಟುಂಬಗಳ ಬಹುದಿನಗಳ ಬೇಡಿಕೆ ಈಡೇರುವ ಹಂತಕ್ಕೆ ಬಂದಿದೆ.</p>.<p>ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಸಂಬಂಧಪಟ್ಟ ಇಲಾಖೆಗಳಿಗೆ ಸೂಚನೆ ನೀಡಿದ್ದಾರೆ. ಕೆಲವು ಔಪಚಾರಿಕ ಕಾರ್ಯವಿಧಾನಗಳು ಮಾತ್ರ ಬಾಕಿ ಇವೆ. ಬರೋಬ್ಬರಿ 62 ವರ್ಷಗಳ ನಂತರ, ಈ ಕುಟುಂಬಗಳು ಈಗ ತಾವು ವಾಸಿಸುತ್ತಿದ್ದ ಮತ್ತು ಕೃಷಿ ಮಾಡುತ್ತಿದ್ದ ಭೂಮಿಗೆ ಕಾನೂನುಬದ್ಧ ಮಾನ್ಯತೆಯನ್ನು ಪಡೆಯಲಿದ್ದಾರೆ ಎಂದು ಪಿಲಿಭಿತ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಜ್ಞಾನೇಂದ್ರ ಸಿಂಗ್ ತಿಳಿಸಿದ್ದಾರೆ.</p>.<p>ಮುಖ್ಯಮಂತ್ರಿಯ ಈ ನಿರ್ಧಾರಕ್ಕೆ ಪಿಲಿಭಿತ್ನ ಉಸ್ತುವಾರಿ ಸಚಿವ ಬಲದೇವ್ ಸಿಂಗ್ ಔಲಖ್ ಕೃತಜ್ಞತೆ ಸಲ್ಲಿಸಿದ್ದಾರೆ.</p>.<p> ಈ ನಿರಾಶ್ರಿತ ಕುಟುಂಬಗಳಿಗೆ ವಸತಿ ಮತ್ತು ಕೃಷಿಗಾಗಿ ಸರ್ಕಾರ 1960ರಲ್ಲಿ ಭೂಮಿಯನ್ನು ಮಂಜೂರು ಮಾಡಿತ್ತು. ಆದರೆ ಅವರಿಗೆ ಕಾನೂನುಬದ್ಧ ಮಾಲೀಕತ್ವವನ್ನು ನೀಡಿರಲಿಲ್ಲ. ಭೂಮಿಯ ಕಾನೂನುಬದ್ಧ ಮಾಲೀಕತ್ವ ಇಲ್ಲದಿದ್ದರಿಂದ ಅವರು ಸರ್ಕಾರದ ಕಲ್ಯಾಣ ಯೋಜನೆಗಳ ಅಡಿಯಲ್ಲಿ ಸಿಗಬಹುದಾದ ಸವಲತ್ತುಗಳಿಂದ ವಂಚಿತರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಿಲಿಭಿತ್ (ಉತ್ತರ ಪ್ರದೇಶ):</strong> ಪೂರ್ವ ಪಾಕಿಸ್ತಾನದಿಂದ (ಇಂದಿನ ಬಾಂಗ್ಲಾದೇಶ) ಸ್ಥಳಾಂತರಗೊಂಡು, ಇಲ್ಲಿನ ಪಿಲಿಭಿತ್ ಜಿಲ್ಲೆಯ 25 ಹಳ್ಳಿಗಳಲ್ಲಿ ನೆಲೆಸಿರುವ 2,196 ಬಾಂಗ್ಲಾ ನಿರಾಶ್ರಿತರಿಗೆ ಭೂ ಮಾಲೀಕತ್ವದ ಹಕ್ಕು ನೀಡಲು ಉತ್ತರ ಪ್ರದೇಶ ಸರ್ಕಾರ ಸಜ್ಜಾಗಿದೆ.</p>.<p>ಇತ್ತೀಚೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದರಿಂದಾಗಿ ನಿರಾಶ್ರಿತ ಕುಟುಂಬಗಳ ಬಹುದಿನಗಳ ಬೇಡಿಕೆ ಈಡೇರುವ ಹಂತಕ್ಕೆ ಬಂದಿದೆ.</p>.<p>ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಸಂಬಂಧಪಟ್ಟ ಇಲಾಖೆಗಳಿಗೆ ಸೂಚನೆ ನೀಡಿದ್ದಾರೆ. ಕೆಲವು ಔಪಚಾರಿಕ ಕಾರ್ಯವಿಧಾನಗಳು ಮಾತ್ರ ಬಾಕಿ ಇವೆ. ಬರೋಬ್ಬರಿ 62 ವರ್ಷಗಳ ನಂತರ, ಈ ಕುಟುಂಬಗಳು ಈಗ ತಾವು ವಾಸಿಸುತ್ತಿದ್ದ ಮತ್ತು ಕೃಷಿ ಮಾಡುತ್ತಿದ್ದ ಭೂಮಿಗೆ ಕಾನೂನುಬದ್ಧ ಮಾನ್ಯತೆಯನ್ನು ಪಡೆಯಲಿದ್ದಾರೆ ಎಂದು ಪಿಲಿಭಿತ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಜ್ಞಾನೇಂದ್ರ ಸಿಂಗ್ ತಿಳಿಸಿದ್ದಾರೆ.</p>.<p>ಮುಖ್ಯಮಂತ್ರಿಯ ಈ ನಿರ್ಧಾರಕ್ಕೆ ಪಿಲಿಭಿತ್ನ ಉಸ್ತುವಾರಿ ಸಚಿವ ಬಲದೇವ್ ಸಿಂಗ್ ಔಲಖ್ ಕೃತಜ್ಞತೆ ಸಲ್ಲಿಸಿದ್ದಾರೆ.</p>.<p> ಈ ನಿರಾಶ್ರಿತ ಕುಟುಂಬಗಳಿಗೆ ವಸತಿ ಮತ್ತು ಕೃಷಿಗಾಗಿ ಸರ್ಕಾರ 1960ರಲ್ಲಿ ಭೂಮಿಯನ್ನು ಮಂಜೂರು ಮಾಡಿತ್ತು. ಆದರೆ ಅವರಿಗೆ ಕಾನೂನುಬದ್ಧ ಮಾಲೀಕತ್ವವನ್ನು ನೀಡಿರಲಿಲ್ಲ. ಭೂಮಿಯ ಕಾನೂನುಬದ್ಧ ಮಾಲೀಕತ್ವ ಇಲ್ಲದಿದ್ದರಿಂದ ಅವರು ಸರ್ಕಾರದ ಕಲ್ಯಾಣ ಯೋಜನೆಗಳ ಅಡಿಯಲ್ಲಿ ಸಿಗಬಹುದಾದ ಸವಲತ್ತುಗಳಿಂದ ವಂಚಿತರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>