<p><strong>ಲಖನೌ:</strong> ಉತ್ತರಪ್ರದೇಶದ ಮಥುರಾ ಜಿಲ್ಲೆಯ ವೃಂದಾವನದಲ್ಲಿರುವ ಹೆಸರಾಂತ ಬಂಕೆ ಬಿಹಾರಿ ದೇವಾಲಯದ ಖಜಾನೆಯನ್ನು 54 ವರ್ಷದ ಬಳಿಕ ಶನಿವಾರ ತೆರೆಯಲಾಗಿದೆ.</p><p>‘ಸೇವಾಯತ್’ಗಳ (ದೇವಾಲಯದ ಆನುವಂಶಿಕ ಪಾಲಕರಾದ ಗೋಸ್ವಾಮಿ ಪುರೋಹಿತರು) ಒಂದು ಗುಂಪಿನ ಪ್ರತಿಭಟನೆ ಹೊರತಾಗಿಯೂ ದೇವಾಲಯ ಆಡಳಿತ ಮಂಡಳಿಯ ಪದಾಧಿಕಾರಿಗಳ ಸಮ್ಮುಖದಲ್ಲಿ ಖಜಾನೆಯನ್ನು ತೆರೆಯಲಾಗಿದೆ.</p><p>ದೇವಾಲಯ ನಿರ್ವಹಣಾ ಸಮಿತಿಯ ಆದೇಶದ ಮೇರೆಗೆ ಖಜಾನೆಯನ್ನು ತೆರೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.</p><p>‘ಒಂದು ಮರದ ಪೆಟ್ಟಿಗೆ, ಮೂರು ಪಾತ್ರೆ, ಮೂರು ಬಟ್ಟಲು, ಒಂದು ‘ಪರಾತ್’ (ಅಗಲವಾದ ತಟ್ಟೆ), ಒಂದು ಸಣ್ಣ ಬೆಳ್ಳಿ ಛತ್ರಿ ಮತ್ತು 1970ರ ಫೆಬ್ರುವರಿ 2 ದಿನಾಂಕದ ಪತ್ರವೊಂದು ಕಂಡುಬಂದಿದೆ ಎಂದು ವರದಿಗಳು ತಿಳಿಸಿವೆ. ವಸ್ತುಗಳನ್ನು ಹೊರತೆಗೆಯುವ ಕೆಲಸ ಇನ್ನೂ ಮುಂದುವರೆದಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>‘ಸೇವಾಯತ್’ಗಳ ಒಂದು ಗುಂಪು ದೇವಾಲಯದ ಖಜಾನೆ ತೆರೆಯುವಿಕೆಯನ್ನು ವಿರೋಧಿಸಿತ್ತು. ವಸ್ತುಗಳನ್ನು ಹೊರತೆಗೆಯುವ ಪ್ರಕ್ರಿಯೆಯನ್ನು ಪರದೆಯ ಮೂಲಕ ನೇರಪ್ರಸಾರ ಮಾಡಬೇಕೆಂದು ಒತ್ತಾಯಿಸಿತ್ತು ಎಂದು ವರದಿಗಳು ತಿಳಿಸಿವೆ.</p><p>ಈ ಹಿಂದೆ 1971ರಲ್ಲಿ ದೇವಾಲಯದ ಖಜಾನೆಯನ್ನು ತೆರೆಯಲಾಗಿತ್ತು. ನಂತರ ಅದನ್ನು ತೆರೆಯಲು ಪ್ರಯತ್ನಿಸಿದ್ದಾದರೂ ಸಾಧ್ಯವಾಗಿರಲಿಲ್ಲ. 1926 ಮತ್ತು 1936ರಲ್ಲಿ ಖಜಾನೆಯ ಎರಡು ಕಳ್ಳತನ ಪ್ರಕರಣಗಳು ವರದಿಯಾಗಿದ್ದವು. ಬಳಿಕ ನ್ಯಾಯಾಲಯದ ನಿರ್ದೇಶನದ ಮೇರೆಗೆ ಬಾಗಿಲನ್ನು ಮುಚ್ಚಲಾಯಿತು ಎಂದು ಇತಿಹಾಸಕಾರರೊಬ್ಬರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಉತ್ತರಪ್ರದೇಶದ ಮಥುರಾ ಜಿಲ್ಲೆಯ ವೃಂದಾವನದಲ್ಲಿರುವ ಹೆಸರಾಂತ ಬಂಕೆ ಬಿಹಾರಿ ದೇವಾಲಯದ ಖಜಾನೆಯನ್ನು 54 ವರ್ಷದ ಬಳಿಕ ಶನಿವಾರ ತೆರೆಯಲಾಗಿದೆ.</p><p>‘ಸೇವಾಯತ್’ಗಳ (ದೇವಾಲಯದ ಆನುವಂಶಿಕ ಪಾಲಕರಾದ ಗೋಸ್ವಾಮಿ ಪುರೋಹಿತರು) ಒಂದು ಗುಂಪಿನ ಪ್ರತಿಭಟನೆ ಹೊರತಾಗಿಯೂ ದೇವಾಲಯ ಆಡಳಿತ ಮಂಡಳಿಯ ಪದಾಧಿಕಾರಿಗಳ ಸಮ್ಮುಖದಲ್ಲಿ ಖಜಾನೆಯನ್ನು ತೆರೆಯಲಾಗಿದೆ.</p><p>ದೇವಾಲಯ ನಿರ್ವಹಣಾ ಸಮಿತಿಯ ಆದೇಶದ ಮೇರೆಗೆ ಖಜಾನೆಯನ್ನು ತೆರೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.</p><p>‘ಒಂದು ಮರದ ಪೆಟ್ಟಿಗೆ, ಮೂರು ಪಾತ್ರೆ, ಮೂರು ಬಟ್ಟಲು, ಒಂದು ‘ಪರಾತ್’ (ಅಗಲವಾದ ತಟ್ಟೆ), ಒಂದು ಸಣ್ಣ ಬೆಳ್ಳಿ ಛತ್ರಿ ಮತ್ತು 1970ರ ಫೆಬ್ರುವರಿ 2 ದಿನಾಂಕದ ಪತ್ರವೊಂದು ಕಂಡುಬಂದಿದೆ ಎಂದು ವರದಿಗಳು ತಿಳಿಸಿವೆ. ವಸ್ತುಗಳನ್ನು ಹೊರತೆಗೆಯುವ ಕೆಲಸ ಇನ್ನೂ ಮುಂದುವರೆದಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>‘ಸೇವಾಯತ್’ಗಳ ಒಂದು ಗುಂಪು ದೇವಾಲಯದ ಖಜಾನೆ ತೆರೆಯುವಿಕೆಯನ್ನು ವಿರೋಧಿಸಿತ್ತು. ವಸ್ತುಗಳನ್ನು ಹೊರತೆಗೆಯುವ ಪ್ರಕ್ರಿಯೆಯನ್ನು ಪರದೆಯ ಮೂಲಕ ನೇರಪ್ರಸಾರ ಮಾಡಬೇಕೆಂದು ಒತ್ತಾಯಿಸಿತ್ತು ಎಂದು ವರದಿಗಳು ತಿಳಿಸಿವೆ.</p><p>ಈ ಹಿಂದೆ 1971ರಲ್ಲಿ ದೇವಾಲಯದ ಖಜಾನೆಯನ್ನು ತೆರೆಯಲಾಗಿತ್ತು. ನಂತರ ಅದನ್ನು ತೆರೆಯಲು ಪ್ರಯತ್ನಿಸಿದ್ದಾದರೂ ಸಾಧ್ಯವಾಗಿರಲಿಲ್ಲ. 1926 ಮತ್ತು 1936ರಲ್ಲಿ ಖಜಾನೆಯ ಎರಡು ಕಳ್ಳತನ ಪ್ರಕರಣಗಳು ವರದಿಯಾಗಿದ್ದವು. ಬಳಿಕ ನ್ಯಾಯಾಲಯದ ನಿರ್ದೇಶನದ ಮೇರೆಗೆ ಬಾಗಿಲನ್ನು ಮುಚ್ಚಲಾಯಿತು ಎಂದು ಇತಿಹಾಸಕಾರರೊಬ್ಬರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>