‘ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜೋಳದಹಡ್ಗಿ ಗ್ರಾಮದ ಬಳಿ ಕೃಷ್ಣಾ ನದಿ ತೀರದಲ್ಲಿ ಎರಡು ಸ್ಥಳಗಳಲ್ಲಿ ಮರಳು ಗಣಿಗಾರಿಕೆ ನಡೆಸಲಾಗುತ್ತಿದೆ. ಇದಕ್ಕಾಗಿ ಜೆಸಿಬಿ ಸೇರಿ ಇತರ ದೊಡ್ಡ ಯಂತ್ರೋಪಕರಣಗಳನ್ನು ಬಳಸಲಾಗುತ್ತಿದೆ. ಇದು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ತಡೆ ಸಚಿವಾಲಯ ನೀಡಿರುವ ಮಾರ್ಗಸೂಚಿಯ ಉಲ್ಲಂಘನೆ ಆಗಿದೆ’ ಎಂದು ಸಾರ್ವಭೌಮ ಅವರು ಸಲ್ಲಿಸಿದ್ದ ಅರ್ಜಿಯಲ್ಲಿ ಹೇಳಲಾಗಿತ್ತು.