<p><strong>ಬರೇಲಿ</strong>: ಬರೇಲಿಯಲ್ಲಿ ‘ಐ ಲವ್ ಮುಹಮ್ಮದ್’ ಪ್ರತಿಭಟನಾ ಮೆರವಣಿಗೆಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೇಹಾದ್-ಎ-ಮಿಲ್ಲತ್ ಕೌನ್ಸಿಲ್ ಮುಖ್ಯಸ್ಥ ಹಾಗೂ ಮೌಲ್ವಿ ತೌಕೀರ್ ರಜಾ ಖಾನ್ ಸಹವರ್ತಿ ನದೀಮ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಈ ಹಿಂಸಾಚಾರವು ಸ್ವಯಂಪ್ರೇರಿತವಲ್ಲ. ಬದಲಿಗೆ ಇದೊಂದು ಪೂರ್ವನಿಯೋಜಿತ ಘಟನೆಯಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ತಿಳಿಸಿದ್ದಾರೆ.</p>.<p>‘ನದೀಮ್ ಪ್ರತಿಭಟನೆಯ ರೂವಾರಿ ಎಂದು ತನಿಖೆಯಿಂದ ತಿಳಿದುಬಂದಿದೆ. ಆತ ವಾಟ್ಸ್ಆ್ಯಪ್ ಮೂಲಕ 55 ಜನರಿಗೆ ಪ್ರತಿಭಟನೆ ನಡೆಸಲು ಪ್ರಚೋದನೆ ನೀಡಿದ್ದಾನೆ. ಬಳಿಕ ಸುಮಾರು 1,600 ಜನರನ್ನು ಸೇರಿಸಿದ್ದಾನೆ’ ಎಂದು ಅಧಿಕಾರಿ ತಿಳಿಸಿದ್ದಾರೆ.</p>.<p class="title">ಸಿಎಎ ಮತ್ತು ಎನ್ಆರ್ಬಿ ವಿರೋಧಿ ಪ್ರತಿಭಟನೆಗಳ ಮಾದರಿಯಲ್ಲಿ ಆಂದೋಲನವನ್ನು ಪ್ರಾರಂಭಿಸಲು ಸಂಚು ರೂಪಿಸಿದ್ದು, ಪ್ರತಿಭಟನೆಯಲ್ಲಿ ಅಪ್ರಾಪ್ತ ವಯಸ್ಸಿನವರನ್ನು ಮುಂಚೂಣಿಯಲ್ಲಿ ಇರಿಸಲಾಗಿತ್ತು. ನದೀಮ್ ಮತ್ತು ಆತನ ಸಹಚರರು ಜನರನ್ನು ಪ್ರಚೋದಿಸಲು ಸಕ್ರಿಯರಾಗಿ ತೊಡಗಿದ್ದರು ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬರೇಲಿ</strong>: ಬರೇಲಿಯಲ್ಲಿ ‘ಐ ಲವ್ ಮುಹಮ್ಮದ್’ ಪ್ರತಿಭಟನಾ ಮೆರವಣಿಗೆಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೇಹಾದ್-ಎ-ಮಿಲ್ಲತ್ ಕೌನ್ಸಿಲ್ ಮುಖ್ಯಸ್ಥ ಹಾಗೂ ಮೌಲ್ವಿ ತೌಕೀರ್ ರಜಾ ಖಾನ್ ಸಹವರ್ತಿ ನದೀಮ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಈ ಹಿಂಸಾಚಾರವು ಸ್ವಯಂಪ್ರೇರಿತವಲ್ಲ. ಬದಲಿಗೆ ಇದೊಂದು ಪೂರ್ವನಿಯೋಜಿತ ಘಟನೆಯಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ತಿಳಿಸಿದ್ದಾರೆ.</p>.<p>‘ನದೀಮ್ ಪ್ರತಿಭಟನೆಯ ರೂವಾರಿ ಎಂದು ತನಿಖೆಯಿಂದ ತಿಳಿದುಬಂದಿದೆ. ಆತ ವಾಟ್ಸ್ಆ್ಯಪ್ ಮೂಲಕ 55 ಜನರಿಗೆ ಪ್ರತಿಭಟನೆ ನಡೆಸಲು ಪ್ರಚೋದನೆ ನೀಡಿದ್ದಾನೆ. ಬಳಿಕ ಸುಮಾರು 1,600 ಜನರನ್ನು ಸೇರಿಸಿದ್ದಾನೆ’ ಎಂದು ಅಧಿಕಾರಿ ತಿಳಿಸಿದ್ದಾರೆ.</p>.<p class="title">ಸಿಎಎ ಮತ್ತು ಎನ್ಆರ್ಬಿ ವಿರೋಧಿ ಪ್ರತಿಭಟನೆಗಳ ಮಾದರಿಯಲ್ಲಿ ಆಂದೋಲನವನ್ನು ಪ್ರಾರಂಭಿಸಲು ಸಂಚು ರೂಪಿಸಿದ್ದು, ಪ್ರತಿಭಟನೆಯಲ್ಲಿ ಅಪ್ರಾಪ್ತ ವಯಸ್ಸಿನವರನ್ನು ಮುಂಚೂಣಿಯಲ್ಲಿ ಇರಿಸಲಾಗಿತ್ತು. ನದೀಮ್ ಮತ್ತು ಆತನ ಸಹಚರರು ಜನರನ್ನು ಪ್ರಚೋದಿಸಲು ಸಕ್ರಿಯರಾಗಿ ತೊಡಗಿದ್ದರು ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>