‘ಈ ಇಬ್ಬರು ಇಸ್ರೇಲ್ ಹಾಗೂ ಪ್ಯಾಲೇಸ್ಟೀನ್ ನಡುವಿನ ಯುದ್ಧ ಕೊನೆಗಾಣಿಸಲು ತಮ್ಮ ಜೀವನವನ್ನೇ ಸಮರ್ಪಿಸಿದ್ದಾರೆ. ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪನೆಗಾಗಿ ನೀಡಿದ ಕೊಡುಗೆಯನ್ನು ಪರಿಗಣಿಸಿ ಶಾಂತಿ, ನಿಶ್ಶಸ್ತ್ರಿಕರಣ ಹಾಗೂ ಅಭಿವೃದ್ಧಿಗಾಗಿ ನೀಡುವ ಇಂದಿರಾ ಗಾಂಧಿ ಪ್ರಶಸ್ತಿಗೆ ಇಬ್ಬರನ್ನು ಆಯ್ಕೆ ಮಾಡಲಾಗಿದೆ’ ಎಂದು ಇಂದಿರಾ ಗಾಂಧಿ ಸ್ಮಾರಕ ಟ್ರಸ್ಟ್ ಅಧ್ಯಕ್ಷ, ನಿವೃತ್ತ ಮುಖ್ಯನ್ಯಾಯಮೂರ್ತಿ ಟಿ.ಎಸ್.ಠಾಕೂರ್ ತಿಳಿಸಿದ್ದಾರೆ.