ಭಾನುವಾರ ಇಲ್ಲಿ ಆರಂಭವಾದ ನೈರ್ಮಲ್ಯ ಕುರಿತ ರಾಷ್ಟ್ರೀಯ ಸಮ್ಮೇಳನದಲ್ಲಿ ಮಾತನಾಡಿದ ಅವರು ‘ಸ್ವಾತಂತ್ರ್ಯಕ್ಕಿಂತಲೂ ಹೆಚ್ಚಾಗಿ ಸ್ವಚ್ಛತೆಯೂ ಅಗತ್ಯವೆಂಬುದು ರಾಷ್ಟ್ರಪಿತ ಗಾಂಧೀಜಿಯವರ ನಂಬಿಕೆಯಾಗಿತ್ತು. ಅವರು ಸ್ವಾತಂತ್ರ್ಯ ಮತ್ತು ಸ್ವಚ್ಛತೆಗೆ ಸಮಾನ ಆದ್ಯತೆ ನೀಡಿದ್ದರು. ಅವರ ನಂತರ, ಯಾರಾದರೂ ಸ್ವಚ್ಛತೆಯ ಮಹತ್ವವನ್ನು ಹೆಚ್ಚು ಅರಿತಿದ್ದರೆ, ಅದು ಮೋದಿ ಮಾತ್ರ. ಶೌಚಾಲಯಗಳನ್ನು ನಿರ್ಮಿಸುವ ಬಗ್ಗೆ ರಾಷ್ಟ್ರಪತಿ ಭವನದ ಕೆಂಪುಕೋಟೆಯಿಂದ ಮಾತನಾಡಿದ ಮೊದಲ ಪ್ರಧಾನಿಯೂ ಮೋದಿಯೇ ಆಗಿದ್ದಾರೆ. ಅದಕ್ಕೂ ಮೊದಲು ಯಾರೊಬ್ಬರೂ ಈ ಬಗ್ಗೆ ಮಾತನಾಡಿರಲಿಲ್ಲ. ಕೆಲವರು ಮೋದಿ ಅವರ ಈ ಕಳಕಳಿಯನ್ನು ಗೇಲಿ ಮಾಡಿದ್ದರು’ ಎಂದು ಕೋವಿಂದ್ ಹೇಳಿದರು.