<p><strong>ರಾಯಪುರ</strong>: ಛತ್ತೀಸಗಢದ ಬಸ್ತಾರ್ ಪ್ರದೇಶದಲ್ಲಿ ನಕ್ಸಲರಿಂದ ಮುಕ್ತಗೊಂಡಿರುವ 41 ಹಳ್ಳಿಗಳಲ್ಲಿ ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವ ಆಚರಿಸಲಾಗುತ್ತಿದೆ. ಈ ಮೂಲಕ ಮೊದಲ ಬಾರಿಗೆ ಈ ಗ್ರಾಮಗಳಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಲಾಗುವುದು ಎಂದು ಬಸ್ತಾರ್ ವಲಯದ ಐಜಿಪಿ ಸುಂದರ್ರಾಜ್ ಹೇಳಿದರು.</p><p>‘ಇದು ‘ಕೆಂಪು ಭಯೋತ್ಪಾದನೆ’ಯನ್ನು ಕೊನೆಗೊಳಿಸುವ ಹೋರಾಟದ ಯಶಸ್ಸನ್ನು ಒತ್ತಿ ಹೇಳುತ್ತದೆ ಹಾಗೂ ಶಾಂತಿ ಮತ್ತು ಅಭಿವೃದ್ಧಿಯನ್ನು ಸಾರುತ್ತದೆ. ದಶಕಗಳಿಂದ ಈ ಗ್ರಾಮಗಳಲ್ಲಿ ಯಾವುದೇ ರಾಷ್ಟ್ರೀಯ ಹಬ್ಬಗಳನ್ನು ಆಚರಿಸಲಾಗಿಲ್ಲ. ಇದೀಗ ಇವು ಪ್ರಜಾಪ್ರಭುತ್ವ ಹಾಗೂ ಸಾಂವಿಧಾನಿಕ ಚೌಕಟ್ಟಿನೊಳಗೆ ಸಕ್ರಿಯವಾಗಲಿವೆ’ ಎಂದರು.</p><p>ಭದ್ರತಾ ಪಡೆಗಳ ನಿರಂತರ ಪ್ರಯತ್ನ ಹಾಗೂ ಸ್ಥಳೀಯರ ಸಹಕಾರದಿಂದ ಸಕಾರಾತ್ಮಕ ಪರಿವರ್ತನೆಯು ಸಾಧ್ಯವಾಗಿದೆ. ಕಳೆದ ವರ್ಷ, 13 ಗ್ರಾಮಗಳಲ್ಲಿ ಆಗಸ್ಟ್ 15ರಂದು ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಇದರೊಂದಿಗೆ ಒಟ್ಟು 54 ಗ್ರಾಮಗಳಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆಯನ್ನು ಪ್ರಾರಂಭಿಸಲಾಗಿದೆ.</p><p>41 ಗ್ರಾಮಗಳ ಪೈಕಿ, 13 ಬಿಜಾಪುರ, 18 ನಾರಾಯಣಪುರ ಹಾಗೂ 10 ಗ್ರಾಮಗಳು ಸುಕ್ಮಾ ಜಿಲ್ಲೆಯಲ್ಲಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಪುರ</strong>: ಛತ್ತೀಸಗಢದ ಬಸ್ತಾರ್ ಪ್ರದೇಶದಲ್ಲಿ ನಕ್ಸಲರಿಂದ ಮುಕ್ತಗೊಂಡಿರುವ 41 ಹಳ್ಳಿಗಳಲ್ಲಿ ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವ ಆಚರಿಸಲಾಗುತ್ತಿದೆ. ಈ ಮೂಲಕ ಮೊದಲ ಬಾರಿಗೆ ಈ ಗ್ರಾಮಗಳಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಲಾಗುವುದು ಎಂದು ಬಸ್ತಾರ್ ವಲಯದ ಐಜಿಪಿ ಸುಂದರ್ರಾಜ್ ಹೇಳಿದರು.</p><p>‘ಇದು ‘ಕೆಂಪು ಭಯೋತ್ಪಾದನೆ’ಯನ್ನು ಕೊನೆಗೊಳಿಸುವ ಹೋರಾಟದ ಯಶಸ್ಸನ್ನು ಒತ್ತಿ ಹೇಳುತ್ತದೆ ಹಾಗೂ ಶಾಂತಿ ಮತ್ತು ಅಭಿವೃದ್ಧಿಯನ್ನು ಸಾರುತ್ತದೆ. ದಶಕಗಳಿಂದ ಈ ಗ್ರಾಮಗಳಲ್ಲಿ ಯಾವುದೇ ರಾಷ್ಟ್ರೀಯ ಹಬ್ಬಗಳನ್ನು ಆಚರಿಸಲಾಗಿಲ್ಲ. ಇದೀಗ ಇವು ಪ್ರಜಾಪ್ರಭುತ್ವ ಹಾಗೂ ಸಾಂವಿಧಾನಿಕ ಚೌಕಟ್ಟಿನೊಳಗೆ ಸಕ್ರಿಯವಾಗಲಿವೆ’ ಎಂದರು.</p><p>ಭದ್ರತಾ ಪಡೆಗಳ ನಿರಂತರ ಪ್ರಯತ್ನ ಹಾಗೂ ಸ್ಥಳೀಯರ ಸಹಕಾರದಿಂದ ಸಕಾರಾತ್ಮಕ ಪರಿವರ್ತನೆಯು ಸಾಧ್ಯವಾಗಿದೆ. ಕಳೆದ ವರ್ಷ, 13 ಗ್ರಾಮಗಳಲ್ಲಿ ಆಗಸ್ಟ್ 15ರಂದು ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಇದರೊಂದಿಗೆ ಒಟ್ಟು 54 ಗ್ರಾಮಗಳಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆಯನ್ನು ಪ್ರಾರಂಭಿಸಲಾಗಿದೆ.</p><p>41 ಗ್ರಾಮಗಳ ಪೈಕಿ, 13 ಬಿಜಾಪುರ, 18 ನಾರಾಯಣಪುರ ಹಾಗೂ 10 ಗ್ರಾಮಗಳು ಸುಕ್ಮಾ ಜಿಲ್ಲೆಯಲ್ಲಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>