<p><strong>ನೋಯ್ಡಾ:</strong> ಇಲ್ಲಿನ ಶಾರದಾ ವಿಶ್ವವಿದ್ಯಾಲಯದ ಬಿಡಿಎಸ್ (ಡೆಂಟಲ್ ಸರ್ಜರಿ) ವಿದ್ಯಾರ್ಥಿನಿ ಹಾಸ್ಟೆಲ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. </p><p>ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಗುರುಗ್ರಾಮದ ಜ್ಯೋತಿ ಶರ್ಮಾ (20) ಎಂದು ಗುರುತಿಸಲಾಗಿದೆ. </p><p>ಶುಕ್ರವಾರ ರಾತ್ರಿ ಡೆತ್ನೋಟ್ ಬರದಿಟ್ಟು ಹಾಸ್ಟೆಲ್ ಕೊಠಡಿಯಲ್ಲಿ ನೇಣುಬಿಗಿದುಕೊಂಡು ಜ್ಯೋತಿ ಶರ್ಮಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಪ್ರಾಧ್ಯಾಪಕರಾದ ಮಹೇಂದರ್ ಮತ್ತು ಶೈರಿ ಎಂಬುವರು ನನಗೆ ಮಾನಸಿಕ ಕಿರುಕುಳ ನೀಡಿ ಅವಮಾನ ಮಾಡಿದ್ದಾರೆ, ಇದರಿಂದ ನೊಂದು ನಾನು ಈ ನಿರ್ಧಾರ ತೆಗೆದುಕೊಂಡಿದ್ದೇನೆ. ಇವರನ್ನು ಜೈಲಿಗೆ ಕಳುಹಿಸಬೇಕು ಎಂದು ಜ್ಯೋತಿ ಶರ್ಮಾ ಪತ್ರದಲ್ಲಿ ಬರೆದಿದ್ದಾರೆ. </p><p>ಜ್ಯೋತಿ ಆತ್ಮಹತ್ಯೆ ವಿಷಯ ತಿಳಿಯುತ್ತಿದ್ದಂತೆ ವಿಶ್ವವಿದ್ಯಾಲಯದ ಆವರಣದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಆಡಳಿತ ಮಂಡಳಿ ಆ ಇಬ್ಬರು ಪ್ರಾಧ್ಯಾಪಕರನ್ನು ಅಮಾನತು ಮಾಡಿದೆ. ಘಟನೆ ಕುರಿತಂತೆ ತನಿಖೆ ಮಾಡಲು ಉನ್ನತ ಮಟ್ಟದ ವಿಚಾರಣಾ ಸಮಿತಿಯನ್ನು ರಚಿಸಲಾಗಿದೆ. ಹಾಗೂ ಪೊಲೀಸರ ತನಿಖೆಗೆ ಸಹಕಾರ ನೀಡುವುದಾಗಿ ಆಡಳಿತ ಮಂಡಳಿ ತಿಳಿಸಿದೆ. </p><p>ಗೌತಮ ಬುದ್ಧ ನಗರದ ನಾಲೆಡ್ಜ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೋಯ್ಡಾ:</strong> ಇಲ್ಲಿನ ಶಾರದಾ ವಿಶ್ವವಿದ್ಯಾಲಯದ ಬಿಡಿಎಸ್ (ಡೆಂಟಲ್ ಸರ್ಜರಿ) ವಿದ್ಯಾರ್ಥಿನಿ ಹಾಸ್ಟೆಲ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. </p><p>ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಗುರುಗ್ರಾಮದ ಜ್ಯೋತಿ ಶರ್ಮಾ (20) ಎಂದು ಗುರುತಿಸಲಾಗಿದೆ. </p><p>ಶುಕ್ರವಾರ ರಾತ್ರಿ ಡೆತ್ನೋಟ್ ಬರದಿಟ್ಟು ಹಾಸ್ಟೆಲ್ ಕೊಠಡಿಯಲ್ಲಿ ನೇಣುಬಿಗಿದುಕೊಂಡು ಜ್ಯೋತಿ ಶರ್ಮಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಪ್ರಾಧ್ಯಾಪಕರಾದ ಮಹೇಂದರ್ ಮತ್ತು ಶೈರಿ ಎಂಬುವರು ನನಗೆ ಮಾನಸಿಕ ಕಿರುಕುಳ ನೀಡಿ ಅವಮಾನ ಮಾಡಿದ್ದಾರೆ, ಇದರಿಂದ ನೊಂದು ನಾನು ಈ ನಿರ್ಧಾರ ತೆಗೆದುಕೊಂಡಿದ್ದೇನೆ. ಇವರನ್ನು ಜೈಲಿಗೆ ಕಳುಹಿಸಬೇಕು ಎಂದು ಜ್ಯೋತಿ ಶರ್ಮಾ ಪತ್ರದಲ್ಲಿ ಬರೆದಿದ್ದಾರೆ. </p><p>ಜ್ಯೋತಿ ಆತ್ಮಹತ್ಯೆ ವಿಷಯ ತಿಳಿಯುತ್ತಿದ್ದಂತೆ ವಿಶ್ವವಿದ್ಯಾಲಯದ ಆವರಣದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಆಡಳಿತ ಮಂಡಳಿ ಆ ಇಬ್ಬರು ಪ್ರಾಧ್ಯಾಪಕರನ್ನು ಅಮಾನತು ಮಾಡಿದೆ. ಘಟನೆ ಕುರಿತಂತೆ ತನಿಖೆ ಮಾಡಲು ಉನ್ನತ ಮಟ್ಟದ ವಿಚಾರಣಾ ಸಮಿತಿಯನ್ನು ರಚಿಸಲಾಗಿದೆ. ಹಾಗೂ ಪೊಲೀಸರ ತನಿಖೆಗೆ ಸಹಕಾರ ನೀಡುವುದಾಗಿ ಆಡಳಿತ ಮಂಡಳಿ ತಿಳಿಸಿದೆ. </p><p>ಗೌತಮ ಬುದ್ಧ ನಗರದ ನಾಲೆಡ್ಜ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>