<p><strong>ಕೊಚ್ಚಿ</strong>: ದೇಶದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಾಧ್ಯಮದವರು ಜಾಗರೂಕರಾಗಿರಬೇಕು ಮತ್ತು ರಾಷ್ಟ್ರದ ಸಮಗ್ರತೆಗೆ ಧಕ್ಕೆ ತರುವಂತಹ ಸುದ್ದಿಗಳನ್ನು ಪ್ರಸಾರ ಮಾಡುವ ಮುನ್ನ ಎಚ್ಚರಿಕೆ ವಹಿಸಬೇಕು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ.</p>.<p>ಮಲಯಾಳಂನ ಖ್ಯಾತ ದಿನಪತ್ರಿಕೆ ‘ಮಾತೃಭೂಮಿ’ಯ ಶತಮಾನೋತ್ಸವ ಸಮಾರಂಭದಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ‘ದೇಶದ ಒಳಗೆ ಮತ್ತು ಹೊರಗೆ ನೀಡಲಾಗುವ ತರ್ಕಬದ್ಧವಲ್ಲದ ಹೇಳಿಕೆಗಳಿಂದ ದೇಶದ ಪ್ರಜಾಪ್ರಭುತ್ವವನ್ನು ನಾಶ ಮಾಡಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ.</p>.<p>‘ಭಾರತದ ಸಮಗ್ರತೆಗೆ ಧಕ್ಕೆ ತರುವಂತಹ ಧ್ವನಿಗಳು ಮತ್ತು ಸುದ್ದಿಗಳಿಗೆ ಉದ್ದೇಶಪೂರ್ವಕವಾಗಿ ಅಥವಾ ಉದ್ದೇಶಪೂರ್ವಕವಲ್ಲದೆಯೂ ಅವಕಾಶ ನೀಡದೆ ಮಾಧ್ಯಮದವರು ಜಾಗರೂಕರಾಗಿರಬೇಕೆಂದು ನಾನು ಒತ್ತಾಯಿಸುತ್ತೇನೆ’ ಎಂದಿದ್ದಾರೆ.</p>.<p>ಸತ್ಯ ಯಾವಾಗಲೂ ಪವಿತ್ರವಾಗಿರುತ್ತದೆ ಮತ್ತು ಹೇಳಿಕೆಗಳು ಯಾವಾಗಲೂ ಮುಕ್ತವಾಗಿರಬೇಕು ಎಂದು ತಿಳಿಸಿದ್ದಾರೆ.</p>.<p>ಇವನ್ನೂ ಓದಿ: <a href="https://www.prajavani.net/india-news/three-mowed-down-by-rajdhani-express-in-jharkhand-1024603.html" itemprop="url">ಜಾರ್ಖಂಡ್ | ಹಳಿಗಳನ್ನು ದಾಟುತ್ತಿದ್ದ ವೇಳೆ ರೈಲಿಗೆ ಸಿಲುಕಿ ಮೂವರ ದುರ್ಮರಣ </a></p>.<p> <a href="https://www.prajavani.net/india-news/trumps-facebook-youtube-handles-restored-after-over-two-year-ban-1024569.html" itemprop="url">ಫೇಸ್ಬುಕ್ ಖಾತೆ, ಯೂಟ್ಯೂಬ್ ಚಾನಲ್ ನಿರ್ಬಂಧ ತೆರವು: ‘I'M BACK!’ ಎಂದ ಟ್ರಂಪ್ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಚ್ಚಿ</strong>: ದೇಶದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಾಧ್ಯಮದವರು ಜಾಗರೂಕರಾಗಿರಬೇಕು ಮತ್ತು ರಾಷ್ಟ್ರದ ಸಮಗ್ರತೆಗೆ ಧಕ್ಕೆ ತರುವಂತಹ ಸುದ್ದಿಗಳನ್ನು ಪ್ರಸಾರ ಮಾಡುವ ಮುನ್ನ ಎಚ್ಚರಿಕೆ ವಹಿಸಬೇಕು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ.</p>.<p>ಮಲಯಾಳಂನ ಖ್ಯಾತ ದಿನಪತ್ರಿಕೆ ‘ಮಾತೃಭೂಮಿ’ಯ ಶತಮಾನೋತ್ಸವ ಸಮಾರಂಭದಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ‘ದೇಶದ ಒಳಗೆ ಮತ್ತು ಹೊರಗೆ ನೀಡಲಾಗುವ ತರ್ಕಬದ್ಧವಲ್ಲದ ಹೇಳಿಕೆಗಳಿಂದ ದೇಶದ ಪ್ರಜಾಪ್ರಭುತ್ವವನ್ನು ನಾಶ ಮಾಡಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ.</p>.<p>‘ಭಾರತದ ಸಮಗ್ರತೆಗೆ ಧಕ್ಕೆ ತರುವಂತಹ ಧ್ವನಿಗಳು ಮತ್ತು ಸುದ್ದಿಗಳಿಗೆ ಉದ್ದೇಶಪೂರ್ವಕವಾಗಿ ಅಥವಾ ಉದ್ದೇಶಪೂರ್ವಕವಲ್ಲದೆಯೂ ಅವಕಾಶ ನೀಡದೆ ಮಾಧ್ಯಮದವರು ಜಾಗರೂಕರಾಗಿರಬೇಕೆಂದು ನಾನು ಒತ್ತಾಯಿಸುತ್ತೇನೆ’ ಎಂದಿದ್ದಾರೆ.</p>.<p>ಸತ್ಯ ಯಾವಾಗಲೂ ಪವಿತ್ರವಾಗಿರುತ್ತದೆ ಮತ್ತು ಹೇಳಿಕೆಗಳು ಯಾವಾಗಲೂ ಮುಕ್ತವಾಗಿರಬೇಕು ಎಂದು ತಿಳಿಸಿದ್ದಾರೆ.</p>.<p>ಇವನ್ನೂ ಓದಿ: <a href="https://www.prajavani.net/india-news/three-mowed-down-by-rajdhani-express-in-jharkhand-1024603.html" itemprop="url">ಜಾರ್ಖಂಡ್ | ಹಳಿಗಳನ್ನು ದಾಟುತ್ತಿದ್ದ ವೇಳೆ ರೈಲಿಗೆ ಸಿಲುಕಿ ಮೂವರ ದುರ್ಮರಣ </a></p>.<p> <a href="https://www.prajavani.net/india-news/trumps-facebook-youtube-handles-restored-after-over-two-year-ban-1024569.html" itemprop="url">ಫೇಸ್ಬುಕ್ ಖಾತೆ, ಯೂಟ್ಯೂಬ್ ಚಾನಲ್ ನಿರ್ಬಂಧ ತೆರವು: ‘I'M BACK!’ ಎಂದ ಟ್ರಂಪ್ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>