<p><strong>ನವದೆಹಲಿ:</strong> ಉಡುಗೊರೆಗಳು, ಆತಿಥ್ಯ ಮತ್ತು ಉಚಿತ ಪ್ರಚಾರ ಸೇರಿದಂತೆ ವಿವಿಧ ಬಗೆಯ ಆಮಿಷಗಳನ್ನು ತಿರಸ್ಕರಿಸಬೇಕು ಎಂದು ನಾಗರಿಕ ಸೇವೆಗೆ ಇತ್ತೀಚೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಸ್ಸೂರಿ ಮೂಲದ ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಆಡಳಿತ ಅಕಾಡೆಮಿ ಶುಕ್ರವಾರ ಮಾರ್ಗಸೂಚಿ ಹೊರಡಿಸಿದೆ.</p>.<p>‘ಸಾಮಾಜಿಕ ಮಾಧ್ಯಮಗಳಲ್ಲಿ ಮಾಡುವ ಪೋಸ್ಟ್ಗಳು ತಮ್ಮ ವ್ಯಕ್ತಿತ್ವವನ್ನು ಪ್ರತಿಬಿಂಬಿಸುತ್ತದೆ. ದೇಶದ ನಾಗರಿಕ ಸೇವಕರಾಗಿ ಆಯ್ಕೆಯಾಗಿರುವ ನಿಮ್ಮಗಳ ನಡವಳಿಕೆಯು ನಿರಂತರವಾಗಿ ಸಾರ್ವಜನಿಕರ ಪರಿಶೀಲನೆಗೆ ಒಳಪಟ್ಟಿರುತ್ತದೆ. ಹೀಗಾಗಿ ಈ ನಿಟ್ಟಿನಲ್ಲಿ ಎಚ್ಚರವಹಿಸಿರಿ’ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. </p>.<p>‘ಸಾರ್ವಜನಿಕರು, ಜನಪ್ರತಿನಿಧಿಗಳು, ಕಾರ್ಪೊರೇಟ್ ಸಂಸ್ಥೆಗಳು, ನಾಗರಿಕ ಸಮಾಜ ಸಂಸ್ಥೆಗಳು, ಸರ್ಕಾರಿ ಸಿಬ್ಬಂದಿ, ಇತರ ಗಣ್ಯರು ಮತ್ತು ಸಮಾಜದ ದುರ್ಬಲ ವರ್ಗಗಳ ಜತೆ ನಿಮ್ಮ ವೈಯಕ್ತಿಕ, ಅಧಿಕೃತ ಮತ್ತು ಸಾಮಾಜಿಕ ಸಂಪರ್ಕವು ವಿನಯಶೀಲ, ಗೌರವಾನ್ವಿತ ಮತ್ತು ಘನತೆಯಿಂದ ಕೂಡಿರಬೇಕು’ ಎಂದು ತಿಳಿಸಲಾಗಿದೆ.</p>.<p>2024ರ ನಾಗರಿಕ ಸೇವಾ ಪರೀಕ್ಷೆಯ ಮೂಲಕ ಆಯ್ಕೆಯಾದ ಅಭ್ಯರ್ಥಿಗಳನ್ನು ಉದ್ದೇಶಿಸಿ ಈ ಮಾರ್ಗಸೂಚಿ ಪ್ರಕಟಿಸಲಾಗಿದೆ. ಮಂಗಳವಾರ ಪ್ರಕಟವಾದ ಫಲಿತಾಂಶದಲ್ಲಿ 1,009 ಅಭ್ಯರ್ಥಿಗಳು ಆಯ್ಕೆಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಉಡುಗೊರೆಗಳು, ಆತಿಥ್ಯ ಮತ್ತು ಉಚಿತ ಪ್ರಚಾರ ಸೇರಿದಂತೆ ವಿವಿಧ ಬಗೆಯ ಆಮಿಷಗಳನ್ನು ತಿರಸ್ಕರಿಸಬೇಕು ಎಂದು ನಾಗರಿಕ ಸೇವೆಗೆ ಇತ್ತೀಚೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಸ್ಸೂರಿ ಮೂಲದ ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಆಡಳಿತ ಅಕಾಡೆಮಿ ಶುಕ್ರವಾರ ಮಾರ್ಗಸೂಚಿ ಹೊರಡಿಸಿದೆ.</p>.<p>‘ಸಾಮಾಜಿಕ ಮಾಧ್ಯಮಗಳಲ್ಲಿ ಮಾಡುವ ಪೋಸ್ಟ್ಗಳು ತಮ್ಮ ವ್ಯಕ್ತಿತ್ವವನ್ನು ಪ್ರತಿಬಿಂಬಿಸುತ್ತದೆ. ದೇಶದ ನಾಗರಿಕ ಸೇವಕರಾಗಿ ಆಯ್ಕೆಯಾಗಿರುವ ನಿಮ್ಮಗಳ ನಡವಳಿಕೆಯು ನಿರಂತರವಾಗಿ ಸಾರ್ವಜನಿಕರ ಪರಿಶೀಲನೆಗೆ ಒಳಪಟ್ಟಿರುತ್ತದೆ. ಹೀಗಾಗಿ ಈ ನಿಟ್ಟಿನಲ್ಲಿ ಎಚ್ಚರವಹಿಸಿರಿ’ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. </p>.<p>‘ಸಾರ್ವಜನಿಕರು, ಜನಪ್ರತಿನಿಧಿಗಳು, ಕಾರ್ಪೊರೇಟ್ ಸಂಸ್ಥೆಗಳು, ನಾಗರಿಕ ಸಮಾಜ ಸಂಸ್ಥೆಗಳು, ಸರ್ಕಾರಿ ಸಿಬ್ಬಂದಿ, ಇತರ ಗಣ್ಯರು ಮತ್ತು ಸಮಾಜದ ದುರ್ಬಲ ವರ್ಗಗಳ ಜತೆ ನಿಮ್ಮ ವೈಯಕ್ತಿಕ, ಅಧಿಕೃತ ಮತ್ತು ಸಾಮಾಜಿಕ ಸಂಪರ್ಕವು ವಿನಯಶೀಲ, ಗೌರವಾನ್ವಿತ ಮತ್ತು ಘನತೆಯಿಂದ ಕೂಡಿರಬೇಕು’ ಎಂದು ತಿಳಿಸಲಾಗಿದೆ.</p>.<p>2024ರ ನಾಗರಿಕ ಸೇವಾ ಪರೀಕ್ಷೆಯ ಮೂಲಕ ಆಯ್ಕೆಯಾದ ಅಭ್ಯರ್ಥಿಗಳನ್ನು ಉದ್ದೇಶಿಸಿ ಈ ಮಾರ್ಗಸೂಚಿ ಪ್ರಕಟಿಸಲಾಗಿದೆ. ಮಂಗಳವಾರ ಪ್ರಕಟವಾದ ಫಲಿತಾಂಶದಲ್ಲಿ 1,009 ಅಭ್ಯರ್ಥಿಗಳು ಆಯ್ಕೆಯಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>