<p><strong>ಶ್ರೀನಗರ</strong>: ಜಮ್ಮು ಮತ್ತು ಕಾಶ್ಮೀರದ ಕಾರ್ಗಿಲ್ ಜಿಲ್ಲೆಯ ದ್ರಾಸ್ ಪ್ರದೇಶದಲ್ಲಿ ಕಂದು ಬಣ್ಣದ ಕರಡಿಯೊಂದು ಜನರು ಕಲ್ಲು ತೂರಾಟ ನಡೆಸಿದ ಪರಿಣಾಮ ಬೆಟ್ಟ ಹತ್ತಿ ನಂತರ ಹೊಳೆಗೆ ಜಾರಿ ಬೀಳುತ್ತಿರುವ ದೃಶ್ಯವಿರುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ.</p>.<p>ವಿಡಿಯೊ ಹರಿದಾಡಿದ ಬಳಿಕ ಎಚ್ಚೆತ್ತ ಅಧಿಕಾರಿಗಳು ಕರಡಿಯ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ.</p>.<p>ಎಂಟು ಸೆಕೆಂಡ್ಗಳ ಈ ವಿಡಿಯೊವನ್ನು ಕಾಶ್ಮೀರ ಪ್ರವಾಸೋದ್ಯಮ ಇಲಾಖೆಯ ಮಾಜಿ ನಿರ್ದೇಶಕ ಮೆಹಮೂದ್ ಶಹಾ ಟ್ವಿಟರ್ನಲ್ಲಿ ಹಂಚಿಕೊಂಡಿದ್ದರು. ಗ್ರಾಮಸ್ಥರು ಅಟ್ಟಾಡಿಸಿಕೊಂಡು ಬರುವಾಗ ಕರಡಿಯು ಕಡಿದಾದ ಬೆಟ್ಟ ಹತ್ತಲು ಪ್ರಯತ್ನಿಸುತ್ತದೆ. ಈ ವೇಳೆ ಕೆಲವರು ಕಲ್ಲು ತೂರಾಟ ನಡೆಸಿದ್ದಾರೆ. ನಿಯಂತ್ರಣ ತಪ್ಪಿದ ಕರಡಿ ನದಿಗೆ ಉರುತ್ತಿರುವ ದೃಶ್ಯ ವಿಡಿಯೊದಲ್ಲಿ ದಾಖಲಾಗಿದೆ. ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ ಬಳಿಕ ಗ್ರಾಮಸ್ಥರ ನಡೆಗೆ ಟೀಕೆ ವ್ಯಕ್ತವಾಗಿತ್ತು.</p>.<p>ಕರಡಿಯ ಮೇಲೆ ಕಲ್ಲೆಸೆದವರನ್ನು ಗುರುತಿಸಿ ಬಂಧಿಸಬೇಕು ಎಂದೂ ಹಲವರು ಆಗ್ರಹಿಸಿದ್ದರು.ಈ ಕುರಿತು ತನಿಖೆ ನಡೆಸಲು ಕಾರ್ಗಿಲ್ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ</strong>: ಜಮ್ಮು ಮತ್ತು ಕಾಶ್ಮೀರದ ಕಾರ್ಗಿಲ್ ಜಿಲ್ಲೆಯ ದ್ರಾಸ್ ಪ್ರದೇಶದಲ್ಲಿ ಕಂದು ಬಣ್ಣದ ಕರಡಿಯೊಂದು ಜನರು ಕಲ್ಲು ತೂರಾಟ ನಡೆಸಿದ ಪರಿಣಾಮ ಬೆಟ್ಟ ಹತ್ತಿ ನಂತರ ಹೊಳೆಗೆ ಜಾರಿ ಬೀಳುತ್ತಿರುವ ದೃಶ್ಯವಿರುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ.</p>.<p>ವಿಡಿಯೊ ಹರಿದಾಡಿದ ಬಳಿಕ ಎಚ್ಚೆತ್ತ ಅಧಿಕಾರಿಗಳು ಕರಡಿಯ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ.</p>.<p>ಎಂಟು ಸೆಕೆಂಡ್ಗಳ ಈ ವಿಡಿಯೊವನ್ನು ಕಾಶ್ಮೀರ ಪ್ರವಾಸೋದ್ಯಮ ಇಲಾಖೆಯ ಮಾಜಿ ನಿರ್ದೇಶಕ ಮೆಹಮೂದ್ ಶಹಾ ಟ್ವಿಟರ್ನಲ್ಲಿ ಹಂಚಿಕೊಂಡಿದ್ದರು. ಗ್ರಾಮಸ್ಥರು ಅಟ್ಟಾಡಿಸಿಕೊಂಡು ಬರುವಾಗ ಕರಡಿಯು ಕಡಿದಾದ ಬೆಟ್ಟ ಹತ್ತಲು ಪ್ರಯತ್ನಿಸುತ್ತದೆ. ಈ ವೇಳೆ ಕೆಲವರು ಕಲ್ಲು ತೂರಾಟ ನಡೆಸಿದ್ದಾರೆ. ನಿಯಂತ್ರಣ ತಪ್ಪಿದ ಕರಡಿ ನದಿಗೆ ಉರುತ್ತಿರುವ ದೃಶ್ಯ ವಿಡಿಯೊದಲ್ಲಿ ದಾಖಲಾಗಿದೆ. ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ ಬಳಿಕ ಗ್ರಾಮಸ್ಥರ ನಡೆಗೆ ಟೀಕೆ ವ್ಯಕ್ತವಾಗಿತ್ತು.</p>.<p>ಕರಡಿಯ ಮೇಲೆ ಕಲ್ಲೆಸೆದವರನ್ನು ಗುರುತಿಸಿ ಬಂಧಿಸಬೇಕು ಎಂದೂ ಹಲವರು ಆಗ್ರಹಿಸಿದ್ದರು.ಈ ಕುರಿತು ತನಿಖೆ ನಡೆಸಲು ಕಾರ್ಗಿಲ್ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>