ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಲಿತ ವ್ಯಕ್ತಿಗೆ ಥಳಿಸಿ: ಲಜ್ಜೆಗೇಡಿತನದ ಕೃತ್ಯ ಎಂದು ಕಾಂಗ್ರೆಸ್‌ ಆಕ್ರೋಶ

Published 11 ಜುಲೈ 2023, 22:10 IST
Last Updated 11 ಜುಲೈ 2023, 22:10 IST
ಅಕ್ಷರ ಗಾತ್ರ

ಲಖನೌ: ‘ಸೋನ್‌ಭದ್ರ ಜಿಲ್ಲೆಯಲ್ಲಿ ದಲಿತ ವ್ಯಕ್ತಿಗೆ ಥಳಿಸಿ, ಚಪ್ಪಲಿ ನೆಕ್ಕುವಂತೆ ಬಲವಂತಪಡಿಸಿದ ಘಟನೆ ಲಜ್ಜೆಗೇಡಿತನದ್ದು. ಆರೋಪಿ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ (‌ಎನ್‌ಎಸ್‌ಎ) ಮತ್ತು ಗ್ಯಾಂಗಸ್ಟರ್‌ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಬೇಕು’ ಎಂದು ಉತ್ತರ ಪ್ರದೇಶದ ಕಾಂಗ್ರೆಸ್‌ ಮುಖಂಡ ಪಿ.ಎಲ್.ಪುನಿಯಾ ಮಂಗಳವಾರ ಒತ್ತಾಯಿಸಿದ್ದಾರೆ.

‘ಮನುವಾದಿ ಮನಸ್ಥಿತಿಯನ್ನು ಬಿಂಬಿಸುವ ಘಟನೆ ಸರ್ಕಾರಿ ನೌಕರನಿಂದಲೇ ನಡೆದಿದ್ದು, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು’ ಎಂದು ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗದ ಮಾಜಿ ಅಧ್ಯಕ್ಷರೂ ಆಗಿರುವ ಪುನಿಯಾ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. 

ಸಂತ್ರಸ್ತನ ಕುಟುಂಬಕ್ಕೆ ಆರ್ಥಿಕ ಸಹಕಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT